ಅಲ್ಲಿ ಲವ್- ಇಲ್ಲಿ ಮದುವೆ: ತಾಳಿ ಕಟ್ಟುವ ವೇಳೆ ಮದುವೆಗೆ ‘ನೋ ‘ಎಂದು ವಧುವಿನ ಹೈಡ್ರಾಮಾ
Team Udayavani, May 22, 2022, 3:19 PM IST
ಮೈಸೂರು: ಅದ್ದೂರಿಯಾಗಿ ನಡೆಯುತ್ತಿರುವ ವಿವಾಹ, ಇನ್ನೇನು ತಾಳಿ ಕಟ್ಟಬೇಕು ಎಂದಾಗ ಎದ್ದು ನಿಲ್ಲುವ ವಧು ತನಗೆ ಮದುವೆ ಇಷ್ಟವಿಲ್ಲ ಎಂದು ಹೇಳುವ ದೃಶ್ಯಗಳನ್ನು ನೀವು ಸಿನಿಮಾಗಳಲ್ಲಿ, ಧಾರವಾಹಿಗಳಲ್ಲಿ ನೋಡಿರಬಹುದು. ಆದರೆ ಇಂತಹುದೇ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಸುಣ್ಣದಕೇರಿಯ ಯುವತಿಗೆ ಹೆಚ್.ಡಿ ಕೋಟೆ ತಾಲೂಕಿನ ಗ್ರಾಮವೊಂದರ ಯುವಕನೊಂದಿಗೆ ನಿಶ್ಚಯವಾಗಿತ್ತು. ಮೈಸೂರಿನ ವಿದ್ಯಾಭಾರತಿ ಕಲ್ಯಾಣ ಮಂಟಪದಲ್ಲಿ ಇಂದು ಅದ್ಧೂರಿಯಾಗಿ ಮದುವೆ ನಡೆಯುತ್ತಿತ್ತು. ಆದರೆ ತಾಳಿ ಕಟ್ಟಬೇಕು ಎಂಬ ಸಮಯದಲ್ಲಿ ವಧು ಕುಸಿದು ಬಿದ್ದಿದ್ದಾಳೆ.
ಆದರೆ ವಧು ಅನಾರೋಗ್ಯದಿಂದ ಕುಸಿದು ಬಿದ್ದಿರಲಿಲ್ಲ. ಮದುವೆ ಮುರಿಯುವ ಉದ್ದೇಶದಿಂದ ಕೊನೆ ಕ್ಷಣದಲ್ಲಿ ಆಕೆ ಹೈಡ್ರಾಮಾ ಆರಂಭಿಸಿದ್ದಳು. ಕುಸಿದು ಬಿದ್ದಂತೆ ನಟಿಸಿದ ವಧು, ‘ತಾನು ನಿಶ್ಚಯವಾದ ವರನನ್ನು ವಿವಾಹವಾಗಲಾರೆ, ತನ್ನ ಲವರ್ ನನ್ನೇ ಮದುವೆಯಾಗುತ್ತೇನೆಂದು’ ವರಸೆ ಆರಂಭಿಸಿದ್ದಾಳೆ.
ಇದನ್ನೂ ಓದಿ:ಹಿಂದೂ ಸಮಾಜವನ್ನು ರಕ್ಷಣೆ ಮಾಡುವ ಉದ್ದೇಶದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ: ಈಶ್ವರಪ್ಪ
ಅಂದಹಾಗೆ ಈ ಯುವತಿಗೆ ಮದುವೆ ನಿಶ್ಚಯವಾಗಿದ್ದರೂ ಸುಣ್ಣದಕೇರಿಯಲ್ಲೇ ಪಕ್ಕದ ಮನೆಯವನೊಂದಿಗೆ ಲವ್ವಿಡವ್ವಿ ಇಟ್ಟುಕೊಂಡಿದ್ದಳು. ಹೆಚ್.ಡಿ ಕೋಟೆಯ ಯುವಕನೊಂದಿಗೆ ಮದುವೆ ಫಿಕ್ಸ್ ಆದ ಬಳಿಕ ಯುವತಿಯ ಪ್ರಿಯಕರನಿಂದ ವರನಿಗೆ ಮದುವೆಯಾಗದಂತೆ ಮೆಸೇಜ್ ಕೂಡಾ ಬಂದಿತ್ತು. ಆದರೆ ಮಸೇಜ್ ಗೂ ನನಗೂ ಸಂಬಂಧವಿಲ್ಲ ಎಂಬಂತೆ ಯುವತಿ ಮ್ಯಾನೇಜ್ ಮಾಡಿದ್ದಳು.
ಇಷ್ಟೆಲ್ಲಾ ಇದ್ದರೂ ಯಾರಿಗೂ ಹೇಳದ ಯುವತಿ ಮದುವೆಯವರೆಗೂ ಸುಮ್ಮನಿದ್ದಳು. ಆದರೆ ತಾಳಿ ಕಟ್ಟುವ ವೇಳೆ ಮದುವೆಗೆ ನೋ ಎಂದ ವಧು ಹೈಡ್ರಾಮವನ್ನೇ ನಡೆಸಿದ್ದಾಳೆ.
ವಧುವಿಗೆ ಛೀಮಾರಿ: ತಮ್ಮೆದುರೇ ನಡೆದ ಇಷ್ಟೆಲ್ಲಾ ಘಟನೆ ಕಂಡು ವರನ ಪೋಷಕರು ವಧುವಿಗೆ ಛೀಮಾರಿ ಹಾಕಿದ್ದಾರೆ. ಮದುವೆಗಾಗಿ ವರನ ಪೋಷಕರು ಸುಮಾರು ಐದು ಲಕ್ಷ ಹಣ ಖರ್ಚು ಮಾಡಿದ್ದರು. ವಧುವಿಗೆ ಚಿನ್ನ, ರೇಷ್ಮೆ ಸೀರೆಗಾಗಿ ಲಕ್ಷ ಖರ್ಚು ಮಾಡಿದ್ದರು.
ಮದುವೆಯಾಗುವುದಿಲ್ಲವೆಂದು ಹಠ ಹಿಡಿದ ವಧುವನ್ನು ಕೆ.ಆರ್ ಠಾಣೆ ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?