ಗಿರೀಶ್‌ ಕಾರ್ನಾಡರ ನಾಟಕಗಳು ಎಲ್ಲ ಕಾಲಘಟ್ಟಕ್ಕೂ ಅನ್ವಯ


Team Udayavani, Jun 15, 2019, 3:00 AM IST

giri-karna

ಮೈಸೂರು: ಗಿರೀಶ್‌ ಕಾರ್ನಾಡ್‌ ಅವರ ನಾಟಕಗಳು ಸಮಕಾಲೀನವಾಗಿದ್ದು, ಪ್ರಚಲಿತ ವಿದ್ಯಾಮಾನಗಳಿಗೆ ಹಾಗೂ ಎಲ್ಲ ಕಾಲಘಟ್ಟಕ್ಕೂ ಅನ್ವಯವಾಗಲಿವೆ ಎಂದು ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಜೆ. ಲೋಕೇಶ್‌ ಅಭಿಪ್ರಾಯಪಟ್ಟರು.

ಕರ್ನಾಟಕ ನಾಟಕ ಅಕಾಡೆಮಿ ಹಾಗೂ ರಂಗಾಯಣ ವತಿಯಿಂದ ರಂಗಾಯಣದ ಭೂಮಿಗೀತದಲ್ಲಿ ಆಯೋಜಿಸಿದ್ದ ಡಾ.ಗಿರೀಶ್‌ ಕಾರ್ನಾಡ್‌ ಹಾಗೂ ರಂಗ ಕಲಾವಿದೆ ರಂಗನಾಯಕಮ್ಮ ಅವರಿಗೆ ರಂಗ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿಸ್ತುಬದ್ಧ ಜೀವನ: ರಂಗಭೂಮಿಗೆ ಗಿರೀಶ್‌ ಕಾರ್ನಾಡ್‌ ಅವರ ಕೊಡುಗೆ ಅಪಾರ. ಎಷ್ಟೋ ಜನ ಬದುಕಿದ್ದಾಗಲೇ ಸತ್ತಿರುತ್ತಾರೆ. ವ್ಯಕ್ತಿತ್ವ ಹೀನವಾಗಿದ್ದು, ಆತ ಎಷ್ಟೇ ದೊಡ್ಡ ಪ್ರಭಾವಿಯಾಗಿದ್ದರೂ ಅವರು ಸತ್ತ ಹಾಗೆಯೇ. ಆದರೆ, ಇನ್ನೂ ಕೆಲವರು ಸತ್ತಿದ್ದರೂ ಬದುಕಿರುತ್ತಾರೆ.

ಕಾರಣ ಅವರು ಈ ಸಮಾಜಕ್ಕೆ ನೀಡಿದ ಕೊಡುಗೆ ಮತ್ತು ಅವರ ವ್ಯಕ್ತಿತ್ವದ ಮೂಲಕ. ಈ ಸಾಲಿಗೆ ಗಿರೀಶ್‌ ಕಾರ್ನಾಡರು ಸೇರುತ್ತಾರೆ. ಅವರ ಶಿಸ್ತು ಬದ್ಧ ಜೀವನ ಹಾಗೂ ವಾಸ್ತವಕ್ಕೆ ಹತ್ತಿರವಾಗಿದ್ದ ಅವರ ಚಟುವಟಿಕೆಗಳು ನಮಗೆಲ್ಲ ಮಾದರಿಯಾಗಿವೆ ಎಂದರು.

ಅವರು ರಂಗಭೂಮಿ ಹಾಗೂ ಸಿನಿಮಾಗಳಲ್ಲಿ ತಮ್ಮ ಪಾತ್ರ ಪೋಷಣೆ ಬಗ್ಗೆ ತೋರುತ್ತಿದ್ದ ಕಾಳಜಿ, ಬದ್ಧತೆ ಅನುಕರಣೀಯವಾದವು. ಅವರ ಕೊಡುಗೆ ರಂಗಭೂಮಿಗೆ ಸೀಮಿತವಾಗದೇ, ಸಾಹಿತ್ಯ, ಚಿತ್ರಕಲೆ, ಸಿನಿಮಾ ಕ್ಷೇತ್ರಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಇಂತಹ ವ್ಯಕ್ತಿಗಳು ನಮಗೆ ಆದರ್ಶವಾಗಬೇಕು ಎಂದರು.

ಸಂಘಟಕ ಶ್ರೀನಿವಾಸ ಕಪ್ಪಣ್ಣ ಮಾತನಾಡಿ, ಗಿರೀಶ್‌ ಕಾರ್ನಾಡ್‌ ಹಾಗೂ ರಂಗನಾಯಕಮ್ಮ, ಗೊರವನ ಕುಣಿತ ಕಲಾವಿದ ಪುಟ್ಟಮಲ್ಲೇಗೌಡ ಅವರ ಕೊಡುಗೆ ಅಮೂಲ್ಯವಾದುದು.

ಕಾರ್ನಾಡರು ಶಿಸ್ತು, ಕೆಲಸದಲ್ಲಿ ಶ್ರದ್ಧೆ ಮತ್ತು ಎಲ್ಲಾ ಕೆಲಸದಲ್ಲಿ ಪೂರ್ವ ತಯಾರಿ ಮಾಡಿಕೊಳ್ಳುವ ಶಿಸ್ತುಬದ್ಧ ವ್ಯಕ್ತಿಯಾಗಿದ್ದರು. ಅವರು ತಮ್ಮ ತಾಯಿಯನ್ನು ಅಪಾರವಾಗಿ ಗೌರವಿಸುತ್ತಿದ್ದರು. ಆದರೆ ಕೆಲವರು ಅವರನ್ನು ಆರ್‌ಎಸ್‌ಎಸ್‌, ಬಿಜೆಪಿ ವಿರೋಧಿ ಎಂಬ ಅರೋಪವನ್ನೂ ಮಾಡುತ್ತಿದ್ದರು ಎಂದು ಹೇಳಿದರು.

ಕರ್ನಾಟಕ ನಾಟಕ ಅಕಾಡೆಮಿಯ ಮೊದಲ ಅಧ್ಯಕ್ಷರಾಗಿ ಹಾಗೂ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಅಧ್ಯಕ್ಷರಾಗಿ ಸಮರ್ಥ ಹಾಗೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಸಿಕ್ಕಷ್ಟು ಅಂತಾರಾಷ್ಟ್ರೀಯ ಫೆಲೋಶಿಪ್‌ಗ್ಳು ಮತ್ಯಾರಿಗೂ ಸಿಗಲಿಲ್ಲ ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ರಂಗಾಯಣ ನಿರ್ದೇಶಕಿ ಭಾಗೀರಥಿಬಾಯಿ ಕದಂ, ರಂಗಾಯಣ ಮಾಜಿ ನಿರ್ದೇಶಕ ಎಚ್‌. ಜನಾರ್ದನ್‌, ರಂಗಾಯಣ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ ಇತರರಿದ್ದರು.

25 ವರ್ಷ ಕಾರ್ಯನಿರ್ವಹಿಸಿದ ಏಕೈಕ ಮಹಿಳೆ ರಂಗನಾಯಕಮ್ಮ: ಇತ್ತೀಚೆಗೆ ನಿಧನರಾದ ರಂಗಭೂಮಿಯ ಖ್ಯಾತ ಕಲಾವಿದೆ ರಂಗನಾಯಕಮ್ಮ ಅವರನ್ನು ಸ್ಮರಿಸಿಕೊಂಡ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಜೆ. ಲೋಕೇಶ್‌ , ಒಂದು ಕಾಲದಲ್ಲಿ ಗುಬ್ಬಿ ಕಂಪನಿಯಲ್ಲಿ ಒಂದು ಪಾತ್ರವನ್ನು ನಿರ್ವಹಿಸುವುದೇ ಸಾಧನೆಯಾಗಿತ್ತು. ಆದರೆ, ರಂಗನಾಯಕಮ್ಮ ಅವರು ಗುಬ್ಬಿ ನಾಟಕ ಕಂಪನಿಯಲ್ಲಿ 25 ವರ್ಷಗಳ ಕಾಲ ಕಾರ್ಯನಿರ್ವಹಿಸಿದ ಮೊದಲ ಮಹಿಳೆಯಾಗಿದ್ದಾರೆ.

ಅವರು ಸದಾರಮೆ ಪಾತ್ರದಿಂದ ಹಿಡಿದು ಹಲವು ವಿಭಿನ್ನ ಪಾತ್ರಗಳನ್ನು ಮಾಡಿದ್ದಾರೆ. ಕೇವಲ ಒಂದು ಪಾತ್ರಕ್ಕೆ ಸೀಮಿತವಾಗಿರಲಿಲ್ಲ. ಇದರಿಂದಲೇ ಅವರು ಪ್ರೇಕ್ಷಕರಿಗೆ ಹತ್ತಿರವಾಗಿದ್ದರು. ಅವರ ಕಲಾ ಸೇವೆಯನ್ನು ಗಮನಿಸಿ ಸರ್ಕಾರ ನಾಟಕರತ್ನ ಗುಬ್ಬಿ ವೀರಣ್ಣ ಪ್ರಶಸ್ತಿ ನೀಡಿ ಗೌರವಿಸಿದೆ ಎಂದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.