ಹಿಮೋಫಿಲಿಯ ತಡೆಗೆ ಸಂಶೋಧನೆಗಳಾಗಲಿ


Team Udayavani, Apr 21, 2019, 3:00 AM IST

himofilia

ಮೈಸೂರು: ವೈದ್ಯರು, ವಿಜ್ಞಾನಿಗಳಿಗೆ ಹಿಮೋಫಿಲಿಯ ಕಾಯಿಲೆ ಸವಾಲಾಗಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಶೋಧನೆಗಳು ನಡೆಯಬೇಕಿದೆ ಎಂದು ಶಾಸಕ ಎಸ್‌.ಎ.ರಾಮದಾಸ್‌ ಹೇಳಿದರು.

ನಗರದ ಜೆ.ಕೆ.ಮೈದಾನದಲ್ಲಿರುವ ಮೈಸೂರು ವೈದ್ಯಕೀಯ ಕಾಲೇಜಿನ ಅಮೃತ ಮಹೋತ್ಸವ ಸಭಾಂಗಣದಲ್ಲಿ ಹಿಮೋಫಿಲಿಯ ಸೊಸೈಟಿ ಮೈಸೂರು ಚಾಪ್ಟರ್‌, ಕೆ.ಆರ್‌.ಆಸ್ಪತ್ರೆ ಸಹಯೋಗದೊಂದಿಗೆ ಆಯೋಜಿಸಿದ್ದ “ವಿಶ್ವ ಹಿಮೋಫಿಲಿಯ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅನುವಂಶಿಯ ಕಾಯಿಲೆ: ಗಾಯವಾದಾಗ ರಕ್ತ ಹೆಪ್ಪುಗಟ್ಟದೆ, ನಂತರ ಅದು ರಕ್ತಸ್ರಾವವಾಗುವುದೇ ಹಿಮೋಫಿಲಿಯ ಕಾಯಿಲೆ. ದೇಹಕ್ಕೆ ಪೆಟ್ಟಾದಾಗ ಕೇವಲ ದೇಹದ ಹೊರಗೆ ಮಾತ್ರವಲ್ಲದೇ, ದೇಹದ ಒಳಗಡೆಯೂ ರಕ್ತಸ್ರಾವ ಉಂಟಾಗುತ್ತದೆ. ಹಿಮೋಫಿಲಿಯವು ಅನುವಂಶಿಯ ಕಾಯಿಲೆಯಾಗಿದ್ದು, ಔಷಧಗಳಿಗಾಗಿ ಹೆಚ್ಚು ಹಣವನ್ನು ಖರ್ಚು ಮಾಡಬೇಕಾಗುತ್ತದೆ ಎಂದು ಹೇಳಿದರು.

ಯೋಗಕ್ಕೆ ವಿಶೇಷ ಶಕ್ತಿ: ಈ ಕಾಯಿಲೆಯು ಪುರುಷರಲ್ಲಿಯೇ ಜಾಸ್ತಿ ಕಂಡು ಬರುತ್ತಿದ್ದು, ದೇಹದೊಳಗೆ ರಕ್ತಸ್ರಾವವಾದಾಗ ದೇಹದ ಮೂಳೆಗಳು ಸಂಧಿಸಿದ ಭಾಗಗಳಲ್ಲಿ ಊದಿಕೊಳ್ಳುವುದಲ್ಲದೇ, ನೋವು ಕಾಣಿಸಿಕೊಳ್ಳುತ್ತದೆ.

ಜೀನ್ಸ್‌ ಸಮಸ್ಯೆಯಿಂದ ಈ ರೀತಿಯ ಕಾಯಿಲೆಗೆ ತುತ್ತಾಗುತ್ತಾರೆ. ಅಗ್ನಿಹೋತ್ರ ಹಾಗೂ ಯೋಗಕ್ಕೆ ವಿಶೇಷ ಶಕ್ತಿಯಿದೆ. ಅವುಗಳನ್ನು ನಿರಂತರವಾಗಿ ಮಾಡುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಆರೋಗ್ಯವಂತರಾಗಿ ಜೀವನ ನಡೆಸಲು ಸಾಧ್ಯವಿದೆ ಎಂದು ಸಲಹೆ ನೀಡಿದರು.

ರೋಗ ನಿರೋಧಕ ಶಕ್ತಿ: ವೈದ್ಯಕೀಯ ಸಚಿವನಾಗಿದ್ದ ಸಂದರ್ಭ ಈ ಕಾಯಿಲೆಯ ಬಗ್ಗೆ ತಿಳಿದು 2 ಕೋಟಿ ರೂ. ವೆಚ್ಚದಲ್ಲಿ ಹಿಮೋಫಿಲಿಯ ಸೊಸೈಟಿ ತೆರೆದು ಹಿಮೋಪಿಲಿಯ ಕಾಯಿಲೆಗೆ ತುತ್ತಾದ ಮಕ್ಕಳು,ವಯಸ್ಕರಿಗೆ ಸೌಲಭ್ಯ ಒದಗಿಸಲಾಯಿತು.

ಆ ನಂತರ ಸರಕಾರ ನಿರಂತರವಾಗಿ ಹಿಮೋಫಿಲಿಯಾ ತುತ್ತಾದವರಿಗೆ ಸೌಲಭ್ಯ ಒದಗಿಸುತ್ತಿದೆ. ವೈದ್ಯರು ಔಷಧೋಪಚರ ನೀಡುತ್ತಾರೆ. ಆದರೆ, ಪೋಷಕರು ರೋಗ ನಿರೋಧಕ ಶಕ್ತಿಗಳನ್ನು ತುಂಬುವಂತಹ ಶಕ್ತಿಯನ್ನು ಮಾಡಬೇಕಿದೆ ಎಂದರು.

ಹಿಮೋಫಿಲಿಯ ಕಾಯಿಲೆಗೆ ತುತ್ತಾದ ಮಕ್ಕಳನ್ನು ಕೇಂದ್ರದ ಬಾಲ ಆರೋಗ್ಯ ಯೋಜನೆಯ ಸೌಲಭ್ಯ ಒದಗಿಸುವಂತೆ ಪ್ರಧಾನ ಮಂತ್ರಿಗಳನ್ನು ಮನವಿ ಮಾಡುತ್ತೇನೆ. ಆಯುಷ್ಮಾನ್‌ ಭಾರತ್‌ ಆರೋಗ್ಯ ಯೋಜನೆಯಲ್ಲಿ ಐದು ಲಕ್ಷ ರೂ. ಸೌಲಭ್ಯವಿದ್ದು,

ಇದರಲ್ಲಿ ಮಕ್ಕಳಿಗಾಗಿಯೇ ಇರುವ ವಿಶೇಷ ಯೋಜನೆಯೊಳಗೆ ಹಿಮೋಫಿಲಿಯಾ ಮಕ್ಕಳಿಗೂ ಹೆಚ್ಚಿನ ಸವಲತ್ತು ಒದಗಿಸುವ ಕಾರ್ಯವಾಗಬೇಕು. ಮಕ್ಕಳಿಗೆ ವಿಶೇಷ ಸ್ಕಾಲರ್‌ಶಿಪ್‌ ಸೇರಿದಂತೆ ಇತರೆ ಸೌಲಭ್ಯಗಳನ್ನು ಒದಗಿಸುವ ಮೂಲಕ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಅವರು ಸಲಹೆ ನೀಡಿದರು.

ಉಚಿತವಾಗಿ ಔಷಧ: ಕೆ.ಆರ್‌.ಆಸ್ಪತ್ರೆ ರಕ್ತ ನಿಧಿ ಮುಖ್ಯಸ್ಥ ಮಂಜುನಾಥ್‌ ಮಾತನಾಡಿ, ರಾಜ್ಯದಲ್ಲಿ 3640 ಮಂದಿ ಹಿಮೋಫಿಲಿಯಾ ಕಾಯಿಲೆಗೆ ತುತ್ತಾಗಿದ್ದಾರೆ. 2007ರಿಂದ ಹಿಮೋಫಿಲಿಯಾ ಕಾಯಿಲೆ ಗುರುತಿಸಲಾಗಿದ್ದು, ಈ ಕಾಯಿಲೆಗೆ ತುತ್ತಾದವರಿಗೆ ಸಾಧ್ಯವಾದಷ್ಟು ಉಚಿತವಾಗಿ ಔಷಧಗಳನ್ನು ಒದಗಿಸಲಾಗುತ್ತಿದೆ.

ಕೆ.ಆರ್‌.ಆಸ್ಪತ್ರೆಯಲ್ಲಿ ಹಿಮೋಫಿಲಿಯಕ್ಕೆ ತುತ್ತಾದ 30 ಮಂದಿ ಮಕ್ಕಳು, 120 ಮಂದಿ ವಯಸ್ಕರು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು. ಕೆ.ಆರ್‌.ಆಸ್ಪತ್ರೆ ಅಧೀಕ್ಷಕ ನಂಜುಂಡಸ್ವಾಮಿ, ಅಖೀಲ ಭಾರತ್‌ ಹಿಮೋಫಿಲಿಯ ಫೆಡರೇಷ‌ನ್‌ ಅಧ್ಯಕ್ಷ ವಿಕಾಸ್‌ ಗೋಯಲ್‌, ಕೆ.ಆರ್‌.ಆಸ್ಪತ್ರೆ ನಿವೃತ್ತ ಅಧೀಕ್ಷಕ ಡಾ. ಶ್ರೀನಿವಾಸ್‌, ಹೀಮೋಫಿಲಿಯ ಸೊಸೈಟಿ ಮೈಸೂರು ಚಾಪ್ಟರ್‌ ಅಧ್ಯಕ್ಷ ಡಾ.ಎಸ್‌.ಕೆ.ಮಿಥಲ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.