ಬೇರೆ ಪಕ್ಷದಿಂದ ಹೋದವರು ಮಂತ್ರಿಯಾದ್ರೆ,ಬಿಜೆಪಿ ಶಾಸಕರು ಕಡುಬು ತಿನ್ನುತ್ತಾರಾ: ಎಚ್ಡಿಕೆ
Team Udayavani, Feb 6, 2020, 8:42 PM IST
ಮೈಸೂರು: ಉಪ ಚುನಾವಣೆಯಲ್ಲಿ ಗೆದ್ದ ಹತ್ತು ಶಾಸಕರು ಸಚಿವರಾಗಿ ಮಜಾ ಮಾಡಿದರೆ ಬಿಜೆಪಿಯ 105 ಶಾಸಕರು ಕಡುಬು ತಿನ್ನುತ್ತಾರಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು ಸಚಿವ ಸಂಪುಟ ವಿಸ್ತರಣೆ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಬಂದಿರಲಿಲ್ಲ. ಹಾಗಾಗಿ ನಾನು ಹೋಗಿಲ್ಲ ಎಂದರು. ನಮ್ಮ ಪಕ್ಷಗಳಿಂದ ಹೊರ ಹೋಗಿ ಹೊಸದಾಗಿ ಶಾಸಕರಾಗಿರುವವರಿಗೆ ತೃಪ್ತಿ ಆಗಿದೆ. ಅವರು ಈಗ ಸಂಪದ್ಭರಿತರೂ ಆಗಿದ್ದಾರೆ ಎಂದು ಲೇವಡಿ ಮಾಡಿದರು.
ಯಡಿಯೂರಪ್ಪ ಅವರು ಅನುಭವಿಗಳಾಗಿದ್ದಾರೆ. ಸರಕಾರವನ್ನು ಬೀಳಿಸುವುದು, ಹೊಸ ಸರಕಾರ ರಚನೆ ಮಾಡುವ ಕಲೆ ಅವರಿಗೆ ಕರಗತವಾಗಿದೆ. ಆ ಅನುಭವದಲ್ಲಿ ಸರಕಾರ ಉಳಿಸಿಕೊಳ್ಳುತ್ತಾರೆ ಎಂಬ ವಿಶ್ವಾಸ ನನಗಿದೆ. ಎಷ್ಟು ದಿನ ಈ ಸರಕಾರ ಇರಲಿದೆ ಎಂದು ಭವಿಷ್ಯ ಹೇಳಲು ನಾನೇನು ಜ್ಯೋತಿಷಿಯಲ್ಲ ಎಂದರು.
ಸರಕಾರ ಉಳಿಸಿಕೊಳ್ಳಲು ಸಚಿವ ಸಂಪುಟದಿಂದ ಸಣ್ಣಪುಟ್ಟ ಸಮಾಜವನ್ನು ದೂರು ಇಟ್ಟಿರುವುದು ಮುಂದಿನ ದಿನಗಳಲ್ಲಿ ಮುಳುವಾಗಲಿದೆ. ಬಿಜೆಪಿ ವರಿಷ್ಠರಿಗೂ ಈ ಸರಕಾರದ ಬಗ್ಗೆ ಒಲವಿದ್ದಂತಿಲ್ಲ. ಸಚಿವ ಸಂಪುಟ ವಿಸ್ತರಣೆಯಾದಾಗ ಅಸಮಾಧಾನಗಳು ಏಳುವುದು ಸಹಜ. ಹಾಗೆಂದು ಬಿಜೆಪಿಯ ಯಾವೊಬ್ಬ ಅತೃಪ್ತರೂ ನನ್ನ ಸಂಪರ್ಕದಲ್ಲಿಲ್ಲ ಎಂದರು.
ಮೈತ್ರಿ ಸರಕಾರ ತೆಗೆಯಲೇಬೇಕೆಂದು ಬಿಜೆಪಿಗೆ ಹೋದೆವು ಎಂದು ವಿಶ್ವನಾಥ್ ಹೇಳಿದ್ದಾರೆ. ಮೈತ್ರಿ ಸರಕಾರ ತೆಗೆದು ಒಳ್ಳೆಯ ಸಾಧನೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಜನರೇ ಅವರ ಹೆಸರನ್ನು ಚರಿತ್ರೆಯಲ್ಲಿ ಬರೆಯುತ್ತಾರೆ. ಆಪರೇಷನ್ ಕಮಲ ಕುರಿತು ಯಾರಿಗೆ ಪ್ರೇರಣೆ ನೀಡಲು ವಿಶ್ವನಾಥ್ ಪುಸ್ತಕ ಬರೆಯುತ್ತಾರೋ ಗೊತ್ತಿಲ್ಲ.
– ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ