ರೈತರ ಸಂಕಷ್ಟ ಪರಿಹರಿಸಲು ಸರ್ಕಾರಗಳು ವಿಫಲ
Team Udayavani, Mar 15, 2017, 12:46 PM IST
ಪಿರಿಯಾಪಟ್ಟಣ: ಯಾವ ಸರ್ಕಾರ ಅಧಿಕಾರಕ್ಕೆ ಬಂದರೂ ರೈತರ ಸಂಕಷ್ಟಗಳನ್ನು ಪರಿಹರಿಸುವಲ್ಲಿ ವಿಫಲವಾಗಿವೆ ಎಂದು ರೈತ ಸಂಘ, ಹಸಿರು ಸೇನೆಯ(ಕೋಡಿಹಳ್ಳಿ ಚಂದ್ರಶೇಖರ್ ಬಣ) ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ತಿಳಿಸಿದರು.
ತಾಲೂಕಿನ ಕಂಪಲಾಪುರ ಗ್ರಾಮದಲ್ಲಿ ನೂತನವಾಗಿ ರೈತ ಸಂಘ, ಹಸಿರು ಸೇನೆ ಘಟಕ ಉದ್ಘಾಟಿಸಿ ಮಾತನಾಡಿ ಯಾವುದೇ ಪಕ್ಷಗಳಾಗಲೀ ಅಧಿಕಾರಕ್ಕೇರಲು ರೈತರು ಬೇಕು ಆದರೆ, ಅಧಿಕಾರಕ್ಕೆ ಬಂದ ನಂತರ ಅವರ ಬೆನ್ನಿಗೆ ಚೂರಿ ಹಾಕುತ್ತಿವೆ. ರೈತ ಬೆವರು ಸುರಿಸಿ ಬೆಳೆದ ಬೆಳೆಗಳಿಗೆ ಬೆಲೆ ಇಲ್ಲದೆ ಕಂಗಾಲಾಗಿದ್ದಾರೆ. ರಾಜಕಾರಣಿಗಳು ಐಷಾರಾಮಿ ಜೀವನದೊಂದಿಗೆ ರೈತರೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ.
ನಾವು ಸ್ವಾರ್ಥಕ್ಕಾಗಿ ಸಂಘ ಮಾಡುತ್ತಿಲ್ಲ, ಬದಲಾಗಿ ನಮ್ಮ ಹಕ್ಕನ್ನು ಪಡೆಯಲು ಸಂಘಟಿತರಾಗಬೇಕಾಗಿದೆ ಎಂದರು. ಹುಣಸೂರು ತಾಲೂಕು ರೈತ ಸಂಘದ ಉಪಾಧ್ಯಕ್ಷ ಬಸವೇಗೌಡ ಮಾತನಾಡಿ, ರೈತ ಸಂಘ ಅಸ್ತಿತ್ವದಲ್ಲಿರದೆ ಹೋಗಿದ್ದರೆ ರಾಜಕಾರಣಿಗಳು ನಮ್ಮನ್ನು ಕೀಳಾಗಿ ಕಾಣುತ್ತಿದ್ದರು. ಸರ್ಕಾರ ಎಲ್ಲಾ ಭಾಗ್ಯಗಳ ಜೊತೆಗೆ ಆತ್ಮಹತ್ಯೆ ಭಾಗ್ಯ ನೀಡಿದೆ.
ಅಧಿಕಾರಿಗಳು ಸಹ ರೈತರ ಬಗ್ಗೆ ನಿರ್ಲಕ್ಷ ತೋರುತ್ತಿದ್ದು, ನಾವೇ ಅವರ ಬಳಿ ಅಲೆದು ನಮ್ಮ ಸವಲತ್ತುಗಳನ್ನು ಕಿತ್ತುಕೊಳ್ಳುವ ದುಸ್ಥಿತಿ ಬಂದಿದೆ. ಜನ ಜಾನುವಾರುಗಳಿಗೆ ನೀರು, ಮೇವಿಲ್ಲ ಇಂತಹ ಪರಿಸ್ಥಿತಿಯಲ್ಲೂ ಗೋಶಾಲೆ ತೆರೆಯುವ ಕೆಲಸ ಮಾಡುತ್ತಿಲ್ಲ. ಇದರಿಂದ ಗೋವುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದರು.
ಹುಣಸೂರು ತಾಲೂಕು ಘಟಕದ ಅಧ್ಯಕ್ಷ ಬೆಟ್ಟೇಗೌಡ, ಉಪಾಧ್ಯಕ್ಷ ರಾಜೇಗೌಡ, ಕೆ.ಆರ್.ನಗರ ಘಟಕದ ಅಧ್ಯಕ್ಷ ಚೀರನಹಳ್ಳಿ ಶ್ರೀನಿವಾಸ್, ಮಹಿಳಾ ಘಟಕದ ಅಧ್ಯಕ್ಷ ನಿಂಗಮ್ಮ, ಕಾರ್ಯದರ್ಶಿ ಸವಿತ, ಭಾಗ್ಯ, ಮುತ್ತುರಾಯನಹೊಸಳ್ಳಿ ಜಯರಾಮ್, ಹೊಸವಾರಂಚಿ ಮಂಜೇಗೌಡ, ದೇವೇಂದ್ರ, ಪೆಂಜಳ್ಳಿ ನಾಗರಾಜು, ಚಂದ್ರೇಗೌಡ, ನಾಗೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪದಾಧಿಕಾರಿಗಳು: ಗೋವಿಂದೇಗೌಡ – ಗೌರವಾಧ್ಯಕ್ಷ, ಕೆ.ಎಂ. ಶಿವಶಂಕರ್ – ಅಧ್ಯಕ್ಷ, ಸದಾನಂದ – ಉಪಾಧ್ಯಕ್ಷ, ಸ್ವಾಮಿ – ಖಜಾಂಚಿ, ಸ್ವಾಮಿಗೌಡ -ಹೋಬಳಿ ಘಟಕದ ಅಧ್ಯಕ್ಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ
Hunsur; ಬೈಕ್ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ
Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ
Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್ನೋಟ್ ಪತ್ತೆ!
Hunsur: ನಾಗರಹೊಳೆಯಲ್ಲಿ ಗುಂಡಿಕ್ಕಿ ಅಪರೂಪದ ಕೂರ ಭೇಟೆಯಾಡಿದ್ದ ಇಬ್ಬರ ಬಂಧನ; ಓರ್ವ ಪರಾರಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ
Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ