ಗುಂಜಾ ನರಸಿಂಹಸ್ವಾಮಿ ರಥೋತ್ಸವ


Team Udayavani, Mar 23, 2019, 7:37 AM IST

m5-gunja.jpg

ತಿ.ನರಸೀಪುರ: ಧೂಪದ ಘಮಲು, ಹಣ್ಣು ಜವನಗಳ ಸುರಿಮಳೆ, ನಗಾರಿಗಳ ಭೋರ್ಗರೆತ ಶಬ್ದಗಳ ನಡುವೆ ಪುರಾತನ ಪ್ರಸಿದ್ಧ ಗುಂಜಾ ನರಸಿಂಹಸ್ವಾಮಿಯ ಬ್ರಹ್ಮ ರಥೋತ್ಸವವು ಪಟ್ಟಣದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.

ಹರ್ಷೋದ್ಘಾರ: ಅಲಂಕೃತ ರಥದಲ್ಲಿ ವೀರಾಜಮಾನರಾಗಿದ್ದ ಮಹಾಲಕ್ಷ್ಮೀ ಸಮೇತ ಗುಂಜಾ ನರಸಿಂಹಸ್ವಾಮಿ ಉತ್ಸವ ಮೂರ್ತಿಗಳನ್ನು ಕಂಡು ಪುಳಕಿತರಾದ ಭಕ್ತರ ಹರ್ಷೋದ್ಘಾರಗಳ ನಡುವೆ ವಾಲಿ ವಾಲಾಡಿ ಸಾಗಿ ಬಂದ ರಥೋತ್ಸವ ವೈಭವವನ್ನು ನೆರೆದಿದ್ದ ಜನರು ಕಣ್ತುಂಬಿಕೊಂಡು ಹಣ್ಣು ಜವನವನ್ನು ಎಸೆದು ಧನ್ಯತೆ ಮೆರೆದರು.

ಯುವಕರ ಸಂಭ್ರಮ: ರಥೋತ್ಸವದಿಂದಾಗಿ ಪಟ್ಟಣ ಸೇರಿದಂತೆ ಗುಂಜಾ ನರಸಿಂಹಸ್ವಾಮಿ ದೇವಾಲಯ ಆವರಣ ಜನಸಾಗರದಿಂದ ಕಳೆಗಟ್ಟಿತ್ತು. ಕುಣಿದು ಕುಪ್ಪಳಿಸಿದ ಯುವಕರು ಕೂಡ ಜಾತ್ರೆಗೆ ರಂಗನ್ನು ನೀಡಿದರು. ವಿಶ್ವಕರ್ಮ ಬೀದಿ ಮಾರ್ಗವಾಗಿ ಸಾಗಿದ ರಥ ಯಾವುದೇ ಅಡಚಣೆಯಿಲ್ಲದೆ ಚಿಕ್ಕಅಂಗಡಿ ಬೀದಿಯಲ್ಲಿನ ಸ್ವಸ್ಥಾನವನ್ನು ತಲುಪಿತು.

ಮಂಟಪೋತ್ಸವ: ಪಟ್ಟಣದ ರಥದ ಬೀದಿಗಳಲ್ಲಿ ಉತ್ಸವ ಮೂರ್ತಿಗಳ ಮೆರವಣಿಗೆಯ ಮಂಟಪೋತ್ಸವ ನಡೆಯಿತು. ಮಂಟಪೋತ್ಸವ ತರುವಾಯ ಮಧ್ಯಾಹ್ನ 12.30 ರಿಂದ ಹಸ್ತ ನಕ್ಷತ್ರದಲ್ಲಿ ಸಲ್ಲುವ ಶುಭ ಮೀನ ಕೃಷ್ಣ ದ್ವಿತೀಯ ಲಗ್ನದಲ್ಲಿ ಶೃಂಗಾರಗೊಂಡಿದ್ದ ರಥದ ಬಳಿಗೆ ಉತ್ಸವ ಮೂರ್ತಿಗಳನ್ನು ಹೊತ್ತು ತಂದು ವೇದ ಮಂತ್ರಗಳನ್ನು ಪಠಿಸಿ ಸುತ್ತಲೂ ಮೂರು ಪ್ರದಕ್ಷಿಣೆ ಹಾಕಿಸಿ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.

ಪ್ರದಕ್ಷಿಣೆ: ವ್ಯಾಸರಾಜಪುರ ಯಜಮಾನರು ಆಲಗೂಡಿಗೆ ತೆರಳಿ ಅಲ್ಲಿನ ಯಜಮಾನರನ್ನು ಕರೆತಂದು ಪಟ್ಟಣದ ಯಜಮಾನರ ಜೊತೆಗೂಡಿ ಮಹಾಮಂಗಳಾರತಿ ನೆರವೇರಿಸಿ ಪ್ರದಕ್ಷಿಣೆ ಹಾಕಿದರು. ಉತ್ಸವ ಮೂರ್ತಿಗಳಿಗೆ ಮಹಾಮಂಗಳಾರತಿ ಮಾಡಿದ ನಂತರ ಬ್ರಹ್ಮ ರಥೋತ್ಸವ ವಿಧ್ಯಕ್ತವಾಗಿ ಆರಂಭಗೊಂಡಿತು. 

ಜಾತ್ರೋತ್ಸವ ಪ್ರಯುಕ್ತ ಗುಂಜಾ ನರಸಿಂಹಸ್ವಾಮಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ವಿವಿಧ ಪೂಜಾ ಕೈಂಕರ್ಯ ಹಾಗೂ ಅಭಿಷೇಕ ಉತ್ಸವಗಳು ಸಾಂಗವಾಗಿ ನೆರವೇರಿದವು. ಬಿಳಿಗಿರಿ ರಂಗಸ್ವಾಮಿ ಬೆಟ್ಟದ ಆಗಮಿಕ ನಾಗರಾಜ ಭಟ್ಟರು, ದೇವಾಲಯದ ಪ್ರಧಾನ ಅರ್ಚಕ ಸಂಪತ್‌ ಕುಮಾರ್‌ ಭಟ್ಟರು ಹಾಗೂ ಅರ್ಚಕ ವೆಂಕಟೇಶ್‌ ನೇತೃತ್ವದಲ್ಲಿ ಧಾರ್ಮಿಕ ಕೈಂಕರ್ಯಗಳು ನಡೆದವು.

ಪ್ರಸಾದ: ಹರಕೆ ಹೊತ್ತಿದ್ದ ಭಕ್ತರು ಪಾನಕ, ಮಜ್ಜಿಗೆ ಹಾಗೂ ಉಪಾಹಾರ ವಿತರಿಸಿದರು. ಗುಂಜಾ ನರಸಿಂಹಸ್ವಾಮಿ ರಥೋತ್ಸವ ಹಬ್ಬದ ಸಂಭ್ರಮವನ್ನು ತಂದಿತ್ತು. ಈ ಸಂದರ್ಭದಲ್ಲಿ ತಹಶೀಲ್ದಾರ್‌ ಡಿ.ನಾಗೇಶ, ಕಂತೆಕಟ್ಟೆ ಪಾರುಪತ್ತೇಗಾರ .ನರಸಿಂಹನ್‌, ಸಿ.ರಮೇಶ್‌, ಯಜಮಾನರಾದ ಬಸವಣ್ಣ, ಎಂ.ಮಹದೇವಪ್ಪ, ಭೈರನಾಯಕ, ಎನ್‌.ಮಹದೇವಸ್ವಾಮಿ, ಪುಳ್ಳಾರಿ ಆರ್‌.ಮಹದೇವ, ರಾಜಣ್ಣ, ಪುರಸಭಾ ಸದಸ್ಯರಾದ ಎಸ್‌.ಕೆ.ಕಿರಣ, ಟಿ.ಎಂ.ನಂಜುಂಡಸ್ವಾಮಿ, ಬಾದಾಮಿ ಮಂಜು, ಪಿ.ಪುಟ್ಟರಾಜುಹಾಗೂ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.