ಸ್ವಚ್ಛತೆಗೆ ಹಾಡಿ ಸುತ್ತಾಡಿದ ಆರೋಗ್ಯ ಸಿಬ್ಬಂದಿ
Team Udayavani, Jun 29, 2019, 3:00 AM IST
ಹುಣಸೂರು: ತಾಲೂಕಿನ ಹನಗೋಡು ಹೋಬಳಿಯ ನೇರಳಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಗಿರಿಜನ ಹಾಡಿಗಳಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಹಾಗೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಜಾಗೃತಿ ಜಾಥಾ ನಡೆಸಲಾಯಿತು.
ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯಿಂದ ಹೊರಟ ಜಾಥಾಕ್ಕೆ ಚಾಲನೆ ನೀಡಿದ ಆಸ್ಪತ್ರೆ ವೈದ್ಯ ಡಾ.ಸಂದೀಪ್ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮ-ಹಾಡಿಗಳಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿ ಸರಿಯಾದ ನಿರ್ವಹಣೆ ಮಾಡುವ ಮೂಲಕ ರೋಗ ತಡೆಗೆ ಮುಂದಾಗಬೇಕು.
ಜ್ವರ ಬಂದ ತಕ್ಷಣವೇ ರಕ್ತ ಪರೀಕ್ಷೆ ನಡೆಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ನಂತರ ಗ್ರಾಮದೊಳಗೆ ಅಡ್ಡಾಡಿ, ಸಾರ್ವಜನಿಕ ನಲ್ಲಿ ನೀರು ಸಂರ್ಪಕವಿರುವ ಸ್ಥಳಗಳನ್ನು ವೀಕ್ಷಿಸಿ, ತಕ್ಷಣವೇ ಕುಡಿಯುವ ನೀರು ಬಳಸುವ ಎಲ್ಲಾ ನಲ್ಲಿಗಳ ಸುತ್ತ ಶುಚಿತ್ವ ಕಾಪಾಡಬೇಕು ಎಂದು ಗ್ರಾಮ ಪಂಚಾಯ್ತಿ ಸಿಬ್ಬಂದಿಗೆ ಸೂಚಿಸಿದರು.
ಜಾಥಾದಲ್ಲಿ ಆರೋಗ್ಯ ಇಲಾಖೆಯ ಚಂದ್ರಶೇಖರ್, ನಿತ್ಯ ಹಾಗೂ ಆಶಾ ಕಾರ್ಯಕರ್ತೆಯರು ಸೇರಿದಂತೆ ಗಿರಿಜನರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್