ಹೆಚ್ಚು ದರಕ್ಕೆ ತಂಬಾಕು ಖರೀದಿಸಿ ರೈತರಿಗೆ ನೆರವಾಗಿ


Team Udayavani, Sep 17, 2019, 3:00 AM IST

hechchu-dara

ಹುಣಸೂರು: ಈ ಬಾರಿ ಪ್ರವಾಹದಿಂದ ರೈತರು ಬೆಳೆ ನಷ್ಟಕ್ಕೊಳಗಾಗಿದ್ದು, ಖರೀದಿ ಕಂಪನಿಗಳು ತಂಬಾಕಿಗೆ ಉತ್ತಮ ಬೆಲೆ ನೀಡುವ ಮೂಲಕ ಬೆಳೆಗಾರರ ನೆರವಿಗೆ ಧಾವಿಸಬೇಕು ಎಂದು ಸಂಸದ ಪ್ರತಾಪ್‌ ಸಿಂಹ ಮನವಿ ಮಾಡಿದರು. ತಾಲೂಕಿನ ಕಟ್ಟೆಮಳಲವಾಡಿಯ ಮೂರು ತಂಬಾಕು ಹರಾಜು ಮಾರುಕಟ್ಟೆಗಳಲ್ಲಿ ಪ್ರಸಕ್ತ ಸಾಲಿನ ತಂಬಾಕು ಹರಾಜು ಪ್ರಕ್ರಿಯೆಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮಂಡಳಿ ಅಧಿಕಾರಿಗಳ ಜೊತೆಗೂಡಿ ಬೇಲ್‌ಗ‌ಳಿಗೆ ಪೂಜೆ ಸಲ್ಲಿಸಿ, ಇ-ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿ ಅವರು ಮಾತನಾಡಿದರು.

175 ರೂ.ಗೆ ಮಾರಾಟ: ಕಳೆದ ವರ್ಷ 165 ರೂ.ನಿಂದ ಆರಂಭಗೊಂಡು ಅತಿ ಹೆಚ್ಚು ಅಂದರೆ 188 ರೂ.ವರೆಗೆ ಮಾರಾಟವಾಗಿತ್ತು. ಸರಾಸರಿ 142.30 ರೂ.ದರ ದೊರಕಿತ್ತು. ಪ್ರತಿ ವರ್ಷ ಪ್ರತಿ ಕೆ.ಜಿ.ಗೆ ಐದು ರೂ.ನಂತೆ ಹೆಚ್ಚಿಸುತ್ತಿದ್ದ ಕಂಪನಿಗಳು, ಇದೇ ಮೊದಲ ಬಾರಿಗೆ ಒಮ್ಮೆಲೆ ಕೆ.ಜಿ.ಗೆ ಹತ್ತು ರೂ. ಹೆಚ್ಚಿಸಿದೆ. ಮೊದಲ ದಿನ ಉತ್ತಮ ತಂಬಾಕು ಕೆ.ಜಿ.ಗೆ 175 ರೂ.ಗಳಿಗೆ ಮಾರಾಟವಾಗಿದ್ದು, ಆಶಾದಾಯಕ ಬೆಲೆ ದೊರೆತಿದೆ. ಈ ಬಾರಿ ಅನಾವೃಷ್ಟಿಯಿಂದ ರೈತರು ಸಂಕಷ್ಟಕ್ಕೊಳಗಾಗಿದ್ದಾರೆ. ಮನೆ-ಬೆಳೆ ನಷ್ಟವಾಗಿದೆ. ಈ ಬಾರಿ ಕನಿಷ್ಠ 150 ರೂ. ಸರಾಸರಿ ಬೆಲೆ ಬರುವಂತೆ ಖರೀದಿ ಮಾಡಬೇಕೆಂದು ಮನವಿ ಮಾಡಿದರು.

ಕಿರುಕುಳ ಬೇಡ ಎಚ್ಚರಿಕೆ: ಮಾರುಕಟ್ಟೆಯಲ್ಲಿ ಗುಣಮಟ್ಟದ ನೆಪದಲ್ಲಿ ರೈತರಿಗೆ ಅನಗತ್ಯ ಕಿರುಕುಳ ನೀಡಬಾರದು. ಮಂಡಳಿ ಅಧಿಕಾರಿಗಳು, ಕಂಪನಿಗಳವರು ರೈತ ಪರವಾಗಿರಬೇಕು. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ನಮ್ಮ ಜವಾಬ್ದಾರಿ ಹೆಚ್ಚಿದೆ. ಯಾವುದೇ ಅನ್ಯಾಯವಾಗಲು ಬಿಡಲ್ಲ, ಉತ್ತಮ ಬೆಲೆ ನೀಡಿ ಎಂದು ಕೋರಿದರು.

9 ಕಂಪನಿಗಳು ಭಾಗಿ: ಮೊದಲ ದಿನದ ಹರಾಜು ಪ್ರಕ್ರಿಯೆಯಲ್ಲಿ ಐಟಿಸಿ, ಡೆಕ್ಕನ್‌, ಜಿಪಿಐ, ಎಂಪಿಎಸ್‌, ಅಲಯನ್ಸ್‌-1, ಎಂ.ಎಲ್‌, ಮದನಪಲ್ಲಿ, ಪ್ರಗತಿ ಸೇರಿದಂತೆ 9 ಕಂಪನಿಗಳು ಭಾಗವಹಿಸಿದ್ದವು. ಮೂರು ಮಾರುಕಟ್ಟೆಗಳಲ್ಲಿ ತಲಾ 18 ಬೇಲ್‌ಗ‌ಳನ್ನು ಮಾರಾಟಕ್ಕಿಡಲಾಗಿತ್ತು.

ಈ ಸಂದರ್ಭದಲ್ಲಿ ತಂಬಾಕು ಮಂಡಳಿ ಪ್ರಾದೇಶಿಕ ವ್ಯವಸ್ಥಾಪಕ ಎಸ್‌.ಎಸ್‌.ಪಾಟೀಲ್‌, ಹರಾಜು ಅಧೀಕ್ಷಕರಾದ ವೀರಭದ್ರಯ್ಯ, ಪುರುಷೋತ್ತಮ ರಾಜೇಅರಸ್‌, ಜಿಪಂ ಸದಸ್ಯೆ ಸಾವಿತ್ರಿ, ತಾಪಂ ಅಧ್ಯಕ್ಷೆ ಪದ್ಮಮ್ಮ, ಗ್ರಾಪಂ ಅಧ್ಯಕ್ಷೆ ಚೆಲುವಮ್ಮ, ತಂಬಾಕು ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಣ್ಣೇಗೌಡ, ರೈತ ಸಂಘದ ತಾಲೂಕು ಕಾರ್ಯದರ್ಶಿ ರಾಮೇಗೌಡ, ಪಿರಿಯಾಪಟ್ಟಣದ ಸೋಮಶೇಖರ್‌, ಜಿಪಂ ಮಾಜಿ ಸದಸ್ಯ ನಾಗರಾಜಮಲ್ಲಾಡಿ, ಮುಖಂಡರಾದ ಎಸ್‌.ಬಿ.ಮೂರ್ತಿ, ಚಂದ್ರೇಗೌಡ, ಪಾಲಶೆಟ್ಟಿ, ಅಶೋಕ, ಹರೀಶ್‌, ಧರ್ಮೇಶ್‌ ಇತರರಿದ್ದರು.

ತಂಬಾಕು ಹರಾಜು ಪ್ರಕ್ರಿಯೆಯಲ್ಲಿ ಸಣ್ಣಪುಟ್ಟ ಕಂಪನಿಗಳು ಸಹ ಹೆಚ್ಚು ಖರೀದಿ ಮಾಡುವ ಮೂಲಕ ರೈತರಿಗೆ ನೆರವಾಗಬೇಕು. ಅದರಲ್ಲೂ ಐಟಿಸಿ, ಪಿಎಸ್‌ಎಸ್‌, ಡೆಕ್ಕನ್‌ ಮತ್ತಿತರ ದೊಡ್ಡ ಕಂಪನಿಗಳು ಈ ಬಾರಿಯಂತೂ ಉತ್ತಮ ಬೆಲೆ ನೀಡಿ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ ಬೆಳೆಗಾರರಿಗೆ ಸ್ಪಂದಿಸಬೇಕು.
-ಪ್ರತಾಪ್‌ ಸಿಂಹ, ಸಂಸದ

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.