ಸರ್ಕಾರಿ ನೌಕರರ ಮುಷ್ಕರ: ಜನತೆ ಪರದಾಟ


Team Udayavani, Mar 2, 2023, 2:43 PM IST

tdy-14

ಮೈಸೂರು: ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿ ಹಾಗೂ ವೇತನ ಪರಿಷ್ಕರಣೆಗೆ ಆಗ್ರಹಿಸಿ ಸರ್ಕಾರಿ ನೌಕರರು ಬುಧವಾರ ನಡೆಸಿದ ಮುಷ್ಕರದಿಂದ ಆರೋಗ್ಯ ಇಲಾಖೆಯ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಜಿಲ್ಲೆಯ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯ ಉಂಟಾಯಿತು.

ಸರ್ಕಾರಿ ನೌಕರರು ಬುಧವಾರ ಮಧ್ಯಾಹ್ನದವರೆಗೆ ನಡೆಸಿದ ಮುಷ್ಕರದಿಂದ ನಗರದ ಕೆ.ಆರ್‌.ಆಸ್ಪತ್ರೆ, ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನ್ಯಾಯಾಲಯ, ಜಿಲ್ಲಾಧಿಕಾರಿ ಕಚೇರಿ, ಮೈಸೂರು ಮಹಾನಗರ ಪಾಲಿಕೆಯ ಮುಖ್ಯ ಕಚೇರಿ ಹಾಗೂ ವಲಯ ಕಚೇರಿಗಳಲ್ಲಿ ಸರ್ಕಾರಿ ಸೇವೆ ಸಿಗದೆ ಸಾರ್ವಜನಿಕರು ಪರದಾಡಿದ ದೃಶ್ಯ ಕಂಡಬಂದಿತು.

ಬಣಗುಟ್ಟಿದ ಕಚೇರಿಗಳು: ಜಿಲ್ಲಾಧಿಕಾರಿ ಕಚೇರಿ, ಪಾಲಿಕೆ ಕಚೇರಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಗಳು ಸೇರಿದಂತೆ ಸರ್ಕಾರಿ ಕಚೇರಿಗಳು ಜನರಿಲ್ಲದೇ ಬಣಗುಟ್ಟಿದವು. ಖಾತೆ ಬದಲಾವಣೆ, ಜಾತಿ ಪ್ರಮಾಣ ಪತ್ರ ಸೇರಿದಂತೆ ವಿವಿಧ ಅರ್ಜಿ ಸಲ್ಲಿಸಲು ಪಾಲಿಕೆ ಮುಖ್ಯ ಕಚೇರಿಗೆ ಬಂದಿದ್ದವರು ವಾಪಸ್‌ ತೆರಳಿದರು. ಹಾಗೆಯೇ ನಿತ್ಯ ನೂರಾರು ಮಂದಿಯಿಂದ ತುಂಬಿರುತ್ತಿದ್ದ ಜಿಲ್ಲಾಧಿಕಾರಿ ಕಚೇರಿಯೂ ಸಿಬ್ಬಂದಿ ಇಲ್ಲದೇ ಬಣಗುಟ್ಟಿದರೆ, ತಮ್ಮ ಸಮಸ್ಯೆ ಪರಿಹರಿಸಿಕೊಳ್ಳಲು ಅರ್ಜಿ ಹಿಡಿದು ಬಂದಿದ್ದ ಸಾರ್ವಜನಿಕರು ನಿರಾಸೆಯಿಂದ ಮನೆಯತ್ತ ತೆರಳಿದರು. ಮೈಸೂರು ಪಾಲಿಕೆ ನೌಕರರ ಸಂಘದ ಸದಸ್ಯರು, ಮೈಸೂರು ವಿಶ್ವವಿದ್ಯಾಲಯ ನೌಕರರ ಸಂಘದವರು ಮುಷ್ಕರಕ್ಕೆ ಬೆಂಬಲ ನೀಡಿದರು.

ಆಸ್ಪತ್ರೆಗಳೂ ಖಾಲಿ ಖಾಲಿ: ಹೊರರೋಗಿಗಳಿಂದ ಗಿಜಿಗುಡುತ್ತಿದ್ದ ನಗರದ ಕೆ.ಆರ್‌. ಆಸ್ಪತ್ರೆ, ಜಿಲ್ಲಾಸ್ಪತ್ರೆ, ಜಯನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಮುಷ್ಕರ ಹಿನ್ನೆಲೆ ಆರೋಗ್ಯ ಸೇವೆ ವ್ಯತ್ಯಯವಾಗಿತ್ತು. ಹೆರಿಗೆ ಆಸ್ಪತ್ರೆಯಲ್ಲಿ ರೋಗಿಗಳನ್ನು ಮಂಗಳವಾರದಿಂದಲೇ ದಾಖಲಿಸಿಕೊಂಡಿರಲಿಲ್ಲ. ಕೆ.ಆರ್‌.ಆಸ್ಪತ್ರೆಯ ಒಪಿಡಿ ಬಂದ್‌ ಹಿನ್ನೆಲೆ ಚಿಕಿತ್ಸೆ ಲಭ್ಯವಾಗದೇ ರೋಗಿಗಳು ಸಂಕಷ್ಟಕ್ಕೀಡಾದರು. ರಕ್ತದೊತ್ತಡ, ಮಧುಮೇಹ ಪರೀಕ್ಷೆಗೆಂದು ಬಂದವರು ಖಾಸಗಿ ಆಸ್ಪತ್ರೆಗಳಿಗೆ ತೆರಳಿದರು.

ನೌಕರರ ಬೇಡಿಕೆ ಈಡೀರಿಸುವ ಸಂಬಂಧ ಸರ್ಕಾರ ಭವಸೆ ನೀಡಿದ ಹಿನ್ನೆಲೆ ಮಧ್ಯಾಹ್ನಕ್ಕೆ ಮುಷ್ಕರ ವಾಪಾಸ್‌ ಪಡೆದಿದ್ದರಿಂದ ಮಧ್ಯಾಹ್ನದಿಂದಲೇ ಎಲ್ಲಾ ಸರ್ಕಾರಿ ಕಚೇರಿ, ಆಸ್ಪತ್ರೆಗಳಲ್ಲಿ ಸೇವೆ ಪುನಾರಂಭವಾಯಿತು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.