ಪಾರಂಪರಿಕ ಕಟ್ಟಡಗಳಿಗೆ ಕಂಟಕವಾದ ಮಳೆ


Team Udayavani, Oct 22, 2022, 5:19 PM IST

ಪಾರಂಪರಿಕ ಕಟ್ಟಡಗಳಿಗೆ ಕಂಟಕವಾದ ಮಳೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶಾಲ ವಾಗಿ ಹರಡಿಕೊಂಡಿರುವ ಪಾರಂಪರಿಕ ಕಟ್ಟಡಗಳಿಗೆ ಇತ್ತೀಚೆಗೆ ಸುರಿಯುತ್ತಿರುವ ಧಾರಾಕಾರ ಮಳೆಯೇ ಕಂಟಕವಾಗಿದ್ದು, ನಗರದಲ್ಲಿನ 10ಕ್ಕೂ ಹೆಚ್ಚು ಕಟ್ಟಡಗಳು ಕುಸಿದು ಬೀಳುವ ಹಂತಕ್ಕೆ ತಲುಪಿವೆ.

ಮೈಸೂರು ರಾಜರ ಆಳ್ವಿಕೆ ಕಾಲದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ನಿರ್ಮಾಣವಾಗಿದ್ದ ನೂರಾರು ಕಟ್ಟಡಗಳಲ್ಲಿ ಈಗಾಗಲೇ ಹಲವು ನಶಿಸಿದ್ದರೆ, ಉಳಿದ ಕಟ್ಟಡಗಳು ಇಂದೋ ಅಥವಾ ನಾಳೆಯೋ ಕುಸಿದು ಬೀಳುವ ಸ್ಥಿತಿಯಲ್ಲಿವೆ. ಈಗಾಗಲೇ ಮೈಸೂರು ಹೃದಯ ಭಾಗದಲ್ಲಿ ಪ್ರಮುಖ ವಾಜ್ಯ ಕೇಂದ್ರವಾಗಿ ಮಾರ್ಪಟ್ಟಿದ್ದ ಲ್ಯಾನ್ಸ್‌ಡೌನ್‌, ದೇವರಾಜ ಮಾರುಕಟ್ಟೆ ಕಟ್ಟಡಗಳು ಕುಸಿದು ಬಿದ್ದಿವೆ. ಇದರ ಜೊತೆಗೆ ಮಾನಸಗಂಗೋತ್ರಿಯಲ್ಲಿರುವ ಜಯಲಕ್ಷ್ಮೀ ವಿಲಾಸ ಅರಮನೆ, ಅಂಬಾ ವಿಲಾಸ ಅರಮನೆ ಕೋಟೆ, ವಾಣಿ ವಿಲಾಸ ಮಾರುಕಟ್ಟೆ, ಅಗ್ನಿಶಾಮಕ ಠಾಣೆಯ ಕಟ್ಟಡ, ಕಾಡಾ ಕಚೇರಿ ಕಟ್ಟಡದ ಕೆಲ ಭಾಗಗಳು ಕುಸಿದು ಬಿದ್ದಿದ್ದವು. ಹೀಗೆ ಕುಸಿದು ಬಿದ್ದ ಪಾರಂಪರಿಕ ಕಟ್ಟಡಗಳ ಪಟ್ಟಿಗೆ 106 ವರ್ಷಗಳಷ್ಟು ಹಳೆಯದಾದ ಮಹಾರಾಣಿ ಮಹಿಳಾ ಕಾಲೇಜು ಕಟ್ಟಡ ಸೇರ್ಪಡೆಯಾಗಿದೆ.

ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಿವು: ನಗರದ ವಿವಿಧ ಭಾಗಗಳಲ್ಲಿ ನೂರಾರು ವರ್ಷಗಳಿಂದ ತಮ್ಮ ಅಸ್ತಿತ್ವವನ್ನು ಸಾರಿ ಹೇಳುತ್ತಿರುವ ನೂರಾರು ಪಾರಂಪರಿಕ ಕಟ್ಟಡಗಳಲ್ಲಿ ಅಂಬಾವಿಲಾಸ ಅರಮನೆ, ಜಿಲ್ಲಾಧಿಕಾರಿಗಳ ಕಚೇರಿ, ಮಹಾರಾಜ ಕಾಲೇಜು, ದೊಡ್ಡ ಗಡಿಯಾರ, ಪಾಲಿಕೆ ಕಟ್ಟಡ, ಕೆ.ಆರ್‌.ಆಸ್ಪತ್ರೆ, ಕ್ರಾಫ‌ರ್ಡ್‌ ಭವನ, ಮಹಾರಾಣಿ ಜೂನಿಯರ್‌ ಕಾಲೇಜು ಕಟ್ಟಡ, ಸರ್ಕಾರಿ ಅತಿಥಿ ಗೃಹ, ನಗರ ಗ್ರಂಥಾ ಲಯ ಕಟ್ಟಡಗಳು ಸಂಪೂರ್ಣ ಶಿಥಿಲಗೊಂಡಿವೆ.

ನಿರ್ವಹಣೆ ಕೊರತೆ, ಮಳೆ ಕಂಟಕ: ಅರಸರ ಕಾಲದಲ್ಲಿ ನಿರ್ಮಾಣವಾಗಿದ್ದ ಕಟ್ಟಡಗಳು ಸೂಕ್ತ ನಿರ್ವಹಣೆ ಇಲ್ಲದೇ ಶಿಥಿಲವಾಗಿದ್ದು, ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಕುಸಿಯುವ ಹಂತ ತಲುಪಿವೆ. ಕಟ್ಟಡಗಳಿಗೆ ಸಂಬಂಧಪಟ್ಟ ಇಲಾಖೆ ಮತ್ತು ಜಿಲ್ಲಾಡಳಿತ ಕಾಲ ಕಾಲಕ್ಕೆ ಪಾರಂಪರಿಕ ಕಟ್ಟಡ ಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿಕೊಂಡು ಬಂದಿದ್ದರೆ, ಈ ಸಮಸ್ಯೆ ಎದುರಾಗುತ್ತಿರಲಿಲ್ಲ. ಆದರೆ ಸಂಬಂಧಪಟ್ಟವರು ನಿರ್ವಹಣೆ ಮಾಡದೇ ನಿರ್ಲಕ್ಷ್ಯ ಮಾಡಿದ್ದರಿಂದ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿವೆ. ಇತ್ತೀಚಿನ ವರ್ಷಗಲ್ಲಿ ಬಿಟ್ಟೂ ಬಿಡದಂತೆ ಸುರಿಯುತ್ತಿರುವ ಧಾರಾಕರ ಮಳೆ ಪಾರಂಪರಿಕ ಕಟ್ಟಡಗಳಿಗೆ ಕಂಟಕವಾಗಿದೆ.

ಪ್ರತ್ಯೇಕ ಅನುದಾನ ಇಲ್ಲದಿರುವುದೇ ಸಮಸ್ಯೆಗೆ ಕಾರಣ: ವಿವಿಧ ಇಲಾಖೆ ಹಾಗೂ ಸಾರ್ವಜನಿಕ ಬಳಕೆ ಯಲ್ಲಿರುವ ಪಾರಂಪರಿಕ ಕಟ್ಟಡಗಳ ನಿರ್ವಹಣೆಗೆ ಪ್ರತಿ ತಿಂಗಳು ಲಕ್ಷಾಂತರ ಹಣ ಅಗತ್ಯವಿದೆ. ಆದರೆ ಇದಕ್ಕೆ ಪ್ರತ್ಯೇಕ ಅನುದಾನ ಲಭ್ಯವಾಗದೇ ಇರುವುದ ರಿಂದ ಇಲಾಖೆಯವರಾಗಲಿ, ಸ್ಥಳೀಯ ಸಂಸ್ಥೆಗಳಾಗಲಿ ಕಟ್ಟಡಗಳ ನಿರ್ವಹಣೆ ಜವಾಬ್ದಾರಿ ಹೊರಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿಯೇ ಲ್ಯಾನ್ಸ್‌ ಡೌನ್‌, ದೇವರಾಜ ಮಾರುಕಟ್ಟೆ, ಅಗ್ನಿಶಾಮಕ ಠಾಣೆ, ಜಯಲಕ್ಷ್ಮೀ ವಿಲಾಸ ಅರಮನೆ ಕುಸಿದು ಬಿದ್ದಿವೆ. ಚೆಲುವಾಂಬ ವಿಲಾಸ ಅರಮನೆ ಮಾದರಿ: 1918ರಲ್ಲಿ ನಿರ್ಮಾಣವಾಗಿರುವ ಚೆಲುವಾಂಬ ವಿಲಾಸ ಅರಮನೆ ಕೇಂದ್ರ ಸರ್ಕಾರದ ಸಿಎಫ್ ಟಿಆರ್‌ಐ ಸುಪರ್ದಿಯಲ್ಲಿದ್ದು, ಅತ್ಯುತ್ತಮ ನಿರ್ವಹಣೆಯಿಂದ ಇಂದಿಗೂ ಸುಸ್ಥಿತಿಯಲ್ಲಿದೆ. ಅದೇ ರೀತಿ ಅಂಚೆ ಇಲಾಖೆ ಸುಪರ್ದಿಯಲ್ಲಿರುವ ಕಾರಂಜಿ ಮ್ಯಾನÒನ್‌ ಹೌಸ್‌ ಸುಸ್ಥಿರವಾಗಿದ್ದು ಈ ಎರಡೂ ಕಟ್ಟಡಗಳ ನಿರ್ವಹಣೆಗೆ ಪ್ರತಿ ತಿಂಗಳು 2ರಿಂದ 3ಲಕ್ಷ ರೂ. ಅನುದಾನ ಮೀಸಲಿಡಲಾಗಿದೆ. ಇದೇ ಮಾದರಿಯನ್ನು ಮೈಸೂರಿನ ಉಳಿದ ಕಟ್ಟಡಗಳಿಗೂ ಅಳವಡಿಸಿಕೊಂಡರೆ ಪಾರಂಪರಿಕ ಕಟ್ಟಡಗಳು ಉಳಿಯಲಿವೆ ತಜ್ಞರ ಸಲಹೆಯಾಗಿದೆ.

ಮೈಸೂರು ಪ್ರವಾಸೋದ್ಯಮ ಬೆಳೆಯಬೇಕು. ಅದ್ಧೂರಿಯಾಗಿ ದಸರಾ ಆಚರಿಸಬೇಕು. ಲಾಭ ಮಾಡಿಕೊಳ್ಳಬೇಕು. ಆದರೆ, ಪಾರಂಪರಿಕ ಕಟ್ಟಡಗಳು ಬೇಡ ಎಂದರೆ ಏನರ್ಥ? ಎಲ್ಲ ಕಟ್ಟಡಗಳನ್ನು ಬೀಳಿಸುತ್ತಿದ್ದರೆ ಮೈಸೂರಿನಲ್ಲಿ ಉಳಿಯುವುದೇನು? ದಸರಾಗೆ ಬಂದವರು ಏನು ನೋಡಬೇಕು? ಕಾಲ ಕಾಲಕ್ಕೆ ಸಂರಕ್ಷಣೆ ಮಾಡದಿದ್ದರೆ ಎಲ್ಲ ಕಟ್ಟಡಗಳು ನೆಲಸಮಗೊಳ್ಳುತ್ತವೆ. -ಪ್ರೊ.ಎನ್‌.ಎಸ್‌.ರಂಗರಾಜು, ಸದಸ್ಯ, ಜಿಲ್ಲಾ ಪಾರಂಪರಿಕ ಸಂರಕ್ಷಣಾ ಸಮಿತಿ

-ಸತೀಶ್‌ ದೇಪುರ

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.