ನಾಲೆ ಒಡೆದು ಜಮೀನಿಗೆ ನುಗ್ಗಿದ ಅಪಾರ ಪ್ರಮಾಣದ ನೀರು : ರೈತರ ಬೆಳೆ ಹಾನಿ
Team Udayavani, Apr 17, 2022, 8:25 PM IST
ಹುಣಸೂರು : ಹಾರಂಗಿ ಜಲಾಶಯದ ಅಣೆಕಟ್ಟೆಯ ಮುಖ್ಯ ನಾಲೆ ಒಡೆದು ಅಪಾರ ಪ್ರಮಾಣದ ನೀರು ಹರಿದು ಬೆಳೆ ನಷ್ಟವಾಗಿರುವ ಘಟನೆ ತಾಲೂಕಿನ ಹಿರೀಕ್ಯಾತನಹಳ್ಳಿ ಗ್ರಾಮದ ಸಮೀಪ ಶನಿವಾರ ರಾತ್ರಿ ನಡೆದಿದೆ.
ಹಾರಂಗಿ ನಾಲೆಯ ಮಾರೂರು ಬಲದಂಡೆ (ಎಂ.ಬಿ.ಸಿ.) ನಾಲೆಯಲ್ಲಿ ಕಳೆದ ಮೂರು ದಿನಗಳಿಂದ ಬೇಸಿಗೆಯಲ್ಲಿ ಕೆರೆಕಟ್ಟೆಗಳನ್ನು ತುಂಬಿಸಲು ನೀರು ಹಾಯಿಸಲಾಗಿತ್ತು. ಇದೇ ರೀತಿಯಲ್ಲಿ ಕಳೆದ ತಿಂಗಳು ಕೆರೆಕಟ್ಟೆ ತುಂಬಿಸಲು ಹದಿನೈದು-ಇಪ್ಪತ್ತು ದಿನ ನೀರು ಬಿಟ್ಟು ಕೆರೆಕಟ್ಟೆ ತುಂಬಿಸುತ್ತಿದ್ದರು ಕಳೆದ ಮೂರು ದಿನಗಳಿಂದ ಸಂಜೆ ವೇಳೆ ಸುರಿದ ಮಳೆಗೆ ನಾಲೆಯಲ್ಲಿ ನೀರು ಹೆಚ್ಚಾಗಿದ್ದರಿಂದ ನಾಲೆ ಒಡೆದು ಹೋಗಿ ಅಕ್ಕಪಕ್ಕದ ಜಮೀನು ಹಾಗೂ ತೋಟಗಳಿಗೆ ನೀರು ನುಗಿದ್ದು ಬೆಳೆದ ಬೆಳೆ ನಷ್ಟವಾಗಿದೆ.
ಹಿರೀಕ್ಯಾತನಹಳ್ಳಿ ಗ್ರಾಮದ ಸ್ವಾಮಿಗೌಡ ಎಂಬುವರಿಗೆ ಸೇರಿದ ಶುಂಠಿ ನೀರಿನಲ್ಲಿ ಮುಳುಗಿ ಸ್ವಲ್ಪ ಕೊಚ್ಚಿಕೊಂಡು ಹೋಗಿದೆ. ಶೀವೇಗೌಡ ಎಂಬುವರ ಒಂದು ಎಕರೆಗೂ ಹೆಚ್ಚು ಕುಂಬಳ ಗಿಡ ಸಂಪೂರ್ಣ ಜಲಾವೃತವಾಗಿದೆ. ಅಲ್ಲದೆ ಸುತ್ತಮುತ್ತಲ ಹಲವಾರು ರೈತರ ಜಮೀನಿನಲ್ಲಿ ಬೆಳೆದ ಬೆಳೆಗಳು ಕೊಚ್ಚಿಹೋಗಿದ್ದರೆ ಕೆಲವರ ಜಮೀನಿನಲ್ಲಿ ನೀರು ತುಂಬಿಕೊಂಡಿದೆ.
ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನಾಲಾ ಏರಿಯನ್ನು ತಕ್ಷಣವೇ ದುರಸ್ತಿ ಪಡಿಸಿ ರೈತರ ನೆರವಿಗೆ ಬರಬೇಕೆಂದು ರೈತರು ಮನವಿ ಮಾಡಿದ್ದಾರೆ.
ಸ್ಥಳಕ್ಕೆ ಅಧಿಕಾರಿ ಭೇಟಿ: ವಿಷಯ ತಿಳಿದ ಹಾರಂಗಿ ಎಂಜಿನಿಯರ್ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲಿಸಿ ನೀರನ್ನು ಸಂಪೂರ್ಣ ಬಂದ್ ಮಾಡಿಸಿ ನಾಲೆ ದುರಸ್ತಿ ಬಗ್ಗೆ ಮೇಲಾಧಿಕಾರಿಗೆ ತಿಳಿಸಿ ಕ್ರಮವಹಿಸಿ ನಾಲೆ ಅಕ್ಕಪಕ್ಕದ ಜಮಿನಿನ ರೈತರಿಗೆ ಆಗಿರುವ ನಷ್ಟದ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್