ಸಂಸದ ಶ್ರೀನಿವಾಸ್ ಪ್ರಸಾದ್ ರಾಜಕೀಯ ಅಲೆಮಾರಿಗಳ ರಾಜ
Team Udayavani, Dec 15, 2022, 8:00 PM IST
ಮೈಸೂರು: ಸಂಸದ ವಿ. ಶ್ರೀನಿವಾಸ ಪ್ರಸಾದ್ ರಾಜಕೀಯ ಅಲೆಮಾರಿಗಳ ರಾಜ. ಅವರು ಒಂದೇ ಪಕ್ಷವನ್ನು ಎರಡೆರಡು ಬಾರಿ ಸೇರ್ಪಡೆಯಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಾಗ್ಧಾಳಿ ನಡೆಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಮ್ಮನ್ನು ಶ್ರೀನಿವಾಸ ಪ್ರಸಾದ್ ರಾಜಕೀಯ ಅಲೆಮಾರಿ ಎಂದು ಟೀಕಿಸಿರುವುದಕ್ಕೆ ಪ್ರತಿಕ್ರಿಯಿಸಿ, ನಾನು ಹಾಗೂ ಶ್ರೀನಿವಾಸಪ್ರಸಾದ್ ಹಳೆಯ ಸ್ನೇಹಿತರು, ಬಹುಕಾಲದ ಒಡನಾಡಿಗಳು. ಅದೆಲ್ಲವನ್ನು ಮರೆತು ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರನ್ನು ನಾನು ಭೇಟಿ ಮಾಡಿದ್ದನ್ನೇ ಘೋರ ಅಪರಾಧ ಎಂಬಂತೆ ಪ್ರಸಾದ್ ಬಿಂಬಿಸುತ್ತಿರುವುದು ಅವರ ವ್ಯಕ್ತಿತ್ವಕ್ಕೆ ಸರಿಯಲ್ಲ. ಯಾರನ್ನು ಮೆಚ್ಚಿಸಲು ನನ್ನ ವಿರುದ್ದ ಮುಗಿಬಿದ್ದಿದ್ದೀರಿ. ಸಂಸತ್ ಸದಸ್ಯರಾಗಿರುವ ನೀವು ನಿಮ್ಮ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಗಮನ ನೀಡುವ ಬದಲು ಏಕಾಏಕಿ ನನ್ನ ವಿರುದ್ಧ ಏಕೆ ತಿರುಗಿ ಬಿದ್ದಿದ್ದೀರಿ ಎಂದು ಕಿಡಿಕಾರಿದರು.
ಹಣದ ಆಮಿಷ ಒಡ್ಡಿದ್ದರು: ನಾನು ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಲು ಯಡಿಯೂರಪ್ಪ, ಅವರ ಮಗ ವಿಜಯೇಂದ್ರ ಹಾಗೂ ಶ್ರೀನಿವಾಸಪ್ರಸಾದ್ ಅವರು ನನಗೆ ಹಣದ ಆಮಿಷ ಒಡ್ಡಿದ್ದರು. ಈ ಬಗ್ಗೆ ಬಾಂಬೆ ಡೈರೀಸ್ ಪುಸ್ತಕದಲ್ಲಿ ಉಲ್ಲೇಖೀಸಿದ್ದೇನೆ. ಪುಸ್ತಕದ ಮೊದಲ ಅಧ್ಯಾಯದÇÉೇ ಈ ವಿಚಾರವಿದೆ ಎಂದು ಹೊಸ ಬಾಂಬ್ ಸಿಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!