ಬೈಯ್ಯುವ ಹಬ್ಬ ಆಚರಿಸಿ ಸಂಭ್ರಮಿಸಿದ ಗಿರಿಜನರು


Team Udayavani, May 25, 2018, 2:45 PM IST

m6-biyuva.jpg

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ಆದಿವಾಸಿಗಳ ಪ್ರಮುಖ ಕುಂಡೆ ಹಬ್ಬವನ್ನು ತಾಲೂಕಿನ ನೇರಳಕುಪ್ಪೆ, ಹೆಬ್ಬಳ್ಳ ಸೇರಿದಂತೆ ಹಾಡಿಗಳ ಕಾಡಕುಡಿಗಳು ವಿವಿಧ ವೇಷ ಭೂಷಣ ಧರಿಸಿ, ಕುಣಿದು-ಕುಪ್ಪಳಿಸಿ ದಾರಿಹೋಕರನ್ನು ಜೇನು ನುಡಿಯಲ್ಲಿ ಅಣಕಿಸುತ್ತಾ, ಕೀಟಲೆ ಮಾಡುವ ಮೂಲಕ ಹಬ್ಬಕ್ಕೆ ಕಿಚ್ಚು ಹಚ್ಚಿ, ದೇವಪುರಕ್ಕೆ ತೆರಳಿ ದೇವರಿಗೆ ಪೂಜೆ ಸಲ್ಲಿಸಿ ಹಾಡಿಗೆ ವಾಪಾಸಾದರು.

ಬೈಯ್ಯುವುದೇ ವಿಶೇಷ: ಕೊಡಗಿನ ಕಾಫಿ ಎಸ್ಟೇಟ್‌ಗಳಲ್ಲಿ ಕೆಲಸ ಮಾಡುವ ಆದಿವಾಸಿಗಳು ಮಾಲಿಕರಿಂದ ಬೈಸಿಕೊಳ್ಳುವುದರ ವಿರುದ್ಧ ಆಚರಿಸುವುದೇ ಕುಂಡೆ ಹಬ್ಬ. ಹಬ್ಬದ ದಿನವಿಡೀ ದಾರಿಯಲ್ಲಿ ಸಿಕ್ಕವರಿಗೆ, ಮಾಲಿಕರಿಗೆ ಹೀಗೆ ಎಲ್ಲರನ್ನೂ ತಮ್ಮ ಭಾಷೆಯಲ್ಲೇ ಬೈಯುವುದು, ಹಣ ಪೀಕುವುದು, ಕೊಡದಿದ್ದಲ್ಲಿ ಮತ್ತಷ್ಟು ಬೈಯ್ಯುವುದು. ಆದರೆ, ಹಬ್ಬ ಆಚರಿಸುವ ವೇಳೆ ಬೈಯುವ ಆದಿವಾಸಿಗಳನ್ನು ಯಾರೂ ಪ್ರಶ್ನಿಸುವಂತಿಲ್ಲ.

ಕೊನೆಗೆ ಕ್ಷಮೆಯಾಚನೆ: ಗಿರಿಜನ ಸಮುದಾಯಕ್ಕೆ ಸೇರಿದ ಬೆಟ್ಟಕುರುಬ, ಜೇನುಕುರುಬ, ಬುಡಕಟ್ಟು ಸಮುದಾಯಕ್ಕೆ ಸೇರಿದವರು ಆಚರಿಸುವ ಹಬ್ಬವಿದು. ಕಾಡಿನೊಳಗೆ ಪೂಜೆ ಸಲ್ಲಿಸುವಾಗ ಇತರರಿಗೆ ಇಲ್ಲಿಗೆ ಪ್ರವೇಶವಿಲ್ಲ. ಹಬ್ಬದಂದು ಸಂಗ್ರಹವಾಗುವ ಹಣ ಮತ್ತಿತರ ವಸ್ತುಗಳಿಂದ ದೇವರಕಾಡಿನಲ್ಲಿ ದೇವರಿಗೆ ಪೂಜೆ ಸಲ್ಲಿಸಿ, ಭಿಕ್ಷೆ ಬೇಡಿದ್ದ ಹಣದಲ್ಲಿಯೇ ಅಡುಗೆ ತಯಾರಿಸಿ ಎಲ್ಲರಿಗೂ ಉಣಬಡಿಸಿ, ಕ್ಷಮೆ ಕೇಳಿ ಕೋಪ ತಣಿಸಿಕೊಳ್ಳುವುದೇ ಈ ಕುಂಡೆ ಹಬ್ಬದ ವಿಶೇಷ.

ಆಚರಣೆ ಹೇಗೆ: ಗಿರಿಜನರು ತಮ್ಮ ಆರಾಧ್ಯದೈವ ಭದ್ರಕಾಳಿ, ಅಯ್ಯಪ್ಪದೇವರ ಹೆಸರಿನಲ್ಲಿ ನಡೆಯುವ ಈ ಹಬ್ಬಕ್ಕೆ ಹನಗೋಡು ಹೋಬಳಿ ವ್ಯಾಪ್ತಿಯಲ್ಲಿರುವ 35ಕ್ಕೂ ಹೆಚ್ಚು ಹಾಡಿಯ ಗಿರಿಜನರು ಕಾಡಿನಲ್ಲಿ ಸಿಗುವ  ಸೊಪ್ಪು, ಹರಿದ ಬಟ್ಟೆ ಹಾಗೂ ಗೋಣಿ ಚೀಲಗಳಿಂದ ವಿವಿಧ ವೇಷಗಳನ್ನು ತೊಟ್ಟು, ಒಣಗಿದ ಸೋರೇಕಾಯಿ ಬುರುಡೆ, ಪ್ಲಾಸ್ಟಿಕ್‌ ಡಬ್ಬಿ ಹಾಗೂ ಟಿನ್‌ಗಳನ್ನು ಡೋಲಿನಂತ ತಯಾರಿಸಿ ಆಕರ್ಷಕವಾಗಿ ಕುಣಿಯುತ್ತಾ, ಸಿಕ್ಕ ಸಿಕ್ಕವರನ್ನು ಕೆಟ್ಟ ಪದಗಳಿಂದ ನಿಂದಿಸುತ್ತಾ ಬಿûಾಟನೆ ಮಾಡುತ್ತಾ ಸಂಭ್ರಮಿಸುತ್ತಾರೆ.

ಪ್ರತಿ ವರ್ಷದ ಮೇ ತಿಂಗಳ ಕೊನೆಯ ಬುಧವಾರದಂದು ಈ ಹಬ್ಬ ಆಚರಿಸಲಾಗುವುದು. ದೇವರ ಮೇಲೆ ಭಕ್ತಿ, ಗೌರವದಿಂದ ಪ್ರಾರ್ಥನೆ ಮಾಡಿ ವೇಷ ಹಾಕುತ್ತಾರೆ. ಬಳಿಕ ಕಾಲ್ನಡಿಗೆಯಲ್ಲೇ ಸುತ್ತ-ಮುತ್ತಲ ಹಳ್ಳಿಗಳಿಗೆ ಸುತ್ತಾಡಿ ಹಾಗೂ ಮೈಸೂರು-ಕೇರಳ ರಾಜ್ಯ ಹೆದ್ದಾರಿಯಲ್ಲಿ ಬರುವ ವಾಹನ ಸವಾರರಿಂದ ಭಿಕ್ಷೆ ಬೇಡುತ್ತಾರೆ.

ದೇವರಪುರದಲ್ಲಿ ಪೂಜೆ: ಹನಗೋಡು ಭಾಗದಿಂದ  ಕಾಡಿನ ದಾರಿಯಲ್ಲೇ ಬರಿಗಾಲಿನಲ್ಲಿ ತೆರಳಿ ಹಣ ಮತ್ತು ದವಸ-ಧಾನ್ಯ ತಂದು, ತಿತಿಮತಿ ಬಳಿಯ ದೇವರಪುರದಲ್ಲಿರುವ ಅಯ್ಯಪ್ಪಹಾಗೂ ಭದ್ರಕಾಳಿ ದೇವಾಲಯಗಳಲ್ಲಿ ಅರ್ಪಿಸಿ ದೇವರ ಉತ್ಸವದಲ್ಲಿ ಪಾಲ್ಗೊಂಡು ತಾವು ಮಾಡಿದ ತಪ್ಪಿಗಾಗಿ ದೇವರಲ್ಲಿ ಕ್ಷಮೆಯಾಚಿಸಿ, ವಿಶೇಷ ಪೂಜೆ ಸಲ್ಲಿಸುತ್ತಾರೆ. ಸಕುಟುಂಬ ಸಮೇತರಾಗಿ ಊಟ ಮಾಡಿ ಹಾಡಿಗಳಿಗೆ ವಾಪಾಸಾಗುವ ಮೂಲಕ ಹಬ್ಬ ಸಮಾರೋಪಗೊಳ್ಳುತ್ತದೆ.

* ಸಂಪತ್‌ಕುಮಾರ್‌ ಹುಣಸೂರು

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.