ಭಾರಿ ಮಳೆಗೆ ಕೆರೆಗಳು ಭರ್ತಿ; ಹನಗೋಡು ರಸ್ತೆ ಬಂದ್, ಬೆಳೆ ನಾಶ


Team Udayavani, Sep 5, 2022, 10:17 PM IST

1—ddad

ಹುಣಸೂರು: ಹುಣಸೂರು ನಗರ ಸೇರಿದಂತೆ ತಾಲೂಕಿನಾದ್ಯಂತ ಭಾನುವಾರ ಮಧ್ಯರಾತ್ರಿಯಿಂದ ಬೆಳಗಿನ ಜಾವದವರೆಗೆ ಸುರಿದ ಬಾರೀ ಮಳೆಯಿಂದಾಗಿ ನಗರದ ಬಡಾವಣೆಗಳ ಮನೆಗಳಿಗೆ ನೀರು ನುಗ್ಗಿದರೆ, ಹಲವಾರು ಕೆರೆಗಳ ಏರಿ ಮೇಲೆ ನೀರು ಹರಿದು ಅಪಾರ ಪ್ರಮಾಣದ ಬೆಳೆ ಹಾನಿಮಾಡಿದೆ. ಆರು ಮನೆಗಳಿಗೆ ಹಾನಿಯಾಗಿದೆ.

ಭಾನುವಾರ ರಾತ್ರಿ 5 ಗಂಟೆಗಳ ಕಾಲ ಸುರಿದ ಬಿರುಸಿನ ಮಳೆಯಿಂದ ನಗರದ ಮಾರುತಿ ಬಡಾವಣೆ ಮೇಲ್ಬಾಗದ ವಳ್ಳಮ್ಮನಕಟ್ಟೆಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಕೋಡಿ ಬಿದ್ದ ಪರಿಣಾಮ ಕಟ್ಟೆ ಪಕ್ಕದಲ್ಲಿರುವ ಸಾಕೇತ,ಮಂಜುನಾಥ ಬಡಾವಣೆಯ ಅನೇಕ ಮನೆಗಳಿಗೆ 2-3 ಅಡಿಗಳಷ್ಟು ನೀರು ತುಂಬಿಕೊAಡಿತ್ತು. ಬಡಾವಣೆಯ ಮದ್ಯದಲ್ಲಿರುವ ರಾಜ ಕಾಲುವೆ ಬಹುತೇಕ ಒತ್ತುವರಿಯಿಂದಾಗಿ ಮಂದಗತಿಯಲ್ಲಿ ಹರಿದ ನೀರು ನ್ಯೂ ಮಾರುತಿ ಬಡಾವಣೆಯ ಕೆಲ ಭಾಗದ ಕೆಲ ಭಾಗದ ಮನೆಗಳಿಗೆ ಹಾಗೂ ಮಂಜುನಾಥ ಬಡಾವಣೆಯ ಕೆಳ ಭಾಗದ ಹತ್ತಕ್ಕೂ ಹೆಚ್ಚು ಮನೆಗಳಿಗೆ ಮಧ್ಯ ರಾತ್ರಿ ದಿಢೀರ್ ನೀರು ನುಗ್ಗಿತು.

ಛಾಯಾದೇವಿ ಕಾಲೇಜಿನ ರಸ್ತೆ ಮೇಲೆ ಹಾಗೂ ಶಬ್ಬೀರ್‌ನಗರದ ರಸ್ತೆ ಮೇಲೆ ೨-೩ ಅಡಿ ನೀರು ಹರಿಯಿತು. ನೀರು ತುಂಬಿಕೊಂಡಿದ್ದರಿಂದ ಮನೆಯಲ್ಲಿದ್ದ ಪದಾರ್ಥಗಳಿಗೆ ಹಾನಿಯಾಗಿದೆ. ಮನೆಗಳಿಗೆ ತುಂಬಿಕೊಂಡಿದ್ದ ನೀರನ್ನು ಹೊರ ಹಾಕಿದರೂ ಮತ್ತೆ ಮತ್ತೆ ತುಂಬುತ್ತಲೇ ಇತ್ತು. ಕೆಲವರು ನಿದ್ದೆಯನ್ನೇ ಮಾಡಿಲ್ಲ. ಬೆಳಗ್ಗೆ 10 ರ ವೇಳೆಗೆ ನೀರಿನ ಹರಿವು ಇಳಿಮುಖವಾಯಿತು.

ವಿಷಯ ತಿಳಿದು ಮುಂಜಾನೆಯೇ ನಗರಸಭೆ ಸದಸ್ಯರಾದ ರಾಧಾ, ಶ್ವೇತಾಮಂಜುನಾಥ್, ದಫೇದಾರ್ ಕೃಷ್ಣೇಗೌಡ ಸೇರಿದಂತೆ ಸಿಬಂದಿಗಳೊಂದಿಗೆ ಆಗಮಿಸಿ ಸ್ಥಳಪರಿಶೀಲಿಸಿ ಕಟ್ಟಿಕೊಂಡಿದ್ದ ಮಣ್ಣನ್ನು ಜೆಸಿಬಿಯಂತ್ರದ ಮೂಲಕ ತೆರವುಗೊಳಿಸಿ ನೀರು ಹರಿಯಲು ಅವಕಾಶ ಮಾಡಿಕೊಟ್ಟರು. ಈ ವರ್ಷದಲ್ಲಿ ಎರಡನೇ ಬಾರಿಗೆ ಅನಾಹುತ ಸೃಷ್ಟಿಸಿದೆ.

ಏರಿ ಮೇಲೆ ಹರಿದ ನೀರು, ರಸ್ತೆಗಳು ಬಂದ್
ಬಾರೀ ಮಳೆಯಿಂದಾಗಿ ಹನಗೋಡು-ಹುಣಸೂರು ಮುಖ್ಯ ರಸ್ತೆ ಬದಿಯ ತಟ್ಟೆಕೆರೆಯ ಕೆರೆ ಸಂಪೂರ್ಣ ಭರ್ತಿಯಾಗಿ ರಸ್ತೆ ಮೇಲೆ, ನಾಲೆ ಏರಿ ಮೇಲೆ, ಹೈರಿಗೆ ಕೆರೆಯ ನಾಲೆಯಲ್ಲಿ ಅಪಾರಪ್ರಮಾಣದ ನೀರು ಹರಿದು ರಸ್ತೆ ಬಂದಾಗಿತ್ತು. ಇನ್ನು ಹೈರಿಗೆ-ತಟ್ಟೆಕೆರೆ ರಸ್ತೆ ಮೇಲೂ ನೀರು ಹರಿಯಿತು. ಬೆಳಗ್ಗೆ 10ರ ನಂತರ ನೀರಿನ ಇಳಿಮುಖವಾಗಿ ವಾಹನಗಳು ಸಂಚರಿಸಿದವು.

ಬೆಳೆ ನಾಶ
ಧರ್ಮಾಪುರ ಜಿ.ಪಂ.ವ್ಯಾಪ್ತಿಯ ಎಲ್ಲೆ ಕೆರೆಗಳು ಭರ್ತಿಯಾಗಿ ನಾಟಿ ಮಾಡಿದ್ದ ಭತ್ತದ ಬೆಳೆಯನ್ನು ಕೊಚ್ಚಿ ಹಾಕಿದ್ದು, 100 ಎಕರೆಯಷ್ಟು ಪ್ರದೇಶದಲ್ಲಿ ಬೆಳೆದಿದ್ದ ಭತ್ತದ ಫಸಲು ನೀರಿನಲ್ಲಿ ಕೊಳೆಯುತ್ತಿದೆ. ಅದೇರೀತಿ ಹನಗೋಡು ಭಾಗದಲ್ಲೂ ಅಪಾರ ಪ್ರಮಾಣದ ಬೆಳೆಗಳ ಮೇಲೆ ನೀರು ಹರಿದಿದೆ.

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.