ಚುನಾವಣೆಯಲ್ಲಿ 123 ಸ್ಥಾನ ಗೆಲ್ಲುವ ಗುರಿ : ಯಾರಿಗೂ ಬೆಂಬಲ ಕೊಡುವ ಪ್ರಶ್ನೆಯೇ ಇಲ್ಲ : HDK
Team Udayavani, May 17, 2022, 10:06 PM IST
ಮೈಸೂರು: ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಯಾರಿಗೂ ಬೆಂಬಲ ಕೊಡುವ ಪ್ರಶ್ನೆಯೇ ಇಲ್ಲ. ಜನತಾ ಜಲಧಾರೆ ಮೂಲಕ ಜೆಡಿಎಸ್ ಅಸ್ತಿತ್ವ ಸಾಬೀತಾಗಿದೆ. ವಿಧಾನಸಭಾ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲುವ ಗುರಿ ತಲುಪುತ್ತೇವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಎಚ್.ಕೆ.ರಾಮು ಅವರಿಗೆ ಟಿಕೆಟ್ ನೀಡಿದ್ದು ಕುಮಾರಸ್ವಾಮಿ ಅಲ್ಲ. ಪಕ್ಷದ ಕೋರ್ ಕಮಿಟಿ. ಇದು ವೈಯಕ್ತಿಕ ತೀರ್ಮಾನ ಅಲ್ಲ. ಇದು ಆರ್ಥಿಕವಾಗಿಯೂ ನಡೆಯುವ ಚುನಾವಣೆ ಎಂಬುದು ಜಗಜ್ಜಾಹೀರಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶಾಸಕ ಮರಿತಿಬ್ಬೇಗೌಡರು ನಮ್ಮ ಪಕ್ಷದಲ್ಲಿ ಇಲ್ಲದಾಗಲೂ ನಾವು ಚುನಾವಣೆ ಗೆದ್ದಿದ್ದೇವೆ. ಇನ್ನು ಹಣ ಇದ್ದವರಿಗಷ್ಟೇ ಟಿಕೆಟ್ ಎನ್ನುವುದಾದರೆ, ಈ ಹಿಂದೆ ಚಿಕ್ಕಮಾದು ಅವರಿಗೆ ಶ್ರೀಮಂತರು ಅಂತ ನಮ್ಮ ಪಕ್ಷದಿಂದ ಟಿಕೆಟ್ ಕೊಟ್ಟಿದ್ದಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ಮುಂಬರುವ ಅಸೆಂಬ್ಲಿ ಚುನಾವಣೆಯಲ್ಲಿ ಯಾವುದೇ ರಾಷ್ಟ್ರೀಯ ಪಕ್ಷಗಳಿಗೂ ಬಹುಮತ ಬರುವುದಿಲ್ಲ ಎಂಬುದು ಗೊತ್ತಾಗಿದೆ. ಹೀಗಾಗಿ, ಜೆಡಿಎಸ್ ಶಾಸಕರನ್ನು ಸೆಳೆಯುವ ಪ್ರಯತ್ನ ನಡೆಸುತ್ತಿದ್ದಾರೆ. ಅವರಿಗೆ ಸ್ವಂತ ಶಕ್ತಿಯಿಂದ ಗೆಲ್ಲುವ ವಿಶ್ವಾಸವೇ ಇಲ್ಲ ಎಂದು ಹೇಳಿದರು.
ಇದನ್ನೂ ಓದಿ : ಕೋವಿಡ್ ಪ್ರಕರಣ : ರಾಜ್ಯದಲ್ಲಿ 109 ಪಾಸಿಟವ್ ವರದಿ, 147ಮಂದಿ ಗುಣಮುಖ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ: ಆರೋಪಿ ಬಂಧನ
ಅಂಜನಾದ್ರಿಗೆ ಮೈಸೂರು ಒಡೆಯರ್ ಕುಟುಂಬ ಭೇಟಿ; ದೇವರ ದರ್ಶನ
ಚಾಹಲ್-ಹೂಡಾ ಮಿಂಚು: ಮಳೆ ಕಾಡಿದ ಪಂದ್ಯದಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ
ಜು. 1ರಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧ: ರಾಜ್ಯದಲ್ಲೂ ಕಟ್ಟುನಿಟ್ಟಿನ ಜಾರಿಗೆ ಕ್ರಮ