![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ
Team Udayavani, May 19, 2024, 8:27 PM IST
![Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ](https://www.udayavani.com/wp-content/uploads/2024/05/rain-s-620x409.jpg)
ಹುಣಸೂರು:ವರುಣನ ಅಬ್ಬರಕ್ಕೆ ತಾಲೂಕಿನ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದ ತಂಬಾಕು, ಶುಂಠಿ ಬೆಳೆ ಜಲಾವೃತವಾಗಿದೆ. ಕೆರೆ ಕಟ್ಟೆಗಳು ತುಂಬಿವೆ. ಜೊತೆಗೆ ಜಮೀನಿನ ಮಣ್ಣನನ್ನು ಸಹ ಹೊತ್ತೊಯ್ದಿದೆ.
ಕಳೆದ ಹತ್ತು ದಿನಗಳಿಂದ ಸುರಿಯುತ್ತಿರುವ ಸತತ ಮಳೆಯಿಂದ ಸಾಕಷ್ಟು ಅನಾಹುತ ಸೃಷ್ಟಿಸಿತ್ತು. ಭಾನುವಾರ ಮಧ್ಯಾಹ್ನ ಒಂದೂವರೆ ಗಂಟೆ ಕಾಲ ಸುರಿದ ಮಳೆಯು ತಾಲೂಕಿನ ಹನಗೋಡು ಹೋಬಳಿಯ ಕರಣಕುಪ್ಪೆ, ಕಲ್ಲಹಳ್ಳಿ, ಕೊತ್ತೆಗಾಲ, ಚಿಲ್ಕುಂದ ಗ್ರಾ.ಪಂ.ವ್ಯಾಪ್ತಿಯ ಹರೀನಹಳ್ಳಿ, ಕಣಗಾಲು, ಮುತ್ತುರಾಯನಹೊಸಹಳ್ಳಿ, ಆಡಿಗನಹಳ್ಳಿ, ಚಿಲ್ಕುಂದದದಲ್ಲಿ ಮತ್ತೆ ಬೆಳೆಗಳು ಕೊಚ್ಚಿ ಹೋಗಿದ್ದು, ಈ ಗ್ರಾಮಗಳಲ್ಲೇ ಅಪಾರ ನಷ್ಟವಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದ್ದು ಗ್ರಾಮಸ್ಥರು ನಲುಗಿ ಹೋಗಿದ್ದಾರೆ.
ಭಾನುವಾರ ಭಾರೀ ಮಳೆ:
ಭಾನುವಾರ ಮಧ್ಯಾಹ್ನ ಕಣಗಾಲು, ಹರೀನಹಳ್ಳಿ, ಮುತ್ತುರಾಯನಹೊಸಹಳ್ಳಿ, ಕಲ್ಲಹಳ್ಳಿ, ಹುಣಸೇಗಾಲ, ಅತ್ತಿಕುಪ್ಪೆ, ಚಿಲ್ಕುಂದ, ಕೊತ್ತೆಗಾಲ, ಆಡಿಗನಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಸುರಿದ ಭಾರೀ ಮಳೆಯಿಂದ ಅಪಾರ ಹಾನಿ ಉಂಟಾಗಿದ್ದು, ಕೃಷಿಕರು ಸಂಕಟ ಎದುರಿಸುತ್ತಿದ್ದಾರೆ.
ನೂರಾರು ಎಕರೆ ಪ್ರದೇಶದಲ್ಲಿ ನಾಟಿ ಮಾಡಿದ್ದ ತಂಬಾಕು ಬೆಳೆ, ಬಿತ್ತನೆ ಮಾಡಿದ್ದ ಶುಂಠಿ ಬೆಳೆಯನ್ನು ಮಳೆನೀರು ಕೊಚ್ಚಿ ಹೊತ್ತೊಯ್ದಿದೆ. ಹೊಲಗಳಲ್ಲಿ ಮಣ್ಣು ಹಳ್ಳ ಸೇರಿದೆ, ರಸ್ತೆಯಲ್ಲಿ ನೀರು ಹರಿದು ಹಾಳಾಗಿದೆ. ಈ ಭಾಗದಲ್ಲೇ ಕೋಟ್ಯಾಂತರ ರೂ ನಷ್ಟ ಸಂಭವಿಸಿದೆ.
ತುಂಬಿದ ಕೆರೆಗಳು:
ಮುತುರಾಯನಹೊಸಹಳ್ಳಿಯ ಬೆಟ್ಟದಿಂದ ಅಪಾರ ಪ್ರಮಾಣದ ನೀರು ಹರಿದು ಕಣಗಾಲಿನ ಗೆಂಡೆಕೆರೆ, ಚನ್ನಮ್ಮನಕಟ್ಟೆ, ಹರೀನಹಳ್ಳಿಕೆರೆ, ಮುತತ್ತುರಾಯನಹೊಸಹಳ್ಳಿಕೆರೆ, ಆಡಿಗನಹಳ್ಳಿಕೆರೆ, ನಾಗಮಂಗಲ ಕೆರೆ, ಕಲ್ಲಹಳ್ಳಿಯ ನಾಲ್ಕು ಕೆರೆಗಳು, ಅಲ್ಲದೆ ಚಿಲ್ಕುಂದದ ಬಹುತೇಕ ಕೆರೆ ಕಟ್ಟೆಗಳು ಭರ್ತಿಯಾಗಿವೆ. ಅನೇಕ ಕೆರೆಗಳ ಏರಿ, ಕೋಡಿ ಮೇಲೆ, ಕಣಗಾಲು ಹುನುಗನಹಳ್ಳಿ ರಸ್ತೆ ಮೇಲೆ ನೀರು ಹರಿದಿದೆ.
ಮೀನು ಹಿಡಿದ ಗ್ರಾಮಸ್ಥರು:
ಕೆರೆಕಟ್ಟೆಗಳಿಗೆ ಅಪಾರ ಪ್ರಮಾಣದ ಮಳೆ ನೀರು ಹರಿದು ಬಂದಿದ್ದರಿಂದ ಹರೀನಹಳ್ಳಿ ಕೆರೆಯಲ್ಲಿ ಮಳೆ ನಿಂತ ನಂತರ ಸುತ್ತಮುತ್ತಲ ಗ್ರಾಮಸ್ಥರು ಕೂನಿ ಹಾಕಿ ಮೀನು ಹಿಡಿದರು. ಮಕ್ಕಳು ನೀರಿನಲ್ಲಿ ಮಿಂದೆದ್ದರು. ಈ ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದ್ದು, ಸರಕಾರ ಸೂಕ್ತ ಪರಿಹಾರ ನೀಡುಬೇಕೆಂದು ನೊಂದ ರೈತರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ](https://www.udayavani.com/wp-content/uploads/2024/07/Suraj-Revanna-150x90.jpg)
Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ
![Untitled-1](https://www.udayavani.com/wp-content/uploads/2024/07/Untitled-1-21-150x90.jpg)
BJP-JDS 19 ಸಂಸದರಿದ್ರೂ ಬಜೆಟ್ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್
![Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ](https://www.udayavani.com/wp-content/uploads/2024/07/Mysore1-150x84.jpg)
Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ
![Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ](https://www.udayavani.com/wp-content/uploads/2024/07/DKS1-150x84.jpg)
Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ
![Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ](https://www.udayavani.com/wp-content/uploads/2024/07/mane-10-150x80.jpg)
Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.