ಹನುಮ ಮಾಲಾಧಾರಿಗಳು ಬಂದೂಕು ತಂದಿದ್ದರೆ?


Team Udayavani, Dec 5, 2017, 8:57 AM IST

05-13.jpg

ಮೈಸೂರು: ಹನುಮ ಜಯಂತಿ ಮೆರವಣಿಗೆಯಲ್ಲಿ ಭಾಗವಹಿಸಲು ಬರುತ್ತಿದ್ದ ಹನುಮ ಮಾಲಾಧಾರಿಗಳನ್ನು ಬಂಧಿಸಿದ ರಾಜ್ಯಸರ್ಕಾರದ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸಂಸದೆ ಶೋಭಾ ಕರಂದ್ಲಾಜೆ, ಹುಣಸೂರಿಗೆ ಹೊರಟಿದ್ದ ಸಂಸದ ಪ್ರತಾಪ್‌ ಸಿಂಹ ಅವರನ್ನು ಬಂಧಿಸಿದ್ದೇಕೆ? ಹನುಮ ಮಾಲಾಧಾರಿಗಳನ್ನು ಬಂಧಿಸಲು ಅವರೇನು ಬಂದೂಕು, ತಲ್ವಾರ್‌ ಹಿಡಿದು ಬಂದಿದ್ದರೆ ಎಂದು ಪ್ರಶ್ನಿಸಿದ್ದಾರೆ.

ನಗರದ ಗಾಂಧಿ ಚೌಕದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸರ್ಕಾರಕ್ಕೆ ತಾಕತ್ತಿದ್ದರೆ ಹುಬ್ಬಳ್ಳಿಯ ಗಣೇಶ ಪೇಟೆಯನ್ನು ಪಾಕಿಸ್ತಾನ ಎಂದು ಕರೆದಿರುವ ಮುಲ್ಲಾನನ್ನು ಬಂಧಿಸಲಿ ಎಂದು ಸವಾಲು ಹಾಕಿದರು.

ಬಂಧಿತರ ಬಿಡುಗಡೆ 
ಮೈಸೂರು: ಹನುಮ ಜಯಂತಿ ವೇಳೆ ಹುಣಸೂರಿನಲ್ಲಿ ಭಾನುವಾರ ಬಂಧಿಸಲಾಗಿದ್ದ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ 58
ಕಾರ್ಯಕರ್ತರನ್ನು ಸೋಮವಾರ ರಾತ್ರಿ ಮೈಸೂರಿನ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಯಿತು. ಮೆರವಣಿಗೆ ಸಂಬಂಧ ತಿಕ್ಕಾಟ ನಡೆದ ವೇಳೆ ಭಾನುವಾರ ಸಂಸದ ಪ್ರತಾಪ್‌ಸಿಂಹ ಅವರನ್ನು ಬಂಧಿಸಿದ್ದ ಪೊಲೀಸರು ಠಾಣಾ ಜಾಮೀನು ಪಡೆದು ಬಿಡುಗಡೆ ಮಾಡಿದ್ದರು. 

“ಡೀಸಿ, ಎಸ್‌ಪಿ ನಾಟಕ ಮಾಡುವ ಅಗತ್ಯವಿರಲಿಲ್ಲ’
ಹನುಮಜಯಂತಿ ಮೆರವಣಿಗೆಯಲ್ಲಿ ಭಾಗವಹಿಸದಂತೆ ತಡೆಯುವ ಮೂಲಕ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರು ನಾಟಕವಾಡುತ್ತಿದ್ದಾರೆ ಎಂದು ಸಂಸದ ಪ್ರತಾಪ್‌ ಸಿಂಹ ಟೀಕಿಸಿದರು. ಹುಣಸೂರಿನಲ್ಲಿ ಹನುಮ ಜಯಂತಿ ಮೆರವಣಿಗೆಯನ್ನು ರಂಗನಾಥ ಬಡಾವಣೆಯ ರಾಮಮಂದಿರದಿಂದ ಆರಂಭಿಸುತ್ತೇವೆಂದು ನ.23ರಂದು ಮನವಿ ಮಾಡಲಾಗಿತ್ತು. ಅಲ್ಲದೆ ಡೀಸಿ, ಎಸ್ಪಿ ಅವರೊಂದಿಗೆ ಈ ವಿಷಯದ ಬಗ್ಗೆ ಚರ್ಚೆ ಸಹ ನಡೆಸಲಾಗಿತ್ತು. ಆದರೆ 29ರಂದು ನಾವು ಸೂಚಿಸಿದ ಮಾರ್ಗದಲ್ಲಿ ಹೋಗಬೇಕೆಂದು ಹೇಳಿದರು.

ಈ ನಿರ್ಬಂಧ ತೆಗೆಯುವಂತೆ ಐಜಿಪಿ, ಗೃಹ ಇಲಾಖೆ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿತ್ತು. ಆದರೆ ಡೀಸಿ, ಎಸ್ಪಿ ಅವರು ಈ ಬಗ್ಗೆ ಮಾಹಿತಿ ನೀಡಿರಲಿಲ್ಲ. ಎರಡು ದಿನಗಳ ಕಾಲ ರಜೆಯಲ್ಲಿದ್ದೇನೆಂದು ಹೇಳಿದ್ದ ಗೃಹ ಇಲಾಖೆ ಕಾರ್ಯದರ್ಶಿಗಳು ನುಮಜಯಂತಿ ಮೆರವಣಿಗೆಗಾಗಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ್ದಕ್ಕೆ ಇವರೇ ಕಾರಣ ಎಂದು ಆರೋಪಿಸಿದರು.

ಹನುಮ ಮಾಲೆ ಧರಿಸಿದ್ದ ನಾನು ಮೆರವಣಿಗೆಯಲ್ಲಿ ಭಾಗವಹಿಸಲು ಹೊರಟಿದ್ದ ವೇಳೆ ಬಿಳಿಕೆರೆಯಿಂದ ಮುಂದೆ ನನ್ನನ್ನು ತಡೆದಾಗ “ನಾನು ಟೆರರಿಸ್ಟ್‌ ಅಲ್ಲ, ಶಾಂತಿಯುತ ಮೆರವಣಿಗೆ ಮಾಡುತ್ತೇವೆ’ ಎಂದು ಹೇಳಿ ಹೊರಟಾಗ ಅಡ್ಡಿಪಡಿಸಿದರು. ಈ ವೇಳೆ ಪೊಲೀಸರು ರಸ್ತೆಗೆ ಅಡ್ಡ ಇಟ್ಟಿದ್ದ ಬ್ಯಾರಿಕೇಡ್‌ಗೆ ಕಾರಿನ ಬಂಪರ್‌ ತಗುಲಿದೆ. ನಂತರ, ಹುಣಸೂರಿನಲ್ಲಿ ನನ್ನನ್ನು ಬಂಧಿಸಿ ಎಚ್‌.ಡಿ.ಕೋಟೆ ಠಾಣೆಗೆ 
ಕರೆದೊಯ್ದು ಕೈದಿಗಳಿರುವ ಕೊಠಡಿಯಲ್ಲಿ ಇರಿಸಲಾಗಿದ್ದ ವೇಳೆ, ನನ್ನೊಂದಿಗೆ ಹೆಚ್ಚುವರಿ ಎಸ್ಪಿ, ಪಿಎಸ್‌ಐ ಜತೆಗಿದ್ದರು. ಆದರೆ ಆ ನಂತರ ಗಾಯವಾಯಿತೆಂದು ಹೇಳಿದ್ದಾರೆ. ಹಾಗಾದರೆ ನನ್ನೊಂದಿಗಿರುವವರೆಗೂ ಗಾಯವಾಗಿರಲಿಲ್ಲವೇ ಎಂದು ಪ್ರಶ್ನಿಸಿದ ಅವರು, ಈ ವಿಚಾರದಲ್ಲಿ ಎಸ್ಪಿ ಹಾಗೂ ಡೀಸಿ ನಾಟಕವಾಡುವ ಅಗತ್ಯ ಇರಲಿಲ್ಲ ಎಂದು ಹರಿಹಾಯ್ದರು.

ಸಿದ್ದರಾಮಯ್ಯದು ರಾವಣ ರಾಜ್ಯ
ಮೈಸೂರು: “ರಾಜ್ಯದಲ್ಲಿ ಕೋಮುಸೌಹಾರ್ದತೆ ಹಾಳಾಗಲು ಸಿಎಂ ಸಿದ್ದರಾಮಯ್ಯ ಅವರೇ ಕಾರಣ’ ಎಂದು ಕೇಂದ್ರ ಸಚಿವ ಅನಂತಕುಮಾರ್‌ ಕಿಡಿಕಾರಿದರು. ನಗರದಲ್ಲಿ ಸೋಮವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ಆಡಳಿತ ನಡೆಸುತ್ತಿದೆಯೋ? ಅಥವಾ ರಾವಣ ರಾಜ್ಯ ನಡೆಸುತ್ತಿದೆಯೋ? ತಿಳಿಯುತ್ತಿಲ್ಲ.

ಹುಣಸೂರಿನಲ್ಲಿ ಹಲವು ವರ್ಷಗಳಿಂದ ನಡೆಯುತ್ತಿರುವ ಹನುಮ ಜಯಂತಿ ಮೆರವಣಿಗೆಗೆ ಅವಕಾಶ ನೀಡದೆ ನಿಷೇಧ ಹೇರಿದ್ದು ಸರಿಯಲ್ಲ. ಟಿಪ್ಪು ಜಯಂತಿ, ಈದ್‌ ಮಿಲಾದ್‌, ಪಿಎಫ್ಐ ಸಂಘಟನೆಗಳಿಗೆ ಮೆರವಣಿಗೆ ನಡೆಸಲು ಅವಕಾಶ ನೀಡುವ ಸರ್ಕಾರ ಹನುಮ ಜಯಂತಿ ಮೆರವಣಿಗೆಗೆ ಅವಕಾಶ ನೀಡುವುದಿಲ್ಲ ಎಂದು ಟೀಕಿಸಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.