ಎಪಿಎಂಸಿಗಳ ಸೌಲಭ್ಯಕ್ಕೆ ಅನುದಾನ
Team Udayavani, May 9, 2020, 5:17 AM IST
ಮೈಸೂರು: ರಾಜ್ಯದ ಎಲ್ಲಾ ಎಪಿಎಂಸಿಗೆ ಬೇಕಾದ ಮೂಲ ಸೌಕರ್ಯದೊಂದಿಗೆ ಇನ್ನಿತರ ಅಭಿವೃದ್ಧಿಗೆ 200 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ರೈತರ ಹಿತದೃಷ್ಟಿಯಿಂದ ಹಲವು ಕ್ರಮಕೈಗೊಳ್ಳಲಾಗಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ನಗರದ ಬಂಡೀಪಾಳ್ಯ ಎಪಿಎಂಸಿ ಪ್ರಾಂಗಣದಲ್ಲಿ ಧಾನ್ಯವರ್ತಕರ ಸಂಘದಿಂದ ಆರಂಭಿಸಿದ ಭೋಜನ ಮಂದಿರವನ್ನು ರೈತರಿಗೆ ಸ್ವತಃ ಉಪಹಾರ ಬಡಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ರೈತರು, ಗ್ರಾಹಕರು, ವರ್ತಕರು ಉತ್ತಮ ವಾತಾವರಣದಲ್ಲಿ ದವಸ, ಧಾನ್ಯ ಮಾರಾಟ ಮಾಡುವ ಜತೆಗೆ ಬೇಕಾದ ಗೋದಾಮು, ಕೋಲ್ಡ್ ಸ್ಟೋರೇಜ್ ಒದಗಿಸಬೇಕಾಗಿದೆ. ಅದಕ್ಕಾಗಿ ಎಪಿಎಂಸಿಗೆ ಬೇಕಾದ ಸೌಕರ್ಯ ಒದಗಿಸಲು 200 ಕೋಟಿ ನೀಡಲಾಗಿದೆ ಎಂದು ಹೇಳಿದರು.
ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಆರಂಭಿಸಲಾಗಿರುವ ಕ್ಯಾಂಟೀನ್ಗಾಗಿ ತಾತ್ಕಾಲಿಕವಾಗಿ ಜಾಗ ನೀಡಲು ಎಪಿಎಂಸಿ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಕ್ಯಾಂಟೀನ್ನನಿರ್ವಹಣೆ, ಗುಣಮಟ್ಟ ಹಾಗೂ ರೈತರೆಲ್ಲರಿಗೂ ಆಹಾರ ಸಿಗುತ್ತದೆಯೇ ಎಂಬ ಅಂಶವನ್ನು ಕೆಲ ಸಮಯಗಳ ಕಾಲ ನಿಗಾ ವಹಿಸಲಾಗುತ್ತದೆ. ಅವರ ಸೇವೆ ತೃಪ್ತಿಕರವಾಗಿದ್ದರೆ ಜಾಗದ ಖಾಯಂ ಮಂಜೂರಾತಿಗೆ ನಿರ್ಧರಿಸಲಾಗುವುದು ಎಂದರು.
ಚರ್ಚಿಸಿ ನಿರ್ಧಾರ: ಎಪಿಎಂಸಿಗೆ ಹೊಂದಿಕೊಂಡಂತೆ ಇರುವ 8 ಎಕರೆ ಮುಡಾ ಜಾಗ ಕೊಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಅಧಿಕಾರಿಗಳೊಡನೆ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದರು. ಸಚಿವ ಭೈರತಿ ಬಸವರಾಜ್, ಶಾಸಕ ಜಿ.ಟಿ. ದೇವೇಗೌಡ, ಎಚ್.ವಿ. ರಾಜೀವ್, ಸಂಸದ ಪ್ರತಾಪಸಿಂಹ, ಎಪಿಎಂಸಿ ಅಧ್ಯಕ್ಷ ಆನಂದ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ