ನದಿ ಪಾತ್ರದಲ್ಲಿ ಹೆಚ್ಚು ಗಿಡ ಬೆಳೆಸಿ


Team Udayavani, Sep 7, 2019, 3:00 AM IST

nadi-patra

ಮೈಸೂರು: ಕಾವೇರಿ ನದಿಪಾತ್ರದಲ್ಲಿ ಪರಿಸರ ಉಳಿಸಿ ಬೆಳೆಸುವ ಕಾರ್ಯ ಆಗಬೇಕಾಗಿದ್ದು, ಈ ನಿಟ್ಟಿನಲ್ಲಿ ಸದ್ಗುರು ಜಾಗೃತಿ ಮೂಡಿಸುತ್ತಿರುವುದು ಸಂತಸದ ವಿಚಾರ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು. ಇಶಾ ಫೌಂಡೇಷನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ಕೈಗೊಂಡಿರುವ ರ್ಯಾಲಿಗೆ ಶುಕ್ರವಾರ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದರು.

ಇತ್ತೀಚಿನ ವರ್ಷದಲ್ಲಿ ಅರಣ್ಯ ಪ್ರದೇಶ ದೊಡ್ಡ ಮಟ್ಟದಲ್ಲಿ ನಾಶವಾಗುತ್ತಿದೆ. ಅರಣ್ಯ ನಾಶ ತಡೆಗಟ್ಟಲು ಪ್ರತಿಯೊಬ್ಬರು ಶ್ರಮಿಸುವ ಅವಶ್ಯಕತೆ ಇದೆ. ನಮ್ಮಲ್ಲಿ ಅರಣ್ಯ ಪ್ರದೇಶ ಉತ್ತಮವಾಗಿದ್ದರೆ ಮಳೆ, ಬೆಳೆ ಕೂಡ ಉತ್ತಮವಾಗಿ ಆಗುತ್ತದೆ. ಈ ನಿಟ್ಟಿನಲ್ಲಿ ಮರಗಿಡಗಳನ್ನು ಬೆಳೆಸಲು ಹೊರಟಿರುವ ಸದ್ಗುರು ಅವರಿಗೆ ಪ್ರತಿಯೊಬ್ಬರೂ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ರ್ಯಾಲಿಗೆ ಚಾಲನೆ ದೊರೆಯುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸದ್ಗುರು, ಕಾವೇರಿ ನದಿ ಉಳಿಸುವ ನಿಟ್ಟಿನಲ್ಲಿ ಜನರಲ್ಲಿ ಸಾಕಷ್ಟು ಜಾಗೃತಿ ಇದೆ. ಆದರೆ, ಅದು ಕಾರ್ಯರೂಪಕ್ಕೆ ಬರಬೇಕು. ಈ ಕಾರ್ಯವನ್ನು ಒಬ್ಬರಿಂದ ಮಾಡಲು ಸಾಧ್ಯವಿಲ್ಲ. ಎಲ್ಲರೂ ಕೈಜೋಡಿಸಿದರೆ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದರು.

ಬೆಳೆಸಿದ ಮರವನ್ನು ಬಳಸಿಕೊಳ್ಳುವ ಅಧಿಕಾರ ರೈತರಿಗೆ ಇಲ್ಲ. ಹೀಗಾಗಿ ರೈತರು ಗಿಡಗಳನ್ನು ನೆಟ್ಟು ಬೆಳೆಸಲು ಆಸಕ್ತಿ ತೋರುತ್ತಿಲ್ಲ. ಗಿಡಗಳನ್ನು ನೆಟ್ಟು ಬೆಳೆಸಲು ಸರ್ಕಾರ ಪ್ರೋತ್ಸಾಹ ಧನ ನೀಡುವ ಜತೆಗೆ ಬೆಳೆದ ಮರಗಳನ್ನು ಮಾರಾಟ ಮಾಡುವ ಅಧಿಕಾರ ವನ್ನು ಸಹ ರೈತರಿಗೆ ನೀಡಬೇಕು ಎಂದರು. ತಮಿಳುನಾಡು ಹಾಗೂ ಕರ್ನಾಟಕ ಸರ್ಕಾರದ ಜತೆ ಮಾತುಕತೆ ನಡೆಸಿದ್ದೇನೆ. ಶೀಘ್ರದಲ್ಲಿಯೇ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸುವ ನಿರೀಕ್ಷೆ ಇದೆ ಎಂದು ಹೇಳಿದರು.

ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಪರಿಹರಿಸಲು ನಾನು ಮುಖ್ಯಮಂತ್ರಿ ಅಲ್ಲ. ಎಲ್ಲಾ ಸಮಸ್ಯೆಗಳಿಗೆ ನನ್ನಲ್ಲಿ ಪರಿಹಾರ ಇಲ್ಲ. ಆದರೆ, ಪ್ರವಾಹ ಹಾಗೂ ಬರಗಾಲಕ್ಕೆ ದೀರ್ಘ‌ಕಾಲದ ಪರಿಹಾರ ಅವಶ್ಯಕತೆ ಇದೆ. ಪ್ರವಾಹ ಮತ್ತು ಬರಗಾಲ ಭಿನ್ನವಲ್ಲ. ಇವೆರಡಕ್ಕೂ ಪ್ರಕೃತಿ ನಾಶವೇ ಕಾರಣ. ಹೀಗಾಗಿ ಪ್ರಕೃತಿ ಉಳಿಸಿ ಬೆಳೆಸುವ ಕಾರ್ಯ ಆಗಬೇಕೆಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರ್ಯಾಲಿಯು ಹಾರ್ಡಿಂಜ್‌ ವೃತ್ತ, ಗನ್‌ಹೌಸ್‌, ಚಾಮರಾಜ ಜೋಡಿ ರಸ್ತೆ, ರಾಮಸ್ವಾಮಿ ವೃತ್ತ, ಜೆಎಲ್‌ಬಿ ರಸ್ತೆ, ರೈಲ್ವೆ ನಿಲ್ದಾಣ, ಇರ್ವಿನ್‌ ರಸ್ತೆ, ದೊಡ್ಡಗಡಿಯಾರ ಮೂಲಕ ಸಾಗಿ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಆವರಣದಲ್ಲಿ ಅಂತ್ಯಗೊಂಡಿತು.

ನಂತರ ಚಾಮುಂಡಿಬೆಟ್ಟಕ್ಕೆ ತೆರಳಿದ ಸದ್ಗುರುು ಬೆಟ್ಟದ ನಂದಿ ಆವರಣದಲ್ಲಿ ಸತ್ಸಂಗದಲ್ಲಿ ಭಾಗವಹಿಸಿ ನಂತರ ಸುತ್ತೂರು ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀಗಳೊಂದಿಗೆ ಮಾತುಕತೆ ನಡೆಸಿದರು. ಬಳಿಕ ಜೆಪಿ ನಗರದಲ್ಲಿ ಹಮ್ಮಿಕೊಂಡ ಲಕ್ಷ-ವೃಕ್ಷ ಆಂದೋಲನದಲ್ಲಿ ಪಾಲ್ಗೊಂಡು ಮಂಡ್ಯಕ್ಕೆ ತೆರಳಿದರು.

ಟಾಪ್ ನ್ಯೂಸ್

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಮನೆಯಿಂದ ಹೊರಗೆ ನಾನೂ ಸಾಮಾನ್ಯನೇ: ಯದುವೀರ್‌

ಅರಮನೆಯಿಂದ ಹೊರಗೆ ನಾನೂ ಸಾಮಾನ್ಯನೇ: ಯದುವೀರ್‌

1-asasa

Hunsur:ಆಡಳಿತ ಸೌಧದ ಸೀಲಿಂಗ್ ಕಳಚಿಬಿದ್ದು ಮಹಿಳೆ ಕಾಲ್ಬೆರಳು ತುಂಡು!

1-adasdsa

Hunsur: ಸಾಲಬಾಧೆಯಿಂದ ರೈತ ಅತ್ಮಹತ್ಯೆಗೆ ಶರಣು

1-sasd

BJP; ಟಿಕೆಟ್ ಕೊಡುವಾಗ ಕಾರಣ ಹೇಳಬೇಕಾದ ಅಗತ್ಯ ಪಕ್ಷಕ್ಕಿಲ್ಲ: ಪ್ರತಾಪ್ ಸಿಂಹ

Lok Sabha Polls: ಮೈತ್ರಿ ಅಭ್ಯರ್ಥಿ ಯದುವೀರ್ ಗೆಲುವಿಗೆ ಶ್ರಮ: ಶಾಸಕ ಹರೀಶ್‌ಗೌಡ

Lok Sabha Polls: ಮೈತ್ರಿ ಅಭ್ಯರ್ಥಿ ಯದುವೀರ್ ಗೆಲುವಿಗೆ ಶ್ರಮ: ಶಾಸಕ ಹರೀಶ್‌ ಗೌಡ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.