ಯೋಗ, ಧ್ಯಾನ, ಆಧ್ಯಾತ್ಮಿಕತೆಯಿಂದ ಆರೋಗ್ಯ ಜೀವನ


Team Udayavani, Feb 19, 2020, 3:00 AM IST

yoga-adyat

ಮೈಸೂರು: ಆಧ್ಯಾತ್ಮದಲ್ಲಿ ಯೋಗಾಭ್ಯಾಸ ಪ್ರಮುಖವಾಗಿರುವುದರಿಂದ ಮುಂದಿನ ದಿನಗಳಲ್ಲಿ ವಾರ್ಡ್‌ ಮಟ್ಟದಲ್ಲಿ ಯೋಗಕೇಂದ್ರ ಸ್ಥಾಪಿಸಲು ಯೋಜನೆ ರೂಪಿಸಲಾಗುವುದು ಎಂದು ಮೇಯರ್‌ ತಸ್ನೀಂ ಹೇಳಿದರು. ರಾಮಕೃಷ್ಣ ಪರಮಹಂಸರ 184ನೇ ಜಯಂತ್ಯುತ್ಸವ ಅಂಗವಾಗಿ ಮೈಸೂರು ಬ್ರಾಹ್ಮಣ ಯುವ ವೇದಿಕೆಯಿಂದ ಮಂಗಳವಾರ ರಾಮಕೃಷ್ಣ ನಗರದ ವೃತ್ತದಲ್ಲಿ ಆಯೋಜಿಸಿದ್ದ ಆಧ್ಯಾತ್ಮಿಕ ಜಗತ್ತು ಕಾರ್ಯಕ್ರಮದಲ್ಲಿ ರಾಮಕೃಷ್ಣ ಪರಮಹಂಸರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಸಾಂಸ್ಕೃತಿಕ ರಾಜಧಾನಿ ಮೈಸೂರಿಗೆ ಪಾರಂಪರಿಕ ಇತಿಹಾಸವಿದೆ. ರಾಮಕೃಷ್ಣನಗರ ಬಡಾವಣೆ ಗಮನಿಸಿದರೆ ಪರಿಸರ ಸ್ವತ್ಛತೆಯೊಂದಿಗೆ ಆಧ್ಯಾತ್ಮಿಕವಾಗಿ ಆಕರ್ಷಣೀಯವಾಗಿದೆ. ಸಹಸ್ರಾರು ಹಿರಿಯ ನಾಗರಿಕರು ವಾಯುವಿಹಾರಕ್ಕೆ ಬರುತ್ತಾರೆ. ಪ್ರತಿದಿನ ವಾಯುವಿಹಾರದೊಂದಿಗೆ ಯೋಗ, ಧ್ಯಾನ ಮತ್ತು ಆಧ್ಯಾತ್ಮಿಕತೆ ಜೀವನಶೈಲಿ ಅಳವಡಿಸಿಕೊಂಡರೆ ಆರೋಗ್ಯಕರ ವಾತಾವರಣ ನಿರ್ಮಿಸಬಹುದು ಎಂದರು.

ಮಾಜಿ ಮೇಯರ್‌ ಆರ್‌.ಜೆ. ನರಸಿಂಹ ಅಯ್ಯಂಗಾರ್‌ ಮಾತನಾಡಿ, ಭಾರತದಲ್ಲಿ ರಾಷ್ಟ್ರಿಯ ಯುವದಿನೋತ್ಸವವನ್ನು ಸ್ವಾಮಿ ವಿವೇಕಾನಂದರ ಜನ್ಮದಿನ ಆಚರಿಸುತ್ತೇವೆ. ಆದರೆ ನರೇಂದ್ರನನ್ನು ಆಧ್ಯಾತ್ಮಿಕವಾಗಿ ವಿವೇಕಾನಂದನಾಗಿ ಸೃಷ್ಟಿಸಿದ ಗುರು ರಾಮಕೃಷ್ಣ ಪರಮಹಂಸರು. ಪ್ರತಿಯೊಬ್ಬ ಮನುಷ್ಯನಲ್ಲೂ ಆಧ್ಯಾತ್ಮಿಕತೆ, ಸಾತ್ವಿಕತೆ, ಚಿಂತನೆ ಹೆಚ್ಚಾದರೆ ಸಮಾಜದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ಹಿರಿಯ ಸಮಾಜಸೇವಕ ಡಾ.ಕೆ.ರಘುರಾಂ ವಾಜಪೇಯಿ ಮಾತನಾಡಿ, ಆಧ್ಯಾತ್ಮಿಕ ಯೋಗದ ಸನ್ಮಾರ್ಗದಲ್ಲಿ ಭಾರತ ಅಗ್ರಸ್ಥಾನದಲ್ಲಿದೆ ಎಂದರೆ ಅದಕ್ಕೆ ಮೂಲ ಕಾರಣ ರಾಮಕೃಷ್ಣ ಪರಮಹಂಸರು. ಸರಳಜೀವಿಯಾಗಿದ್ದ ಅವರು ಕಾಳಿದೇವಿ ಆರಾಧಕರಾಗಿ ಆಧ್ಯಾತ್ಮಿಕ ಗುರುಗಳಾದರು. ಹಿಂದೂ ಧರ್ಮದ ಜಾಗೃತಿ ಯುವ ಜನಾಂಗದಲ್ಲಿ ಬೆಳೆಯುತ್ತಿದೆ ಎಂದರೇ ರಾಮಕೃಷ್ಣರ ಕೊಡುಗೆ ಅಪಾರವಾದದ್ದು ಎಂದರು.

ಕಾಂಗ್ರೆಸ್‌ ಯುವಮುಖಂಡ ಎನ್‌.ಎಂ.ನವೀನ್‌ ಕಮಾರ್‌ ಮಾತನಾಡಿ, ಬಹುವರ್ಷಗಳಿಂದ ರಾಮಕೃಷ್ಣ ಪರಮಹಂಸರ ಪ್ರತಿಮೆ ಸ್ಥಾಪಿಸಬೇಕೆನ್ನುವ ಬೇಡಿಕೆಯಿತ್ತು. ಹೋರಾಟಗಳು ನಡೆಯುತ್ತಿದ್ದವು. ಎಷ್ಟೇ ಗೊಂದಲವಿದ್ದರೂ ಕೃಷ್ಣರಾಜ ವೃತ್ತದ ಮಾದರಿಯಲ್ಲಿ ಸ್ಥಾಪಿಸಲು ಬಹಳ ಶ್ರಮವಹಿಸಿದ್ದು, ಇಂದು ಆಕರ್ಷಕವಾಗಿ, ಸುಂದರವಾಗಿ ರಾಮಕೃಷ್ಣ ಪರಮಹಂಸರ ವೃತ್ತ ನಿರ್ಮಾಣವಾಗಿದೆ ಎಂದು ತಿಳಿಸಿದರು.

ನಗರಪಾಲಿಕೆ ಸದಸ್ಯ ಎಂ.ಸಿ.ರಮೇಶ್‌, ಲಕ್ಷ್ಮೀ ಕಿರಣ್‌, ಎಂ.ಶಿವಕುಮಾರ್‌, ಆರ್‌.ಕೆ.ಶರತ್‌, ಶೋಭಾ, ಅಗಸ್ತ ಕೋ.ಆಪರೇಟವ್‌ ಸೊಸೈಟಿ ಅಧ್ಯಕ್ಷ ಸಿವಿ ಪಾರ್ಥಸಾರಥಿ, ಅಪೂರ್ವ ಸುರೇಶ್‌, ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷ ಮುಳ್ಳೂರು ಗುರುಪ್ರಸಾದ್‌, ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್‌, ಅಜಯ್‌, ಕಡಕೊಳ ಜಗದೀಶ್‌ ವಿನಯ್‌ ಕಣಗಾಲ್‌, ಸುಚೀಂದ್ರ ಸೇರಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.