ಮತ ಮಾರಾಟಕ್ಕಿಲ್ಲ ಎಂದು ಜನಸಂಕಲ್ಪ ಮಾಡಬೇಕು :ಗಣಪತಿ ಸಚ್ಚಿದಾನಂದ ಶ್ರೀ

ನಾವು ಜನರೇ ಸರಿಯಿಲ್ಲ,ನಾವೇ ಲಂಚಕೊಡುವುದನ್ನು ಅಭ್ಯಾಸ ಮಾಡಿಸುತ್ತೇವೆ.

Team Udayavani, May 29, 2022, 2:20 PM IST

1-we-ew-rewr

ಮೈಸೂರು: ನಮ್ಮ ಮತ ಮಾರಾಟಕ್ಕಿಲ್ಲ ಎಂದು ಜನರೆಲ್ಲ ಸಂಕಲ್ಪ ಮಾಡಬೇಕೆಂದು ‌ಶ್ರೀ ಗಣಪತಿ ಸಚ್ಚಿದಾನಂದ ‌ಸ್ವಾಮೀಜಿಯವರು ನುಡಿದರು.

ಶ್ರೀಗಳ 80ನೇ ಜನ್ಮದಿನೋತ್ಸವದ ಭಾನುವಾರದ ಕಾರ್ಯಕ್ರಮದಲ್ಲಿ ಅನುಗ್ರಹ ಭಾಷಣ ಮಾಡಿದ ಶ್ರೀಗಳು, ನಮ್ಮ ದೇಶಕ್ಕೆ ಒಳ್ಳೆಯದಾಗಬೇಕಾದರೆ ಇಂದೇ ನಾವೆಲ್ಲ ಸಂಕಲ್ಪ ಮಾಡಬೇಕು ಎಂದು ತಿಳಿಸಿದರು.

ನಮ್ಮ ವೋಟನ್ನು ಮಾರುವುದಿಲ್ಲ,ಇದನ್ನು ಬೇರೆಯವರಿಗೂ ಹೇಳುತ್ತೇವೆ ಎಂಬ ಸಂಕಲ್ಪವನ್ನು ಸ್ವಾಮೀಜಿಯವರು ನಾದಮಂಟಪದಲ್ಲಿ ಸೇರಿದ್ದ ಎಲ್ಲರಿಂದ ಮಾಡಿಸಿದುದು ವಿಶೇಷವಾಗಿತ್ತು.

ನಾವು ಜನರೇ ಸರಿಯಿಲ್ಲ,ನಾವೇ ಲಂಚಕೊಡುವುದನ್ನು ಅಭ್ಯಾಸ ಮಾಡಿಸುತ್ತೇವೆ. ನಮ್ಮಿಂದ ಹತ್ತು ಸಾವಿರ ಪಡೆದವರು ನಂತರ ಇಪ್ಪತ್ತು ಸಾವಿರ ತೆಗೆದುಕೊಳ್ಳುತ್ತಾರೆ.ಅದರ ಹೊರೆ ನಮ್ಮ ಮೇಲೆಯೇ ಬೀಳುತ್ತದೆ ಎಂಬುದನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದು ಎಲ್ಲರಿಗೂ ತಿಳಿಹೇಳಿದರು.

ನಮ್ಮ ಹಾಗೂ ಸಮಾಜವನ್ನು ಉದ್ದಾರ ಮಾಡುವಂತಹ ಶಕ್ತಿಯುಳ್ಳವರನ್ನು ಆರಿಸಿ, ದೇಶವನ್ನು ನಾಶ ಮಾಡುವವರು ಜನರೇನೆ ಹಾಗಾಗಿ ಈಗಿನಿಂದಲೇ ಎಚ್ಚೆತ್ತಕೊಳ್ಳಬೇಕು ಎಂದು ಶ್ರೀಗಳು ತಿಳಿಸಿದರು.

ನಮ್ಮಲ್ಲಿರುವ ಕಾಮಕ್ರೋದಗಳನ್ನು ಹೊಡೆದು ಓಡಿಸಬೇಕು.ಅಜ್ಞಾನದಲ್ಲಿರುವವರು ಗುರು ಮುಖೇನ ಜ್ಞಾನ ಪಡೆದುಕೊಳ್ಳಬಹುದು.ಶ್ರೀ ದತ್ತಾತ್ರೇಯ ಎಲ್ಲಾರೀತಿಯಲ್ಲೂ ಜನರನ್ನು ಕಾಪಾಡುತ್ತಾನೆ ಎಂದು ತಿಳಿಸಿದರು.

ನನ್ನ ಜನ್ಮದಿನೋತ್ಸವದ ಈ ಸಂದರ್ಭದಲ್ಲಿ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ ಎಂದು ಶ್ರೀಗಳು ಹೇಳಿದರು.

ಆಖಿಲ ಕರ್ನಾಟಕ ಬ್ರಾಹ್ಮಣ ಸಭಾ,ವಿಪ್ರ ಜಗೃತ ವೇದಿಕೆ,ಹೊಯ್ಸಳ ಕರ್ನಾಟಕ ಸಂಘ ಸೇರಿದಂತೆ ಹಲವಾರು ಬ್ರಾಹ್ಮಣ ಸಮಾಜದ ಸದಸ್ಯರು ಗಣಪತಿ ಶ್ರೀಗಳಿಗೆ ಶುಭಕಾಮನೆ ಸಲ್ಲಿಸಿದರು.

ಇದೇ ವೇಳೆ ಪೌರಕಾರ್ಮಿಕ ಸಂಘದವರು, ನಾದ ಮಂಟಪಕ್ಕೆ ಸೇವೆ‌ಸಲ್ಲಿಸಿದವರು ಮತ್ತಿತರರಿಗೆ ವಸ್ತ್ರ ಪ್ರಸಾದ ನೀಡಲಾಯಿತು. ಇದೇ ವೇಳೆ ‌ಶ್ರೀಯವರ ಮಾತೃಶ್ರೀ ಯವರ ಊರು ಸೋಗಾಲದಿಂದ ಬಹಳಷ್ಟು ಮಂದಿ ಸ್ವಾಮೀಜಿಯವರ ದರುಶನ ಮಾಡಿದರು. ಇಂದು ಬೆಳಗಿನಿಂದ ಸ್ವಾಮೀಜಿಯವರ ದರ್ಶನ ಮಾಡಲು ಬಂದ ಪ್ರತಿಯೊಬ್ಬರಿಗೂ ವಸ್ತ್ರ ಪ್ರಸಾದವನ್ನು ಸ್ವಾಮೀಜಿಯವರು ನೀಡಿದುದು ವಿಶೇಷ.

ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ‌ಉಪಸ್ಥಿತರಿದ್ದರು.ಶ್ರೀ‌ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 80ನೇ‌ ಜನ್ಮ ದಿನೋತ್ಸವದ ಪ್ರಯುಕ್ತ ಇಂದು ಬೆಳಗ್ಗೆ ಶ್ರೀ ಚಕ್ರಪೂಜೆ,ಮಹಾ‌ ಸೌರಹೋಮ ನೆರವೇರಿಸಲಾಯಿತು.

ನಂತರ ಶ್ರೀಗಳಿಗೆ ಪಾದಪೂಜೆ ಹಾಗೂ ಭಕ್ತಾದಿಗಳಿಗೆ ದತ್ತಪಾದುಕಾ ದರ್ಶನ ಮಾಡಲಾಯಿತು.ವಿಧಾನಸಭಾ ಅಧ್ಯಕ್ಷರಾದ ‌ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭಾನುವಾರ ನಾದಮಂಟಪಕ್ಕೆ ಆಗಮಿಸಿ ಶ್ರೀಗಳಿಗೆ ಜನ್ಮದಿನದ ಶುಭ ಕೋರಿದರು.ಇದೇ ವೇಳೆ ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ರಾಮಪ್ರಸಾದ್,ಅಕ್ಬರ್ ಖಾನ್ ಮತ್ತಿತರರು ಶ್ರೀಗಳಿಗೆ ಶುಭಕಾಮನೆ ಸಲ್ಲಿಸಿದರು.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.