ರಮೇಶ್ಕುಮಾರ್ರನ್ನು ಒದ್ದು ಒಳಗೆ ಹಾಕಿ: ಎಚ್.ವಿಶ್ವನಾಥ್
Team Udayavani, Mar 10, 2020, 7:40 PM IST
ಮೈಸೂರು: “ಮುಸ್ಲಿಮರೆಲ್ಲ ಸಂಘಟಿತರಾಗಿ ಎದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಒದ್ದು ದೇಶದಿಂದ ಹೊರಹಾಕಿ’ ಎಂದು ಹೇಳಿಕೆ ನೀಡಿರುವ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ಕುಮಾರ್ ವಿರುದ್ಧ ಸರ್ಕಾರ ಪ್ರಕರಣ ದಾಖಲಿಸಿಕೊಂಡು, ಅವರನ್ನು ಒದ್ದು ಒಳಗೆ ಹಾಕಬೇಕು ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾನೇ ಯೇಸು, ನಾನೇ ಬಸವೇಶ್ವರ, ನಾನೇ ರಾಮಾನುಜಾಚಾರ್ಯ, ಶಂಕರಾಚಾರ್ಯ’ ಎಂದು ಬೊಗಳೆ ಬಿಡುವ ರಮೇಶ್ಕುಮಾರ್, ಪ್ರಧಾನಿ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಸರ್ಕಾರ ಸುಮ್ಮನೆ ಕೂರದೆ ಪ್ರಕರಣ ದಾಖಲಿಸಿ, ಅವರನ್ನು ಜೈಲಿಗೆ ಹಾಕಬೇಕು. ಸಂವಿಧಾನಬಾಹಿರವಾಗಿ ಮಾತನಾಡುವ ಎಲ್ಲರ ಮೇಲೂ ಪಕ್ಷಾತೀತವಾಗಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದರು.
ಸೀರೆ, ಪಂಚೆ ಕೊಟ್ಟು ಋಣ ತೀರಿಸಬೇಡಿ:
ಎಚ್.ಡಿ.ಕುಮಾರಸ್ವಾಮಿ ಮಗನ ಮದುವೆ ಹೆಸರಲ್ಲಿ ರಾಮನಗರ, ಚನ್ನಪಟ್ಟಣದ ಜನತೆಗೆ ಸೀರೆ, ಪಂಚೆ ಕೊಟ್ಟು ಊಟ ಹಾಕಿಸಿ, ಋಣ ತೀರಿಸುವುದಲ್ಲ. ಜನಪರ ಕಾರ್ಯಕ್ರಮ ಕೊಟ್ಟು ಆ ಜನರ ಋಣ ತೀರಿಸಬೇಕೆಂದು ಸಲಹೆ ನೀಡಿದರು. ಸಚಿವ ಶ್ರೀರಾಮುಲು ಕೂಡ ಬಳ್ಳಾರಿಯಲ್ಲಿ 500, ಸಾವಿರ ಜನರ ಸಾಮೂಹಿಕ ವಿವಾಹ ಮಾಡುವವರು. ಆದರೆ, ತಮ್ಮ ಮಗಳನ್ನು ಬೆಂಗಳೂರಿಗೆ ಕರೆ ತಂದು ಅದ್ಧೂರಿಯಾಗಿ ಮದುವೆ ಮಾಡಿಕೊಡುತ್ತಾರೆ. ಇವರಿಗೆ ಏನು ಹೇಳುವುದು ಎಂದು ಮೂದಲಿಸಿದರು.
ನಾನು, ಮಾಜಿ ಸಚಿವರಾದ ಜಿ.ಟಿ.ದೇವೇಗೌಡ, ಆಂಜನೇಯ ಅವರು ನಮ್ಮ ಮಕ್ಕಳಿಗೆ ಸರಳ ವಿವಾಹ ಏರ್ಪಡಿಸಿ ಆದರ್ಶ ಮೆರೆದಿದ್ದೇವೆ ಎಂದು ಸ್ಮರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ