ದಾನಿಗಳಿಂದ 250 ಜೀವರಕ್ಷಕ ಕಿಟ್ ಸಂಗ್ರಹ, ಹೆಣದ ಮುಂದೆ ಹಣ ಮಾಡಬೇಡಿ : ಎಂ.ಎಲ್.ಸಿ.ವಿಶ್ವನಾಥ್


Team Udayavani, May 24, 2021, 5:36 PM IST

h Vishwanath Statement on Covid 19 in Mysore

ಹುಣಸೂರು : ಮೊದಲೆಲ್ಲಾ 800 ರೂಗೆ ಸಿಗುತ್ತಿದ್ದ ಆಕ್ಸಿಜನ್ ಸಿಲಿಂಡರ್ ಈಗ 12 ಸಾವಿರಕ್ಕೇರಿದ್ದು, ಹೆಣದ ಮುಂದೆ ಹಣ ಮಾಡಲು ಹೊರಟಿರುವುದು ಬೇಸರದ ಸಂಗತಿ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಫೀವರ್ ಕ್ಲೀನಿಕ್ ಕಟ್ಟಡ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿದ್ದ ಎಂ.ಎಲ್.ಸಿ.ವಿಶ್ವನಾಥ್ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿ, ಕೊವಿಡ್ ಮಹಾಮಾರಿ ಎಲ್ಲೆಡೆ ಆವರಿಸಿರುವ ಸಂದರ್ಭದಲ್ಲಿ ದಾನಿಗಳು, ಸ್ನೇಹಿತರನ್ನು ಕೇಳಿದರೆ ಕೊಡುವವರಿದ್ದಾರೆ, ಆದರೆ ಯಾರೋ ಕೊಟ್ಟಿದ್ದನ್ನು ನಾನೆ ಕೊಟ್ಟೆ ಎನ್ನುವುದು ತರವಲ್ಲ. ಕಾರ್ಯಕರ್ತರು ನಮ್ಮ ಲೀಡರ್ ಕೊಟ್ಟಿದ್ದಾರೆಂದು ಬಿಂಬಿಸುವುದೂ ಸರಿಯಲ್ಲ. ಈ ವೇಳೆಯಲ್ಲಿ ಎಲ್ಲವನ್ನೂ ಮರೆಯಬೇಕು, ರಾಜಕಾರಣಿಗಳು, ಅಧಿಕಾರಿಗಳು, ಪೊಲೀಸ್ ಒಂದಾಗಿ ಸಂಕಷ್ಟಕ್ಕೊಳಗಾದವರ ನೆರವಿಗೆ ನಿಲ್ಲಬೇಕೆಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ : 2019ರ ನವೆಂಬರ್ ನಲ್ಲಿಯೇ ಚೀನಾದ WIV ನ ಸಂಶೋಧಕರು ಹಾಸ್ಪಿಟಲ್ ಕೇರ್ ಕೋರಿದ್ದರು.! : WSJ

ಹಿಂದೆ ಸಾವಿರಕ್ಕೆ ಸಿಗುತ್ತಿದ್ದ ಒಂದು ಆಕ್ಸಿಜನ್ ಸಿಲೆಂಡರ್ ಕೋವಿಡ್ ಆರಂಭದಲ್ಲಿ ೧೨೦೦ಕ್ಕೇರಿತ್ತು. ಈಗ ೧೨ ಸಾವಿರ ನಿಗದಿ ಮಾಡಿದೆ. ಬಡವರ ಕಷ್ಟದಲ್ಲಿ ನೆರವಾಗಬೇಕೇ ವಿನಹ, ಯಾರೇ ಆಗಲಿ ಹೆಣದ ಮುಂದೆ ದುಡ್ಡು ಮಾಡೋದನ್ನು ನಿಲ್ಲಿಸಬೇಕೆಂದರು.

250 ಔಷಧ ಕಿಟ್ ವಿತರಣೆ:

ದೆಹಲಿಯಲ್ಲಿ ಸಂದೇಶ್ ಫಾರ್ಮಿಕಲ್ಸ್ ಹೊಂದಿರುವ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಸಂದೇಶ್‌, ತಾಲೂಕಿನ ಕೋವಿಡ್ ಸೋಂಕಿನಿಂದ ಹೋಂ ಐಸ್ಯೂಲೇಷನ್‌ ಗೊಳಗಾದವರಿಗಾಗಿ 250 ಜೀವರಕ್ಷಕ ಔಷಧ ಕಿಟ್ಟನ್ನು ಕೊಡುಗೆಯಾಗಿ ನೀಡುತ್ತಿದ್ದು. ಇದರಲ್ಲಿ ಕೊಯಮುತ್ತೂರು ಕಾಲೋನಿಯ ಕೆಲ ಸೋಂಕಿತರಿಗೆ ವಿತರಿಸಿ, ಉಳಿದವನ್ನು ತಾಲೂಕು ಆಡಳಿತಕ್ಕೆ ಹಸ್ತಾಂತರಿಸಲಾಗುವುದೆಂದರು.

ಆದಿವಾಸಿಗಳಿಗೆ ಪಡಿತರ:

ತಾಲೂಕಿನ ಸುಮಾರು ಆರು ಸಾವಿರ ಆದಿವಾಸಿ ಕುಟುಂಬಗಳಿಗೆ ಹಾಗೂ ಆಶ್ರಮ ಶಾಲೆ ಮಕ್ಕಳಿಗೂ ಸರಕಾರದ ವತಿಯಿಂದಲೇ ಪ್ರತ್ಯೇಕ ಪಡಿತರ ವಿತರಿಸಲಾಗುತ್ತಿದೆ. ಇದೇ ಮಾದರಿಯಲ್ಲಿ ಜಿಲ್ಲಾದ್ಯಂತ ಆದಿವಾಸಿಗಳಿಗೆ ಕಿಟ್ ವಿತರಣೆಯಾಗುತ್ತಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಆದಿವಾಸಿಗಳು ಗೆಡ್ಡೆ-ಗೆಣಸು ಕಿತ್ತು ರಾಶಿಹಾಕಿರುವ ಬಗ್ಗೆ ವ್ಯಾಪಕ ಪ್ರಚಾರವಾಗುತ್ತಿರುವುದು ಬೇಸರದ ಸಂಗತಿ, ಈ ಬಗ್ಗೆ ಸುಖಾಸುಮ್ಮನೆ ಪ್ರಚಾರ ನೀಡಬಾರದೆಂದು ಮನವಿ ಮಾಡಿದರು.

ಸಮಾಜಾಯಿಷಿ ನೀಡಿದ ತಹಸೀಲ್ದಾರ್ ಬಸವರಾಜು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಕಳೆದ ವರ್ಷದ್ದೆಂದು ಮಾಹಿತಿ ಪಡೆಯಲಾಗಿದೆ. ಆದರೆ ತಮಗೂ ವರ್ಷದ ಪಡಿತರ ಜೊತೆಗೆ ಹತ್ತು ಸಾವಿರ ರೂ ಪ್ಯಾಕೇಜ್ ಘೋಷಣೆ ಮಾಡಬೇಕು, ಅರಣ್ಯಹಕ್ಕು ಮಾನ್ಯತಾ ಕಾಯ್ದೆ ಜಾರಿಗೊಳಿಸಿಕೊಡಬೇಕೆಂದು ನ್ಯಾಯಾಧೀಶರೊಂದಿಗೆ ನೇರಳಕುಪ್ಪೆ ಹಾಡಿಗೆ ಭೇಟಿ ನೀಡಿದ್ದ ವೇಳೆ ಆದಿವಾಸಿಗಳು ಮನವಿ ಮಾಡಿದ್ದಾರೆ. ಈಗಾಗಲೆ ತಾಲೂಕಿನಾದ್ಯಂತ ಆದಿವಾಸಿಗಳಿಗೆ ಹಾಗೂ ಆಶ್ರಮ ಶಾಲಾ ಮಕ್ಕಳಿಗೆ ಪಡಿತರ ವಿತರಣೆಯಾಗುತ್ತಿದೆ ಎಂದರು.

ಎಂ.ಎಲ್.ಸಿ.ಯವರೊಂದಿಗೆ ತಾಲೂಕು ಬಿಜೆಪಿ ಅಧ್ಯಕ್ಷ ಹಳ್ಳದಕೊಪ್ಪಲುನಾಗಣ್ಣ, ಮಹಿಳಾ ಅಧ್ಯಕ್ಷೆ ಕಮಲಾಪ್ರಕಾಶ್, ನಗರಸಭೆ ಸದಸ್ಯರಾದ ಹರೀಶ್, ಸಾಯಿನಾಥ್, ಉಮೇಶ್, ಶ್ರೀನಿವಾಸ್, ರಮೇಶ್, ಮಾಜಿ ಅಧ್ಯಕ್ಷ ಶಿವಕುಮಾರ್, ಮುಖಂಡರಾದ ಹಳ್ಳಿಮನೆ ಸಂದೇಶ್(ಸ್ಯಾಂಡಿ), ಡಾ. ಶ್ರೀಕಾಂತ್, ಇಂಟೆಕ್‌ರಾಜು, ನಿಂಗರಾಜ್‌ ಮಲ್ಲಾಡಿ, ಬಲ್ಲೇನಹಳ್ಳಿ ಕೆಂಪರಾಜ್ ಇದ್ದರು.

ಇದನ್ನೂ ಓದಿ :  ಕೋವಿಡ್ ನಿಯಮದಿಂದ ತಪ್ಪಿಸಿಕೊಳ್ಳಲು ವಿಮಾನದಲ್ಲಿ ಮದುವೆ; ವೈರಲ್ ವಿಡಿಯೋದಿಂದ ತನಿಖೆಯ ಬಿಸಿ!

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.