ಯಜಮಾನನೇ ಆಡಳಿತದಲ್ಲಿ ಹಿಡಿತ ಕಳೆದುಕೊಂಡಿದ್ದಾರೆ,: ಸಿಎಂ ವಿರುದ್ದ ವಿಶ್ವನಾಥ್ ಟೀಕೆ


Team Udayavani, Apr 29, 2021, 11:58 AM IST

h vishwanath

ಹುಣಸೂರು : ರಾಜ್ಯದಲ್ಲಿ ಸರಕಾರ ನಡೆಸುವ ಯಜಮಾನ ತನ್ನ ಆಡಳಿತದಲ್ಲಿ ಹಿಡಿತವನ್ನೇ ಕಳೆದುಕೊಂಡಿದ್ದಾರೆ, ಎಲ್ಲಾ ಹಂತದಲ್ಲೂ ವೈಫಲ್ಯತೆ ಎದ್ದು ಕಾಣುತ್ತಿದ್ದು, ಆಡಳಿತದಲ್ಲಿ ಭದ್ರತೆ ಇಲ್ಲದಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಮುಖ್ಯಮಂತ್ರಿಗಳ ಹೆಸರು ಹೇಳದೆ ಪರೋಕ್ಷವಾಗಿ ಟೀಕಿಸಿದರು.

ಬೆಂಬಲ ಬೆಲೆ ಯೋಜನೆಯಡಿ ಖರೀದಿಸಿರುವ ರೈತರ ಭತ್ತ-ರಾಗಿಯ 700 ಕೋಟಿ ರೂ ಬಾಕಿ ಉಳಿಸಿಕೊಂಡಿದ್ದು, ಈವರೆಗೂ ಪಾವತಿಸಿಲ್ಲ. ಯಾಕೆಂದರೆ ರೈತರು ಕಮಿಷನ್ ಕೊಡಲು ಅಶಕ್ತರು, ಆದರೆ ಗುತ್ತಿಗೆದಾರರ ಬಿಲ್‌ಗಳು ಮಾತ್ರ ವಾರಕ್ಕೊಮ್ಮೆ ಪಾವತಿಯಾಗುತ್ತಿದ್ದು, ಶೇ.20ರಷ್ಟು ಕಮಿಷನ್ ಕಿಕ್ ಬ್ಯಾಕ್ ಪಡೆಯುವ ಸಂಪ್ರದಾಯ ಎಗ್ಗಿಲ್ಲದೆ ನಡೆಯುತ್ತಿದೆ ಎಂದರು.

ಗ್ರಾಮೀಣ ಪ್ರದೇಶದ ಆಸ್ಪತ್ರೆಯನ್ನು ಸಜ್ಜುಗೊಳಿಸುವ ತವಕ ಆರೋಗ್ಯ ಮಂತ್ರಿಗಳಿಗಿದ್ದರೂ ವೈದ್ಯರ ನೇಮಕಾತಿ ನಡೆಯುತ್ತಿಲ್ಲ, ಅನುದಾನವೂ ಬಿಡುಗಡೆಯಾಗುತ್ತಿಲ್ಲ, ಪ್ರತಿಯೊಂದಕ್ಕೂ ಹಣಕಾಸು ಮಂತ್ರಿಯ ಹಸಿರು ನಿಶಾನೆ ತೋರಬೇಕಿದ್ದು, ಹಣಕಾಸು ಇಲಾಖೆಯೇ ಮುಖ್ಯಮಂತ್ರಿ ಹಿಡಿತದಲ್ಲಿದ್ದು, ಹತ್ತು ರೂಪಾಯಿಗೂ ಕೈಚಾಚಬೇಕಿದೆ. ಮುಖ್ಯಮಂತ್ರಿಗಳು ಸಹ ಆರೋಗ್ಯ ಸಚಿವರ ವೇಗಕ್ಕೆ ತಕ್ಕಂತೆ ಸ್ಪಂದಿಸುತ್ತಿಲ್ಲ,  ಕೊರೋನಾದ 480 ಕೋಟಿ ಬಿಲ್‌ನ್ನು ಆಡಿಟ್ ನಡೆಸಿದ ವೇಳೆ ಎಲ್ಲವೂ ಬಹಿರಂಗವಾಗಿದೆ ಎಂದು ತಮ್ಮದೇ ಸರಕಾರವನ್ನು ಟೀಕಿಸಿದರು.

ಇದನ್ನೂ ಓದಿ:ಕೋವಿಡ್ ನಿಯಂತ್ರಣ: ಮಹಾರಾಷ್ಟ್ರದಲ್ಲಿ ಮೇ 15ರವರೆಗೂ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ

ಕೇಂದ್ರ ಸರಕಾರದಿಂದ ಕಳೆದ ಸಾಲಿನ ಬಜೆಟ್‌ನಲ್ಲಿ ಗ್ರಾಮೀಣ ಆಸ್ಪತ್ರೆಗಳಲ್ಲೇ ಎಲ್ಲ ರೀತಿಯ ಚಿಕಿತ್ಸೆಗೆ ಸಜ್ಜುಗೊಳಿಸಲು ಅನುದಾನ ಮೀಸಲಿಟ್ಟಿದ್ದು. ಇನ್ನೂ ಸಹ ಬಳಕೆಯಾಗಬೇಕಿದೆ ಎಂದರು.

ತಾಲೂಕಿನ ನಿಲುವಾಗಿಲು ಏತ ನೀರಾವರಿ ಯೋಜನೆಗೆ 19 ಕೋಟಿ ರೂ ಅನುದಾನ ಮಂಜೂರಾಗಿ, ಟೆಂಡರ್ ಮುಗಿದು ಗುತ್ತಿಗೆದಾರ ನೇಮಕವಾದ ಬಳಿಕವೂ  ಹಣಕಾಸು ಸಚಿವಾಲಯ ಹಿಂಪಡೆದಿದೆ, ಪ್ರಶ್ನಿಸಿದರೆ ಸಿ.ಎಂ.ಕಚೇರಿ ಆದೇಶವೆನ್ನುತ್ತಾರೆ. ಈಬಗ್ಗೆ ಕಟುವಾಗಿಯೂ ಮಾತನಾಡಿದ್ದೇನೆ. ಸಣ್ಣ ನೀರಾವರಿ ಸಚಿವರು ಸಹ ಪ್ರಶ್ನಿಸಿದ್ದು,  ಶೀಘ್ರವೇ ಯೋಜನೆ ಜಾರಿಗೊಳ್ಳುವ ವಿಶ್ವಾಸವಿದೆ ಎಂದರು. ಈ ವೇಳೆ ಹುಡಾ ಅಧ್ಯಕ್ಷ ಗಣೇಶ್ ಕುಮಾರಸ್ವಾಮಿ, ಹರವೆ ರವಿ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.