Mysore; ಈ ಬಾರಿಯ ದಸರಾ ಉದ್ಘಾಟನೆಗೆ ಹಂಸಲೇಖ: ಸಿಎಂ ಸಿದ್ದರಾಮಯ್ಯ ಘೋಷಣೆ
Team Udayavani, Aug 29, 2023, 11:02 AM IST
ಮೈಸೂರು: ಚಿತ್ರ ಸಾಹಿತಿ- ಸಂಗೀತ ನಿರ್ದೇಶಕ ಹಂಸಲೇಖ ಅವರು ಈ ಬಾರಿ ದಸರಾ ಉದ್ಘಾಟನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜತೆಗಿದ್ದರು.
ಇದೇ ವೇಳೆ ಸಿಎಂ, ಡಿಸಿಎಂ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಚಾಮುಂಡಿ ದೇವಿಯ ಮುಂಭಾಗದಲ್ಲಿ ಈಡುಗಾಯಿ ಹರಕೆ ತೀರಿಸಿದರು. ಚಾಮುಂಡಿ ಬೆಟ್ಟದ ಮುಂಭಾಗದ ಗೋಪುರದ ಮುಂದೆ ಈಡುಗಾಯಿ ಒಡೆದರು. ಡಿಸಿಎಂ ಡಿಕೆ ಶಿವಕುಮಾರ್ ಅವರು ಎರಡು ಈಡುಗಾಯಿ ಒಡೆದರು.
ಇದನ್ನೂ ಓದಿ:Jailer: ಆರ್ಸಿಬಿ – ಜೈಲರ್ ಜೆರ್ಸಿ ವಿವಾದ; ಕೋರ್ಟ್ ಆದೇಶಕ್ಕೆ ತಲೆಬಾಗಿದ ನಿರ್ಮಾಪಕರು
ಡಿ.ಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಸಂಬಂಧ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ವಿರೋಧ ಪಕ್ಷಗಳು ಎಷ್ಟು ನಮ್ಮನ್ನ ದೂರ ಮಾಡಲು ಯತ್ನ ಮಾಡಿತ್ತಿದ್ಧಾರೋ ಅಷ್ಟು ನಾವಿಬ್ಬರು ಹತ್ತಿರವಾಗುತ್ತಿದ್ದೇವೆ ಎಂದರು.
ಇದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ವಿರೋಧ ಪಕ್ಷಗಳು ನಮ್ಮಿಬ್ಬರ ಸಂಬಂಧ ವಿಚಾರದ ಬಗ್ಗೆ ಮಾತನಾಡುತ್ತಲೇ ಇರಲಿ. ನಾವು ಮಾತ್ರ ಸದಾ ಒಟ್ಟಾಗಿರುವುದನ್ನ ನೀವು ನೋಡುತ್ತಿರುತ್ತೀರಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ