ಅನಿಲ ಸೋರಿಕೆ: ಸಿಲಿಂಡರ್‌ ಸ್ಥಳಾಂತರ


Team Udayavani, Mar 9, 2022, 1:05 PM IST

ಅನಿಲ ಸೋರಿಕೆ: ಸಿಲಿಂಡರ್‌ ಸ್ಥಳಾಂತರ

ಮೈಸೂರು: ನಗರದ ಕೆಆರ್‌ಎಸ್‌ ರಸ್ತೆಯ ರೈಲ್ವೆ ವಸತಿ ಗೃಹದ ಆವರಣದಲ್ಲಿ ಸೋರಿಕೆಯಾಗಿದ್ದ ಕ್ಲೋರಿನ್‌ ಅನಿಲ ಸಿಲಿಂಡರ್‌ಅನ್ನು ಸ್ಥಳಾಂತರ ಮಾಡಿರುವುದರಿಂದ ಆತಂಕ ನಿವಾರಣೆಯಾಗಿದೆ. ಜತೆಗೆ, ಚೇತರಿಸಿಕೊಂಡ 25 ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು,ಇನ್ನೂ ಮೂವರು ಐಸಿಯುನಲ್ಲಿ ಚಿಕಿತ್ಸೆ

ಮುಂದುವರಿದಿದೆ. ಸಿಲಿಂಡರ್‌ಅನ್ನು ಮಂಗಳವಾರ ಚಿಕ್ಕಮಗಳೂರಿಗೆ ಸ್ಥಳಾಂತರ ಮಾಡಲಾಗಿದೆ. 2015ರಲ್ಲಿ ಚಿಕ್ಕಮಗಳೂರಿನ ನೊರೊನಾ ಏಜೆನ್ಸಿ ಈ ಸಿಲಿಂಡರ್‌ ಅನ್ನು ಕೊಳವೆ ಬಾವಿ ನೀರಿನ ಶುದ್ಧೀಕರಣ ಮಾಡಲುಅಳವಡಿಸಿತ್ತು. ಈಗ ಅದೇ ಏಜೆನ್ಸಿಗೆವಿಲೇವಾರಿ ಮಾಡಲು ನೀಡಲಾಗಿದೆ.

ಕ್ಲೋರಿನ್‌ ಅನಿಲ ಸೋರಿಕೆ: ಕಳೆದೆರಡು ವರ್ಷಗಳ ಹಿಂದೆ ರೈಲ್ವೆ ವಸತಿ ಗೃಹಗಳಿಗೆ ನದಿ ಮೂಲದ ನೀರನ್ನು ಸರಬರಾಜು ಮಾಡಲು ಆರಂಭಿಸಿದ ನಂತರ ಈ ಸಿಲಿಂಡರ್‌ ಅನುಪಯುಕ್ತಗೊಂಡಿತ್ತು. ಸೋಮವಾರವಷ್ಟೇ ಈ ಸಿಲಿಂಡರ್‌ನಿಂದ ಕ್ಲೋರಿನ್‌ ಅನಿಲ ಸೋರಿಕೆಯಾಗಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿದಅಗ್ನಿಶಾಮಕ ದಳದ 35 ಹೆಚ್ಚು ಸಿಬ್ಬಂದಿ ಸೋರಿಕೆಯನ್ನು ನಿಲ್ಲಿಸಿದ್ದರು.

ಈ ಘಟನೆಯಲ್ಲಿ 69ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದರು. ಇದರಿಂದ ರಸ್ತೆ ಸಂಚಾರವನ್ನು ಬಂದ್‌ ಮಾಡಲಾಗಿತ್ತು. ಕೆಮ್ಮು, ವಾಂತಿ, ಉಸಿರಾಟ ಸಮಸ್ಯೆಯಿಂದಾಗಿ ಅಸ್ವಸ್ಥಗೊಂಡು ಆಸ್ಪ ತ್ರೆಗೆ ದಾಖಲಾಗಿದ್ದವರ ಪೈಕಿ ಬಹುತೇಕ ಜನರು ಸದ್ಯಕ್ಕೆ ಚೇತರಿಸಿಕೊಳ್ಳುತ್ತಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆ: ಕ್ಲೋರಿನ್‌ ಅನಿಲ್‌ ಸೋರಿಕೆಯಿಂದಾಗಿ ಉಸಿರಾಟದಲ್ಲಿ ವ್ಯತ್ಯಾಸದಿಂದ ರೈಲ್ವೆ ವಸತಿ ಗೃಹದಜನರು ವಿವಿಧ ಆಸ್ಪತ್ರೆಗೆ ದಾಖಲಾಗಿದ್ದರು. ಇಂದಿನವರೆಗೆ ರೈಲ್ವೆ ಆಸ್ಪತ್ರೆಗೆ 27, 30 ಜನ ಕೆ.ಆರ್‌.ಆಸ್ಪತ್ರೆಗೆ, 12 ಮಕ್ಕಳು ಚಲುವಾಂಬ ಆಸ್ಪತ್ರೆ ದಾಖಲಾಗಿದ್ದರು. 12 ಮಕ್ಕಳು ಸೇರಿ 28 ಜನರು ಒಳ ರೋಗಿಗಳಾಗಿ ಚಿಕಿತ್ಸೆಪಡೆಯುತ್ತಿದ್ದಾರೆ. ಮಂಗಳವಾರ ಸಂಜೆಯೊಳಗೆ 25 ಜನ ವಯಸ್ಕರು,11 ಮಕ್ಕಳು ಚೇತರಿಸಿ ಕೊಂಡಿದ್ದು,ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಪ್ರಾಣಾಪಾಯದಿಂದ ಪಾರು: ಅಸ್ವಸ್ಥರು ತಕ್ಷಣ ಆಸ್ಪತ್ರೆ ಬಂದಿದ್ದರಿಂದ ಯಾವುದೇ ಹೆಚ್ಚಿನ ತೊಂದರೆ ಆಗಿಲ್ಲ. ತಕ್ಷಣ ಚಿಕಿತ್ಸೆನೀಡಲಾಗಿದೆ. ಎಲ್ಲ ರೋಗಿಗಳು ಚೇತರಿಸಿಕೊಂಡಿದ್ದಾರೆ. ಮೂವರಿಗೆತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆಮುಂದುವರಿಸಲಾಗಿದೆ. ಆಸ್ಪತ್ರೆ ಬಂದಸಂದರ್ಭದಲ್ಲಿ ಮೂವರ ಸ್ಥಿತಿ ಗಂಭೀರವಾಗಿತ್ತು. ಈಗ ಅವರೂ ಚೇತರಿಸಿಕೊಂಡಿದ್ದಾರೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾವುದೇ ತೊಂದರೆ ಇಲ್ಲ ಎಂದು ಕೆಆರ್‌ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ.ರಾಜೇಶ್‌ ತಿಳಿಸಿದ್ದಾರೆ.

ಮಕ್ಕಳೂ ಚೇತರಿಕೆ: 12 ಮಕ್ಕಳು ಚಲುವಾಂಬ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.ಉಸಿರಾಟದ ತೊಂದರೆ ಉಂಟಾಗಿತ್ತು.ಈಗ ಎಲ್ಲರೂ ಚೇತರಿಸಿಕೊಂಡಿದ್ದಾರೆ.ಆಸ್ಪತ್ರೆ ಬಂದ ತಕ್ಷಣ ಆಕ್ಸಿಜನ್‌ನೊಂದಿಗೆಚಿಕಿತ್ಸೆ ನೀಡಲಾಗಿತ್ತು. 11 ಮಕ್ಕಳನ್ನುಮನೆಗೆ ಕಳುಹಿಸಿ ಕೊಡಲಾಗಿದೆ. ಒಂದುಮಗುವಿಗೆ ಉಸಿರಾಟದ ಸಮಸ್ಯೆ ಈಹಿಂದಿನಿಂದಲೂ ಇದ್ದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಯಾವುದೇ ಗಂಭೀರ ಪ್ರಕರಣಇಲ್ಲ ಎಂದು ಚಲುವಾಂಬ ಆಸ್ಪತ್ರೆಯಸ್ಥಾನಿಕ ವೈದ್ಯಾಧಿಕಾರಿ ಡಾ.ಸುಧಾ ರುದ್ರಪ್ಪ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.