ಹುಣಸೂರು: ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದ ಸಚಿವ ಸೋಮಶೇಖರ್
ಮೈ.ವಿ.ರವಿಶಂಕರ್ ಸರಕಾರದ ಅಭ್ಯರ್ಥಿ
Team Udayavani, May 13, 2022, 6:49 PM IST
ಹುಣಸೂರು: ನಗರದ ವಿವಿಧೆಡೆ ಪದವೀಧರ ಕ್ಷೇತ್ರದ ಅಭ್ಯರ್ಥಿ ಮೈ.ವಿ.ರವಿಶಂಕರ್ ಪರ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತಯಾಚಿಸಿದರು.ನಗರದ ಜೆ.ಎಸ್.ಎಸ್.ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಕರಿಗೆ ಕಲಿಕಾ ಚೇತರಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಲಿ-ಕಲಿ ತರಬೇತಿ ಕಾರ್ಯಕ್ರಮ ನಡೆಯುತ್ತಿದ್ದು .ಶಾಲೆಗೆ ಭೇಟಿ ನೀಡಿ ಶಿಕ್ಷಕರ ಬಳಿ ಮತಯಾಚಿಸಿದ ನಂತರ ಹುಣಸೂರು ವಕೀಲರ ಸಂಘದ ಭವನದಲ್ಲಿ ವಕೀಲರನ್ನು ಭೇಟಿ ಮಾಡಿ ಮತಯಾಚಿಸಿದರು.
ಈ ವೇಳೆ ಮಾತಮಾಡಿದ ಸಚಿವರು, ಕಳೆದ ಬಾರಿ ಅತ್ಯಲ್ಪ ಮತಗಳಿಂದ ಪರಾಭವಗೊಂಡಿದ್ದ ಮೈ.ವಿ.ರವಿಶಂಕರ್ ಕಾರ್ಯವೈಖರಿಯನ್ನು ಗುರುತಿಸಿರುವ ಬಿಜೆಪಿ ಪಕ್ಷವು ಮತ್ತೊಂದು ಅವಕಾಶ ಕಲ್ಪಿಸುವ ಮೂಲಕ ಈಬಾರಿ ಪದವೀಧರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಇವರು ಸರಕಾರದ ಅಭ್ಯರ್ಥಿ ಕೂಡ, ರಾಜ್ಯದಲ್ಲಿ ಇನ್ನೂ ಒಂದು ವರ್ಷ ಕಾಲ ಬಿಜೆಪಿ ಸರಕಾರ ವಿರಲಿದೆ. ಪದವೀಧರರ ಸಂಕಷ್ಟ, ನಾಡಿ ಮಿಡಿತ ಅರಿತಿರುವ ರವಿಶಂಕರ್ ರವರಿಗೆ ಮತ ನೀಡುವ ಮೂಲಕ ಬಿಜೆಪಿ ಅಭ್ಯರ್ಥಿ ಯನ್ನು ವಿಜಯಿಯನ್ನಾಗಿಸಿರೆಂದು ಮನವಿ ಮಾಡಿದರು.
ಪದವೀಧರರ ಸಂಕಷ್ಟಕ್ಕೆ ನೆರವಾಗುವ ಗುಣವುಳ್ಳ, ಸರಳ ಸಜ್ಜನಿಕೆಗೆ ಹೆಸರಾಗಿರುವ ಮೈ.ವಿ. ರವಿಶಂಕರ್ರನ್ನು ಗೆಲ್ಲಿಸಿಕೊಟ್ಟಲ್ಲಿ ಮೇಲ್ಮನೆಯಲ್ಲಿ ಪದವೀಧರರ ಸಮಸ್ಯೆಗಳಿಗೆ ಧ್ವನಿ ಎತ್ತುವ ಮೂಲಕ ನೆರವಾಗಲಿದ್ದಾರೆಂದು ಭರವಸೆ ಇತ್ತರು.
60 ಸಾವಿರ ನೊಂದಣಿ
ಜಿಲ್ಲೆಯಲ್ಲಿ ಸುಮಾರು 60 ಸಾವಿರ ಪದವೀಧರರನ್ನು ಈ ಬಾರಿ ನೊಂದಾಯಿಸಲಾಗಿದೆ. ಪ್ರತಿಯೊಬ್ಬ ಪಧವೀಧರರನ್ನು ಮುಖಂಡರು ಹಾಗೂ ನಮ್ಮ ಅಭ್ಯರ್ಥಿ ಈಗಾಗಲೆ ಭೇಟಿ ಮಾಡಿದ್ದಾರೆ. ಇವರು ಸರಕಾರದ ಅಭ್ಯರ್ಥಿಯೂ ಆಗಿದ್ದಾರೆ.ಹೀಗಾಗಿ ಗೆಲ್ಲುವ ಪಕ್ಷದ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಗ್ರಾಮಾಂತರ ಅಧ್ಯಕ್ಷೆ ಮಂಗಳಾ ಸೋಮಶೇಖರ್, ಬಿಜೆಪಿ ಮುಖಂಡರಾದ ಜಾಬಗರೆ ಜಿಲ್ಲಾ ರೈತ ಮೂರ್ಚಾ ಅಧ್ಯಕ್ಷ ಜಾಬಗೆರೆ ರಮೇಶ್ ಕುಮಾರ್, ಜಿಲ್ಲಾ ಕಾರ್ಯ ದರ್ಶಿ ಯೋಗಾನಂದ ಕುಮಾರ್, ತಾಲೂಕು ಅಧ್ಯಕ್ಷ ನಾಗಣ್ಣಗೌಡ, ನಗರಸಭಾ ಸದಸ್ಯ ವಿವೇಕಾನಂದ ಸೇರಿದಂತೆ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್