ಪ್ರತಿಯೊಬ್ಬರಲ್ಲೂ ಪುಸ್ತಕ ಓದುವ ಸಂಸ್ಕೃತಿ ಬೆಳೆಸಿ


Team Udayavani, Apr 24, 2019, 3:03 AM IST

pratiyobba

ನಂಜನಗೂಡು: ಜನರಲ್ಲಿ ಪುಸ್ತಕ ಓದುವ ಸಂಸ್ಕೃತಿ ನಶಿಸಿ ಹೋಗುತ್ತಿದ್ದು, ಇದನ್ನು ಉಳಿಸಿ ಬೆಳೆಸಲು ಪ್ರೋತ್ಸಾಹಿಸಬೇಕಾಗಿದೆ ಎಂದು ಸಾಹಿತಿ ಬನ್ನೂರು ಕೆ.ರಾಜು ಸಲಹೆ ನೀಡಿದರು.

ನಗರದ ಶೇಷಾದ್ರಿ ಪುಸ್ತಕ ಮನೆ ಹಾಗೂ ಬ್ರಾಹ್ಮಣ ಧರ್ಮ ಸಹಾಯ ಸಭೆಯ ಸಹಯೋಗದೊಂದಿಗೆ ಬ್ರಾಹ್ಮಣ ಧರ್ಮ ಸಹಾಯಕ ಸಭಾ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಾಲತಾಣ ವ್ಯಾಮೋಹ: ಪುಸ್ತಕ ಓದುವ ಸಂಸ್ಕೃತಿ ನಮ್ಮ ಪರಂಂಪರೆ‌ಯಿಂದ ಬಂದಿದ್ದು, ಟೀವಿ, ಮೊಬೈಲ್‌, ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳ ವ್ಯಾಮೋಹದಿಂದ ಅದು ಜನ ಮಾನಸದಿಂದ‌ ಮರೆಯಾಗಲಾರಂಭಿಸಿದೆ. ಓದುವ ಸಂಸ್ಕೃತಿ ಯಾವುದೇ ಕಾರಣಕ್ಕೂ ನಶಿಸಬಾರದು, ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಿ, ಪ್ರೋತ್ಸಾಹಿಸಬೇಕಾಗಿದೆ ಎಂದು ತಿಳಿಸಿದರು.

ಪುಸ್ತಕ ಉಚಿತ: ದ‌ಶಕಗಳ ಹಿಂದೆ ಎಲ್ಲೆಡೆ ಖಾಸಗಿ ವಾಚನಾಲಯಗಳಿದ್ದವು ಎಂಬುದನ್ನು ಸ್ಮರಿಸಿದ ಅವರು, ಅಂದು ಅಲ್ಲಿನ ಪುಸ್ತಕಗಳನ್ನು ದೈನಂದಿನ ಶುಲ್ಕ ನೀಡಿ ಓದಲಾಗುತ್ತಿತ್ತು. ಆದರೆ, ಇಂದು ಉಚಿತವಾಗಿ ನೀಡಿದರೂ ಓದಲು ಬರುವವರೇ ಇಲ್ಲವಾಗಿದೆ. ಇದನ್ನು ಕಂಡೆ ಯುನಿಸ್ಕೋದವರು ಓದುವ ಸಂಸ್ಕೃತಿ ಪ್ರೋತ್ಸಾಹಿಸಲು 1995ರಲ್ಲಿ ವಿಶ್ವ ಪುಸ್ತಕ ದಿನಾಚರಣೆಯನ್ನು ಪ್ರಾರಂಭಿಸಿದರು ಎಂದು ಹೇಳಿದರು.

ಅನೇಕ ಪುಸ್ತಕಗಳನ್ನು ಬರೆದು ಪ್ರಕಟಿಸಿದ ಶೇಷಾದ್ರಿ ಪುಸ್ತಕ ಮನೆಯ ಜನಕ ಎಂದು ಬಣ್ಣಸಿದ ಅವರು, ನಂಜನಗೂಡು ಸತ್ಯನಾರಾಯಣ ಇಂದು ಐತಿಹಾಸಿಕ ಪರಂಪರೆಯ ತವರಾದ ಇಲ್ಲಿ ವಿಶ್ವ ಪುಸ್ತಕ ದಿನಾಚರಣೆ ಏರ್ಪಡಿಸಿರುವುದು ಶ್ಲಾಘನೀಯ. ಈ ಮೂಲಕವಾದರೂ ಓದವವರ ಸಂಖ್ಯೆ ವೃದ್ಧಿಯಾದರೆ ಅವರ ಶ್ರಮ ಸಾರ್ಥಕವಾಗಲಿದೆ ಎಂದು ರಾಜು ತಿಳಿಸಿದರು.

ಪುಸ್ತಕವೇ ಸಂಗಾತಿ: ಸಮಾಜ ಸೇವಕ ಯು.ಎನ್‌. ಪದ್ಮನಾಭರಾವ್‌ ಮಾತನಾಡಿ, ಪುಸ್ತಕ ಓದುವ ಹವ್ಯಾಸ ವೃದ್ಧಾಪ್ಯದ ದಿನಗಳಲ್ಲಿ ನಿಮ್ಮ ಸಂಗಾತಿಯಾಗಬಹುದು. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಓದುವ ಸಂಸ್ಕೃತಿ ರೂಢಿಸಿಕೊಳ್ಳಬೇಕು. ಶಾಲೆಗಳಿಂದಲೇ ಮಕ್ಕಳಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸಬೇಕಿದ್ದು, ಶಿಕ್ಷಕರು ಈ ನಿಟ್ಟಿನತ್ತ ಕಾರ್ಯೋನ್ಮುಖರಾದಾಗ ಮಾತ್ರ ಓದುವ ಸಂಸ್ಕೃತಿ ಉಳಿದು ಬೆಳೆಯಲು ಸಾಧ್ಯ ಎಂದು ಸಲಹೆ ನೀಡಿದರು.

ತಮ್ಮ ಸಂಗ್ರಹದಲ್ಲಿ 5 ರಿಂದ 6 ಸಾವಿರ ಪುಸ್ತಕಗಳಿದ್ದು, ಇವುಗಳೆಲ್ಲವನ್ನೂ ತಾವು ಓದಿದ್ದು ತಮ್ಮಲ್ಲಿ ಓದುವ ಅಭ್ಯಾಸ ಬೆಳೆಸಿದ್ದು 60 ರ ದಶಕದ ಚಂದಮಾಮ ಹಾಗೂ ಎಚ್‌. ನರಸಿಂಹಯ್ಯನವರ ಪತ್ತೆದಾರಿ ಕಾದಂಬರಿ ಎಂಬುದನ್ನು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಶೇಷಾದ್ರಿ ಪುಸ್ತಕ ಮನೆಯ ಮಾಲೀಕರಾದ ನಂಜನಗೂಡು ಸತ್ಯನಾರಾಯಣ, ವಿಚಾರ ವೇದಿಕೆಯ ಜಗದೀಶ, ನಿವೃತ್ತ ಅಧಿಕಾರಿ ಲಿಂಗಣ್ಣಯ್ಯ ,ರಮೇಶ, ಸೌಗಂಧಿಕಾ ಜೋಯಸ್‌, ಲೋಕೇಶ ಮತ್ತಿತರರು ಉಪಸ್ಥಿತರಿದ್ದರು. ಗೊಪಿನಾಥ ಸ್ವಾಗತಿಸಿದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.