ಜೈಲಿಗೆ ಹೋಗಬೇಕಾದರೆ ಕಾಂಗ್ರೆಸ್‌ಗೆ ಮತ ಹಾಕಿ


Team Udayavani, Dec 2, 2019, 12:04 PM IST

news-tdy-2

ಹುಣಸೂರು : ನಾನು ಹುಣಸೂರು ಅಭಿವೃದ್ಧಿಗೆ ಹಲವಾರು ಕನಸುಗಳನ್ನು ಕಂಡಿದ್ದೇನೆ. ಆ ಎಲ್ಲಾ ಕನಸುಗಳನ್ನು ನನಸು ಮಾಡಲು ಮತ ಭಿಕ್ಷೆ ನೀಡಿ, ಎಂದು ಹುಣಸೂರು ಮತದಾರರಿಗೆ ಕರಪತ್ರದ ನೀಡಿ ಎ.ಹೆಚ್.ವಿಶ್ವನಾಥ್ ಮನವಿ ಮಾಡಿಕೊಂಡರು.

ನಗರದಲ್ಲಿ ಮಾದ್ಯಮಗಳ ಜೊತೆ ಸಂವಾದ ನಡೆಸಿದ ಬಿಜೆಪಿ ಅಭ್ಯರ್ಥಿ ಎ.ಹೆಚ್.ವಿಶ್ವನಾಥ್ , ಹುಣಸೂರು ಜಿಲ್ಲೆ ಕಡ್ಡಾಯವಾಗಿ ಮಾಡೇ ಮಾಡುತ್ತೇವೆ.ಇದು ಚುನಾವಣೆಗಾಗಿ ಎತ್ತಿದ ವಿಚಾರವಲ್ಲ. ಕಳೆದ ಒಂದು ವರ್ಷದಿಂದ ಹುಣಸೂರು ಜಿಲ್ಲೆ ಬಗ್ಗೆ ಮಾತನಾಡುತ್ತಾ ಬಂದಿದ್ದೇನೆ. ಹುಣಸೂರು ಕೃಷಿ ಆರ್ಥಿಕ ವಲಯ ಚೆನ್ನಾಗಿದೆ.ರೈತರನ್ನು ಆರ್ಥಿಕವಾಗಿ ಮೇಲೆತ್ತಬೇಕು.ಬೆಳಿಗ್ಗೆ ಎಪಿಎಂಸಿ‌ ಸದಸ್ಯರು ಬಂದು ಹುಣಸೂರು ಜಿಲ್ಲಾ ಮಾರುಕಟ್ಟೆ ಹೇಗಿರುತ್ತೆ ಅಂತ ಕೇಳಿದ್ದಾರೆ. ಹೀಗಾಗಿ ದೇವರಾಜ ಅರಸು ಹೆಸರಲ್ಲೇ ಜಿಲ್ಲೆ ಮಾಡಲು ಬದ್ಧವಾಗಿದೆ ಎಂದರು.

ಸಾಹಿತಿಗಳ ಮೇಲೆ ಹರಿಹಾಯ್ದ ಹಳ್ಳಿಹಕ್ಕಿ: ರಾಜ್ಯದಲ್ಲಿ ಸಾಹಿತ್ಯ ಭೌಧಿಕ ದಿವಾಳಿಯಾಗಿದೆ. ಸಾಹಿತಿಗಳು ಭೌದ್ಧಿಕವಾಗಿ ದಿವಾಳಿಯಾಗಿದ್ದಾರೆ. ಜನತಂತ್ರ ವ್ಯವಸ್ಥೆಯಲ್ಲಿ ನೀವು ಎಲ್ಲಾದರೂ ರಾಜಕೀಯವಾಗಿ ಚರ್ಚೆ ಮಾಡಿದ್ದೀರಾ? ಸಾಹಿತಿಗಳು ಚಿಂತಕರು ಮನೆಯಲ್ಲಿ ಕೂತು ಹೇಳಿಕೆ ಕೊಡುತ್ತೀರಾ.ಜನರ ಮನಸ್ಸಿನಲ್ಲಿ ಏನಿದೆ ಅಂತ ಬಂದು ನೋಡಿದ್ದೀರ.
ನೀವು ಯಾವುದೋ ಪಕ್ಷ, ಯಾವುದೋ ರಾಜಕಾರಣಿ ಪರ ಮಾತನಾಡುತ್ತೀರಿ. ನಾನು ನಿಮ್ಮಂತೆ ಕಾಗಕ್ಕ ಗೂಬಕ್ಕನ ಕಥೆ ಬರೆದಿಲ್ಲ. ನಾನು ವಸ್ತುಸ್ಥಿತಿಯ ಸಾಹಿತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ಹಣಕ್ಕಾಗಿ ಅಧಿಕಾರಕ್ಕಾಗಿ ಜೆಡಿಎಸ್ ಗೆ ರಾಜೀನಾಮೆ ಕೊಟ್ಟಿಲ್ಲ. ನಾನು ಸ್ವಾಭಿಮಾನಕ್ಕೆ ಪೆಟ್ಟಾಗಿ ರಾಜೀನಾಮೆ ಕೊಟ್ಟಿದ್ದೇನೆ. ಆಗ ಮತ ಕೊಟ್ಟ ಜನರಿಗೆ ಹೇಳಲು‌ ಸಾಧ್ಯವಾಗಲಿಲ್ಲ. ನನ್ನ ಮನಸ್ಸಿಗೆ ಘಾಸಿಯಾಗಿ ನಾನು ರಾಜೀನಾಮೆ ಕೊಡಬೇಕಾಗಿ ಬಂತು. ಹುಣಸೂರಿನಲ್ಲಿ‌ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹನುಮಜಯಂತಿ ವೇಳೆ ಸುಳ್ಳು ಕೇಸ್‌ಗಳನ್ನು ಹಾಕಲಾಗಿದೆ. 80 ವರ್ಷ ವಯಸ್ಸಾದವರಿಗೂ ರೌಡಿ ಶೀಟರ್ ಓಪನ್ ಮಾಡಲಾಗಿದೆ. ಹುಣಸೂರಿನಲ್ಲಿ ಹಬ್ಬ ಹರಿದಿನ ಮಾಡಲು ಪೊಲೀಸ್ ಅನುಮತಿ ಬೇಕಿದೆ ಎಂದರು.

ನಾನು ಅಭಿವೃದ್ಧಿಗೆ ಮತ ಕೇಳುತ್ತಿದ್ದೇವೆ. ಕಾಂಗ್ರೆಸ್ ಮತ ಕೇಳುತ್ತಿರುವುದು ಜನರ ಮೇಲೆ ಕೇಸ್ ಹಾಕಸಲಾ? ನಿಮಗೆ ಮತ ಹಾಕಿ ಜನ ಜೈಲಿಗೆ ಹೋಗಬೇಕಾ. ನಾನು ಅಧಿಕಾರಕ್ಕೆ ಬಂದ ತಕ್ಷಣ ಜನರ‌ ಮೇಲಿನ‌ ಕೇಸ್ ಗಳನ್ನು ವಾಪಸ್ ತೆಗೆಸಲಾಗುತ್ತೆ. ಈ ಬಗ್ಗೆ ಮುಖ್ಯಮಂತ್ರಿಗಳೇ ಭರವಸೆ ನೀಡಿದ್ದಾರೆ. ಪ್ರೀತಿ ವಿಶ್ವಾಸಕ್ಕೆ ಬಿಜೆಪಿಗೆ ಮತ ಕೊಡಿ, ಜೈಲಿಗೆ ಹೋಗಬೇಕಾದರೆ ಕಾಂಗ್ರೆಸ್‌ಗೆ ಮತ ಹಾಕಿ. ಲಕ್ಷ್ಮಣ ತೀರ್ಥ ನದಿ‌ ಶುದ್ದೀಕರಕ್ಕೆ ಕ್ರಮ ವಹಿಸಲಾಗುತ್ತಿದೆ. ಇದಕ್ಕೆ 125 ಕೋಟಿ ವೆಚ್ಚದ ಪ್ರಾಜೆಕ್ಟ್ ರೆಡಿಯಾಗಿದೆ. ಹುಣಸೂರು ಜಿಲ್ಲೆಯಾಗಲು ಯೋಗ್ಯವಾದ ಸ್ಥಳವಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.