ಬೇಡಿಕೆ ಈಡೇರಿಕೆಗಾಗಿ ಗಜಪಯಣದ ದಿನ ಪ್ರತಿಭಟನೆ


Team Udayavani, Aug 9, 2017, 12:01 PM IST

mys4.jpg

ಮೈಸೂರು: ನಾಗಾಪುರ ಪುನರ್‌ವಸತಿ ಕೇಂದ್ರದ 280 ಕುಟುಂಬಗಳಿಗೆ ನೀಡಲಾಗಿರುವ 731 ಹೆಕ್ಟೇರ್‌ ಪ್ರದೇಶವನ್ನು ಒಂದೇ ಗ್ರಾಪಂ ವ್ಯಾಪ್ತಿಗೆ ಸೇರಿಸಿ, ಒಂದೇ ಸರ್ವೆ ನಂಬರ್‌ ನೀಡುವುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಆ.12ರಂದು ನಡೆಯುವ ದಸರಾ ಗಜಪಯಣದ ವೇಳೆ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಆದಿವಾಸಿ ಹೋರಾಟಗಾರ ಎಂ.ಬಿ.ಪ್ರಭು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹುಲಿ ಯೋಜನೆ ಜಾರಿ ಹಿನ್ನೆಲೆಯಲ್ಲಿ 1999ರಲ್ಲಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ 280 ಗಿರಿಜನ ಕುಟುಂಬಗಳ ಪುನರ್ವಸತಿಗಾಗಿ 731 ಹೆಕ್ಟೇರ್‌ ಪ್ರದೇಶವನ್ನು ಹುಣಸೂರು ತಾಲೂಕಿನ ನಾಗಾಪುರದಲ್ಲಿ ಮಂಜೂರು ಮಾಡಲಾಗಿತ್ತು. ಅದರಂತೆ ಪ್ರತಿ ಕುಟುಂಬಕ್ಕೆ 5 ಎಕರೆ ಕೃಷಿ ಜಮೀನು ಹಾಗೂ 3 ಎಕರೆ ಸೌದೆ ಸಂಗ್ರಹವನ, 100 ಎಕರೆ ಹುಲ್ಲುಗಾವಲನ್ನು ಸಾಮೂಹಿಕ ಒಡೆತನದಲ್ಲಿ ನೀಡಲಾಗಿತ್ತು.

ಆದರೆ ಮಂಜೂರಾದ ಭೂಮಿಯನ್ನು ಸಂರಕ್ಷಿಸಿ, ಸರ್ವೆ ನಡೆಸಿ ಫ‌ಲಾನುಭವಿಗಳಿಗೆ ನೀಡುವ ಬಗ್ಗೆ ಈವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಇದರ ಪರಿಣಾಮ 200 ಹೆಕ್ಟೇರ್‌ ಭೂಮಿಯನ್ನು ಸ್ಥಳೀಯ ಪ್ರಭಾವಿಗಳು ಹಾಗೂ ಟಿಬೆಟಿಯನ್ನರು ಅತಿಕ್ರಮಿಸಿಕೊಂಡಿದ್ದು, ಇದರಿಂದಾಗಿ ಪುನರ್ವಸತಿಗೊಂಡ ಆದಿವಾಸಿಗಳಿಗೆ ಮಂಜೂರಾಗಿರುವ ಭೂಮಿ ಪೂರ್ಣ ಪ್ರಮಾಣದಲ್ಲಿ ಲಭಿಸದೆ ತೊಂದರೆ ಅನುಭವಿಸುವಂತಾಗಿದೆ. ಈ ಪೈಕಿ ವೀರನಹೊಸಹಳ್ಳಿ ಮತ್ತು ನಾಗಾಪುರ ಹಾಡಿಯಲ್ಲಿ 19 ಕುಟುಂಬಗಳು ಭೂಮಿ ಸಿಗದೆ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು.

ಪುನರ್ವಸತಿಗೊಂಡ ಆದಿವಾಸಿಗಳು ತಮ್ಮ ನ್ಯಾಯಯುತ ಸವಲತ್ತುಗಳನ್ನು ಪಡೆಯಲು 17 ವರ್ಷದಿಂದ ಸಾಕಷ್ಟು ಹೋರಾಟ ನಡೆಸುತ್ತಿದ್ದರು, ಯಾವುದೇ ಪ್ರಯೋಜನವಾಗಿಲ್ಲ, ಇತ್ತೀಚೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಕಂದಾಯ ಅದಾಲತ್‌ನಲ್ಲಿ ಆದಿವಾಸಿಗಳ ಬೇಡಿಕೆಗಳನ್ನು ಮುಂದಿಡಲಾಗಿತ್ತಾದರೂ ಸಭೆಯಲ್ಲಿ ಯಾವುದೇ ಪರಿಹಾರ ದೊರೆತಿಲ್ಲ. ಹೀಗಾಗಿ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ.

ಆದ್ದರಿಂದ ಸರ್ಕಾರ ಇತ್ತ ಗಮನವಹಿಸಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ 731 ಎಕ್ಟೇರ್‌ ಭೂಮಿಯನ್ನು ಅಳೆದು, ಪೂರ್ಣ ಪ್ರಮಾಣದಲ್ಲಿ ವಿತರಿಸಬೇಕು, ಪ್ರಭಾವಿಗಳು ಹಾಗೂ ಅಕ್ರಮವಾಗಿ ವಶದಲ್ಲಿಟ್ಟುಕೊಂಡಿರುವ ಭೂಮಿಯನ್ನು ಆದಿವಾಸಿಗಳಿಗೆ ನೀಡಬೇಕು, ಗಿರಿಜನರಿಗೆ ಪ್ರತ್ಯೇಕ ಉಪ ಬಜೆಟ್‌ ಮಂಡಿಸಬೇಕೆಂಬ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗುತ್ತಿದೆ. ಇದಕ್ಕಾಗಿ ಆ.12ರಂದು ಭೂಮಿ ವಂಚಿತ 19 ಕುಟುಂಬದ ಸದಸ್ಯರು ದಸರಾ ಮಹೋತ್ಸವದ ಖ್ಯಾತಿಗೆ ಧಕ್ಕೆ ಉಂಟಾಗದ ರೀತಿಯಲ್ಲಿ ದಸರಾ ಗಜಪಯಣದ ವೇಳೆ ನಾಗಾಪುರಹಾಡಿ ಬಳಿ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ನಾಗಾಪುರ ಹಾಡಿಯ ಗಿರಿಜನ ಹೋರಾಟಗಾರರ ಜೆ.ಕೆ.ತಿಮ್ಮಯ್ಯ, ನಾಗಾಪುರ ಗಿರಿಜನ ವ್ಯವಸಾಯ ಆಂದೋಲನದ ಜೆ.ಎ.ಹರೀಶ್‌, ಶಂಕರ್‌ ಹಾಜರಿದ್ದರು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.