ಜಂಬೂ ಸವಾರಿನೋ, ಬಂಬೂ ಸವಾರಿನೋ?


Team Udayavani, Oct 6, 2020, 12:57 PM IST

ಜಂಬೂ ಸವಾರಿನೋ, ಬಂಬೂ ಸವಾರಿನೋ?

ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ತೀವ್ರತೆ ಹೆಚ್ಚಾಗಿರುವ ಈ ಹೊತ್ತಿನಲ್ಲಿ ದಸರಾ ಆಚರಿಸುವ ಮೂಲಕ ಬಂಬೂ ಸವಾರಿ ಮಾಡಲು ಹೊರಟಿದ್ದೀರಾ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಕಿಡಿಕಾರಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಹಾಗೂ ಮರಣ ಪ್ರಮಾಣ ಹೆಚ್ಚುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ನಿತ್ಯ10 ಸಾವಿರ ಸೋಂಕಿತ ಪ್ರಕರಣಗಳಿದ್ದರೆ ಮೈಸೂರಿನಲ್ಲಿ ಎರಡು ದಿನದಿಂದ ಸಾವಿರಕ್ಕೂ ಹೆಚ್ಚು ಪಾಸಿಟಿವ್‌ ಪ್ರಕರಣಗಳು ವರದಿಯಾಗಿದೆ. ಈ ನಡುವೆ ದಸರಾ ಮಾಡಲು ಅವಕಾಶ ಮಾಡಿಕೊಡಲಾಗಿದೆ. ನೀವೇನು ಜಂಬೂ ಸವಾರಿ ಮಾಡುತ್ತಿ ದ್ದೀರೋ? ಇಲ್ಲ ಬಂಬೂ ಸವಾರಿ ಮಾಡಲು ಹೊರಟ್ಟಿದ್ದೀರಾ ಎಂದು ಉಸ್ತುವಾರಿ ಸಚಿವರ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ಎರಡು ಸಾವಿರ ಮಂದಿಯನ್ನು ಸೇರಿಸಿ ದಸರಾ ಮಾಡುತ್ತೇನೆ ಎಂದು ಉಸ್ತುವಾರಿ ಸಚಿವರು ಹೇಳಿದ್ದಾರೆ. ಎರಡು ಸಾವಿರ ಎಂದರೆ ಅಲ್ಲಿ ಹತ್ತು ಸಾವಿರ ಮಂದಿ ಸೇರುತ್ತಾರೆ. ರಾಜಕಾರಣಿಗಳು, ಅಧಿಕಾರಿಗಳು, ಕುಟುಂಬಸ್ಥರು, ಮಾಧ್ಯಮ ದವರು ಸೇರಿ ಹತ್ತು ಸಾವಿರ ಮಂದಿ ಆಗುತ್ತಾರೆ. ಈಗಲೇ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಹಾಸಿಗೆಗಳಕೊರತೆ ಇದೆ. ಒಂದು ವೇಳೆ ದಸರಾವನ್ನು ನಡೆಸಿದರೆ ಹೊಸ ಆಸ್ಪತ್ರೆ ನಿರ್ಮಿಸಬೇಕಾಗುತ್ತದೆ. ಇದು ತುಂಬಾ ಗಂಭೀರವಾದ ವಿಷಯ ಎಂದರು.

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ಹತ್ತಿರ ಚರ್ಚಿಸಿದ್ದೇನೆ. ಸರಳ ದಸರಾ ಅಂದರೆ ಸಾಂಕೇತಿಕವಾಗಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಬೇಕು ಅಷ್ಟೇ. ಉಳಿದ ಯಾವ ಕಾರ್ಯಕ್ರಮಗಳು ಇಂತಹ ಪರಿಸ್ಥಿತಿಯಲ್ಲಿ ನಡೆಸುವುದು ತರವಲ್ಲ. ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಬೇಡ. ಜನ ಲಾಕ್‌ಡೌನ್‌ನಿಂದ ಬೇಸತ್ತಿದ್ದು, ಈಗ ಕೋತಿ ಕುಣಿದರೆ ಸಾಕು ಅಂತ ಸೇರುತ್ತಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮ ಮಾಡಲು ಹೋಗಿ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾದರೆ ಯಾರು ಹೊಣೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಿಗೆ, ಜಿಲ್ಲಾಡಳಿತಕ್ಕೆ ಈ ಗಾಂಭೀರ್ಯತೆ ಏಕೆ ಅರ್ಥವಾಗುತ್ತಿಲ್ಲ ಎಂದು ಪ್ರಶ್ನಿಸಿದರು.

ಈ ಬಗ್ಗೆ ಜಿಲ್ಲೆಯ ಹಿರಿಯ ಮುಖಂಡರು ಅರ್ಥ ಮಾಡಿಸುತ್ತಿಲ್ಲ. ದಸರಾ ಮಾಡಿ ಅಂತ ಹೇಳುತ್ತಿದ್ದಾರೆ. ಶಾಸಕರಾದ ರಾಮದಾಸ್‌, ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್‌ ಅವರು ಜಿಲ್ಲಾ ಮಂತ್ರಿಗಳಿಗೆ ಸಲಹೆ ಕೊಡಬೇಕು. ಅದನ್ನು ಬಿಟ್ಟು ದಸರಾ ಮಾಡಿ ಅಂತ ಹೇಳುವುದಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.