ಜಿಲ್ಲೆಯ ವಿವಿಧೆಡೆ ಭಾರಿ ಮಳೆ: ಜನ ಜೀವನ ಅಸ್ತವ್ಯಸ್ತ


Team Udayavani, Aug 16, 2017, 12:27 PM IST

mys5.jpg

ಮೈಸೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸೋಮವಾರ ಸಂಜೆ ವೇಳೆಗೆ ಆರಂಭವಾದ ಮಳೆ ಬೆಳಗಿನ ಜಾವದವರೆಗೂ ಧಾರಾಕಾರವಾಗಿ ಸುರಿಯಿತು. ಇದರ ಪರಿಣಾಮ ಮೈಸೂರಿನಲ್ಲಿ ಮನೆ ಕುಸಿದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ.

ಇನ್ನು ಬಾರಿ ಮಳೆಯು 71ನೇ ಸ್ವಾತಂತ್ರ್ಯೋತ್ಸವದ ಸಡಗರ, ಸಂಭ್ರಮಕ್ಕೂ ಅಡ್ಡಿಯುಂಟು ಮಾಡಿತು. ಜಿಲ್ಲಾಡಳಿತದಿಂದ ಮೈಸೂರಿನ ಬನ್ನಿಮಂಟಪ ಪಂಜಿನ ಕವಾಯತು ಮೈದಾನದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಮಳೆ ಅಡ್ಡಿಪಡಿಸಿತು. ರಾತ್ರಿಯಿಡಿ ಸುರಿದ ಮಳೆಯಿಂದಾಗಿ ಒಂದೆಡೆ ಮೈದಾನ ಕೆಸರುಗದ್ದೆಯಾಗಿ ಮಾರ್ಪಟ್ಟಿದ್ದರೆ, ಅಲ್ಲಲ್ಲಿ ನೀರು ನಿಂತಿದ್ದ ಕಾರಣ, ಪಥಸಂಚಲನವನ್ನು ರದ್ದುಪಡಿಸಲಾಯಿತು.

ಆದರೆ, ಶಾಲಾ ಮಕ್ಕಳ ನೃತ್ಯ ಕಾರ್ಯಕ್ರಮಕ್ಕೆ ಅವಕಾಶ ನೀಡಿದಾಗ ಮಕ್ಕಳು ಕೆಸರು ಗದ್ದೆಯಲ್ಲಿ ಎದ್ದು- ಬಿದ್ದು ಪ್ರದರ್ಶನ ನೀಡಿದರು. ಎಚ್‌.ಡಿ.ಕೋಟೆ, ನಂಜನಗೂಡು, ಹುಣಸೂರು ತಾಲೂಕುಗಳಲ್ಲೂ ಸೋಮವಾರ ರಾತ್ರಿ ಬಾರಿ ಮಳೆ ಸುರಿದ ಕಾರಣ, ಸ್ವಾತಂತ್ರ್ಯ ದಿನಾಚರಣೆ ಕಾರ್ಯ ಕ್ರಮವನ್ನು ತಡವಾಗಿ ನಡೆಸಲಾಯಿತು.

ನಗರದಲ್ಲಿ ಸೋಮವಾರ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ತಗ್ಗುಪ್ರದೇಶಗಳಲ್ಲಿನ ಅನೇಕ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಸಂಜೆ 5.40ರ ಸುಮಾರಿಗೆ ಆರಂಭಗೊಂಡ ಮಳೆಯ ಆರ್ಭಟ ಮಂಗಳವಾರ ಬೆಳಗ್ಗೆವರೆಗೂ ಮುಂದುವರಿಯಿತು.

ಹೀಗಾಗಿ ರಾತ್ರಿಯಿಡಿ ಸುರಿದ ಮಳೆಯಿಂದಾಗಿ ನಗರದ ಬನ್ನಿಮಂಟಪ, ಪಡುವಾರಹಳ್ಳಿ, ಬಂಬೂಬಜಾರ್‌, ಮೇದರಕೇರಿ, ಹನುಮಂತನಗರ, ಯಾ ದವಗಿರಿ, ಕೆಸರೆ ಸೇರಿದಂತೆ ಇನ್ನಿತರ ಕಡೆಗಳಲ್ಲಿರುವ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅಲ್ಲಿನ ನಿವಾಸಿಗಳು ಪರದಾಡುವಂತಾಯಿತು.

ಇನ್ನೂ ಕೆಲವು ಕಡೆಗಳಲ್ಲಿ ಮಳೆಯಿಂದಾಗಿ ಅನೇಕ ರಸ್ತೆಗಳು ಜಲಾವೃತಗೊಂಡಿದ್ದ ಪರಿಣಾಮ ವಾಹನ ಸವಾರರು ಪಡುವಂತಾಯಿತು. ಭಾರಿ ಮಳೆಯಿಂದಾಗಿ ಅರಮನೆ ಮುಂಭಾಗದ ದೊಡ್ಡಕೆರೆ ಮೈದಾನದಲ್ಲಿ ನೀರು ನಿಂತು ಕೆರೆಯಂತಾಗಿದೆ. ಬೆಂಗಳೂರು- ಊಟಿ ಹೆದ್ದಾರಿಯ ಅರಮನೆ ಮುಂಬಾಗದ ರಸ್ತೆ ಬದಿಗಳಲ್ಲಿ ಹಾಕಲಾಗಿದ್ದ ಕಾಂಕ್ರೀಟ್‌ ಸ್ಲಾಬ್‌ಗಳು ಕಿತ್ತು ಬಿದ್ದಿವೆ.

ವ್ಯಕ್ತಿ ಸಾವು: ಮಳೆಯಿಂದಾಗಿ ಮನೆಯ ಗೋಡೆ ಕುಸಿದು ವ್ಯಕ್ತಿಯೊಬ್ಬ ಮಲಗಿದ್ದಲ್ಲೇ ಮೃತಪಟ್ಟಿರುವ ಘಟನೆ ಗಾಂಧಿನಗರದ ಲಿಡ್ಕರ್‌ ಕಾಲೋನಿಯಲ್ಲಿ ನಡೆದಿದೆ.
ಗಾಂಧಿ ನಗರದ ಲಿಡ್ಕರ್‌ ಕಾಲೋನಿ ನಿವಾಸಿ ಮದಂಧರ್‌ ಅಲಿಯಾಸ್‌ ಮಗ್ಗಿ (42) ಮೃತ ದುರ್ದೈವಿ. ಕೋಳಿ ಮಾಂಸದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮದಂಧರ್‌, ಮೊಹಿನ್‌ ಎಂಬುವರ ಮನೆಯಲ್ಲಿ ವಾಸವಾಗಿದ್ದ. ಸೋಮವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದ ಮದಂಧರ್‌ ನಿದ್ರೆಗೆ ಜಾರಿದ್ದಾರೆ.

ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಚರಂಡಿ ನೀರು ನುಗ್ಗಿಮೊಹಿನ್‌ ಮನೆ ಜಲಾವೃತಗೊಂಡಿದ್ದು,  ಗೋಡೆ ಶಿಥಿಲಗೊಂಡು ಮನೆಯ ಮಣ್ಣಿನ ಗೋಡೆ ಕುಸಿದು ಬಿದ್ದ ಪರಿಣಾಮ ಮನೆಯೊಳಗೆ ಮಲಗಿದ್ದ ಮದಂಧರ್‌ ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪಾಲಿಕೆಯ ಧನುಷ್‌ ಸಿಬ್ಬಂದಿ ಮತ್ತು ಅಗ್ನಿಶಾಮಕ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸಿದರು. ಈ ಸಂಬಂಧ ಎನ್‌.ಆರ್‌. ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳವಾರವು ಮಳೆ: ಮಂಗಳವಾರ ಸಂಜೆ 5.30ರ ಸುಮಾರಿಗೆ ಆರಂಭವಾದ ಮಳೆ ಧಾರಾಕಾರವಾಗಿ ಸುರಿಯಿತು. ಹೀಗಾಗಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಗರದ ಬಹುತೇಕ ಕಡೆಗಳಲ್ಲಿ ಸಂಜೆ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ರದ್ದಾದವು. ತಿ.ನರಸೀಪುರ ತಾಲೂಕಿನಲ್ಲಿ ಮೋಡಕವಿದ ವಾತಾವರಣವಿದ್ದು, ಭಾರಿ ಗಾಳಿಯಿಂದಾಗಿ ಮಳೆ ಬಿದ್ದಿಲ್ಲ. ಎಚ್‌.ಡಿ.ಕೋಟೆ ತಾಲೂಕಿನಲ್ಲಿ ಮಧ್ಯಾಹ್ನ 3 ಗಂಟೆಯಿಂದಲೇ ಬಾರಿ ಮಳೆಯಾಗಿದೆ. ಪಿರಿಯಾಪಟ್ಟಣ ತಾಲೂಕಿನಲ್ಲಿ ರಾವಂದೂರು ಹೋಬಳಿಯ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ.

ಹವಾಮಾನ ಇಲಾಖೆ ವರದಿ ಪ್ರಕಾರ ಮೈಸೂರು ತಾಲೂಕು ರಮ್ಮನಹಳ್ಳಿಯಲ್ಲಿ 100.50 ಮಿ.ಮೀ ಮಳೆಯಾಗಿದೆ. ತಿ. ನರಸೀಪುರ ತಾಲೂಕು ಕೇತುಪುರದಲ್ಲಿ 96.50 ಮಿ.ಮೀ, ಹೊಸಕೋಟೆಯಲ್ಲಿ 65 ಮಿ.ಮೀ, ಕೊಡಗಳ್ಳಿಯಲ್ಲಿ 66.50 ಮಿ.ಮೀ, ಹನುಮನಾಳು 70.50 ಮಿ.ಮೀ, ತುರುಗನೂರು 65ಮಿ.ಮೀ, ಮಲೆಯೂರು 65 ಮಿ.ಮೀ, ರಂಗಸಮುದ್ರ 74.50 ಮಿ.ಮೀ, ಅತ್ತಹಳ್ಳಿ 80 ಮಿ.ಮೀ, ಬೀಡನಹಳ್ಳಿಯಲ್ಲಿ 69 ಮಿ.ಮೀ ಮಳೆಯಾಗಿದೆ.

ಟಾಪ್ ನ್ಯೂಸ್

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.