ಅಲ್ಲಿ ಲವ್- ಇಲ್ಲಿ ಮದುವೆ: ತಾಳಿ ಕಟ್ಟುವ ವೇಳೆ ಮದುವೆಗೆ ‘ನೋ ‘ಎಂದು ವಧುವಿನ ಹೈಡ್ರಾಮಾ
Team Udayavani, May 22, 2022, 3:19 PM IST
ಮೈಸೂರು: ಅದ್ದೂರಿಯಾಗಿ ನಡೆಯುತ್ತಿರುವ ವಿವಾಹ, ಇನ್ನೇನು ತಾಳಿ ಕಟ್ಟಬೇಕು ಎಂದಾಗ ಎದ್ದು ನಿಲ್ಲುವ ವಧು ತನಗೆ ಮದುವೆ ಇಷ್ಟವಿಲ್ಲ ಎಂದು ಹೇಳುವ ದೃಶ್ಯಗಳನ್ನು ನೀವು ಸಿನಿಮಾಗಳಲ್ಲಿ, ಧಾರವಾಹಿಗಳಲ್ಲಿ ನೋಡಿರಬಹುದು. ಆದರೆ ಇಂತಹುದೇ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಸುಣ್ಣದಕೇರಿಯ ಯುವತಿಗೆ ಹೆಚ್.ಡಿ ಕೋಟೆ ತಾಲೂಕಿನ ಗ್ರಾಮವೊಂದರ ಯುವಕನೊಂದಿಗೆ ನಿಶ್ಚಯವಾಗಿತ್ತು. ಮೈಸೂರಿನ ವಿದ್ಯಾಭಾರತಿ ಕಲ್ಯಾಣ ಮಂಟಪದಲ್ಲಿ ಇಂದು ಅದ್ಧೂರಿಯಾಗಿ ಮದುವೆ ನಡೆಯುತ್ತಿತ್ತು. ಆದರೆ ತಾಳಿ ಕಟ್ಟಬೇಕು ಎಂಬ ಸಮಯದಲ್ಲಿ ವಧು ಕುಸಿದು ಬಿದ್ದಿದ್ದಾಳೆ.
ಆದರೆ ವಧು ಅನಾರೋಗ್ಯದಿಂದ ಕುಸಿದು ಬಿದ್ದಿರಲಿಲ್ಲ. ಮದುವೆ ಮುರಿಯುವ ಉದ್ದೇಶದಿಂದ ಕೊನೆ ಕ್ಷಣದಲ್ಲಿ ಆಕೆ ಹೈಡ್ರಾಮಾ ಆರಂಭಿಸಿದ್ದಳು. ಕುಸಿದು ಬಿದ್ದಂತೆ ನಟಿಸಿದ ವಧು, ‘ತಾನು ನಿಶ್ಚಯವಾದ ವರನನ್ನು ವಿವಾಹವಾಗಲಾರೆ, ತನ್ನ ಲವರ್ ನನ್ನೇ ಮದುವೆಯಾಗುತ್ತೇನೆಂದು’ ವರಸೆ ಆರಂಭಿಸಿದ್ದಾಳೆ.
ಇದನ್ನೂ ಓದಿ:ಹಿಂದೂ ಸಮಾಜವನ್ನು ರಕ್ಷಣೆ ಮಾಡುವ ಉದ್ದೇಶದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ: ಈಶ್ವರಪ್ಪ
ಅಂದಹಾಗೆ ಈ ಯುವತಿಗೆ ಮದುವೆ ನಿಶ್ಚಯವಾಗಿದ್ದರೂ ಸುಣ್ಣದಕೇರಿಯಲ್ಲೇ ಪಕ್ಕದ ಮನೆಯವನೊಂದಿಗೆ ಲವ್ವಿಡವ್ವಿ ಇಟ್ಟುಕೊಂಡಿದ್ದಳು. ಹೆಚ್.ಡಿ ಕೋಟೆಯ ಯುವಕನೊಂದಿಗೆ ಮದುವೆ ಫಿಕ್ಸ್ ಆದ ಬಳಿಕ ಯುವತಿಯ ಪ್ರಿಯಕರನಿಂದ ವರನಿಗೆ ಮದುವೆಯಾಗದಂತೆ ಮೆಸೇಜ್ ಕೂಡಾ ಬಂದಿತ್ತು. ಆದರೆ ಮಸೇಜ್ ಗೂ ನನಗೂ ಸಂಬಂಧವಿಲ್ಲ ಎಂಬಂತೆ ಯುವತಿ ಮ್ಯಾನೇಜ್ ಮಾಡಿದ್ದಳು.
ಇಷ್ಟೆಲ್ಲಾ ಇದ್ದರೂ ಯಾರಿಗೂ ಹೇಳದ ಯುವತಿ ಮದುವೆಯವರೆಗೂ ಸುಮ್ಮನಿದ್ದಳು. ಆದರೆ ತಾಳಿ ಕಟ್ಟುವ ವೇಳೆ ಮದುವೆಗೆ ನೋ ಎಂದ ವಧು ಹೈಡ್ರಾಮವನ್ನೇ ನಡೆಸಿದ್ದಾಳೆ.
ವಧುವಿಗೆ ಛೀಮಾರಿ: ತಮ್ಮೆದುರೇ ನಡೆದ ಇಷ್ಟೆಲ್ಲಾ ಘಟನೆ ಕಂಡು ವರನ ಪೋಷಕರು ವಧುವಿಗೆ ಛೀಮಾರಿ ಹಾಕಿದ್ದಾರೆ. ಮದುವೆಗಾಗಿ ವರನ ಪೋಷಕರು ಸುಮಾರು ಐದು ಲಕ್ಷ ಹಣ ಖರ್ಚು ಮಾಡಿದ್ದರು. ವಧುವಿಗೆ ಚಿನ್ನ, ರೇಷ್ಮೆ ಸೀರೆಗಾಗಿ ಲಕ್ಷ ಖರ್ಚು ಮಾಡಿದ್ದರು.
ಮದುವೆಯಾಗುವುದಿಲ್ಲವೆಂದು ಹಠ ಹಿಡಿದ ವಧುವನ್ನು ಕೆ.ಆರ್ ಠಾಣೆ ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ಹುಣಸೂರು : ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಬೈಕ್ : ಸವಾರ ಸ್ಥಳದಲ್ಲೇ ಸಾವು
ಐಎಂಎ ಕೆಎಸ್ಬಿ ವೈದ್ಯರ ದಿನಾಚರಣೆ ಪ್ರಶಸ್ತಿಗೆ ಡಾ. ಆಶಾ ಪ್ರಭು ಆಯ್ಕೆ
ಸಾಗರ: ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ 14 ಮಕ್ಕಳು ದಿಢೀರ್ ಅಸ್ವಸ್ಥ
ಮುಂದಿನ 25 ವರ್ಷದಲ್ಲಿ ರಾಜ್ಯಕ್ಕೆ ಜಾಗತಿಕ ಪ್ರತಿಷ್ಠೆ: ಸಚಿವ ಅಶ್ವತ್ಥ ನಾರಾಯಣ
MUST WATCH
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ಹೊಸ ಸೇರ್ಪಡೆ
ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ಹುಣಸೂರು : ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಬೈಕ್ : ಸವಾರ ಸ್ಥಳದಲ್ಲೇ ಸಾವು
ಇಮ್ರಾನ್ ಖಾನ್ ನಿವಾಸದಲ್ಲಿ ಬೇಹು ಸಾಧನ ಅಳವಡಿಕೆಗೆ ಯತ್ನ: ಭದ್ರತಾ ಸಿಬ್ಬಂದಿ ಬಂಧನ
ಐಎಂಎ ಕೆಎಸ್ಬಿ ವೈದ್ಯರ ದಿನಾಚರಣೆ ಪ್ರಶಸ್ತಿಗೆ ಡಾ. ಆಶಾ ಪ್ರಭು ಆಯ್ಕೆ
ಪಂಚಾಂಗ ನೋಡಿ ರಾಕೆಟ್ ಉಡಾವಣೆ : ಟೀಕೆಗೆ ಗುರಿಯಾದ ಖ್ಯಾತ ನಟ ಮಾಧವನ್ !