ಹೆದ್ದಾರಿ ಬದಿ ರಾಶಿ ರಾಶಿ ಕಸ, ಪ್ರಯಾಣಿಕರಿಗೆ ಕಿರಿಕಿರಿ


Team Udayavani, Dec 5, 2021, 1:01 PM IST

ಕಸ ಸಮಸ್ಯೆ

ಎಚ್‌.ಡಿ.ಕೋಟೆ: ರಾಜ್ಯ ಹೆದ್ದಾರಿ ಬದಿ ರಾಶಿ ರಾಶಿ ಕಸ ಸುರಿದಿದ್ದು, ದುರ್ವಾಸನೆ ಬೀರುತ್ತಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಪ್ರಯಾಣಿಕರು ಕಿರಿಕಿರಿ ಉಂಟಾಗಿದ್ದರೆ, ಸ್ಥಳೀಯರಿಗೆ ಅಸಹ್ಯ ಹುಟ್ಟಿಸುತ್ತಿದೆ.

ಇದು ತಾಲೂ ಕಿನ ಹಂಪಾಪುರ ರಸ್ತೆ ಬಳಿ ಕಂಡು ಬರುವ ದೃಶ್ಯ. ಹಂಪಾಪುರದಲ್ಲಿ ಗ್ರಾಮ ಪಂಚಾಯಿತಿ ಕಾರ್ಯಾ ಲಯ ಕಾರ್ಯನಿರ್ವಹಿಸುತ್ತಿದೆ. ಗ್ರಾಪಂ ನಿಂದ ಕೆಲವೇ ಮೀಟರ್‌ಗಳ ದೂರದ ಮೈಸೂರು- ಮಾನಂದವಾಡಿ ಮಾರ್ಗದ ರಾಜ್ಯ ಹೆದ್ದಾರಿ ಬದಿ ಮೂಟೆಗಳಲ್ಲಿ ಕಸದ ರಾಶಿ ಸುರಿಯಲಾಗಿದೆ. ಪ್ರತಿದಿನ ಕೇರಳದಿಂದ ಮತ್ತು ಎಚ್‌.ಡಿ.ಕೋಟೆ ತಾಲೂಕಿನಿಂದ ಸಾವಿರಾರು ವಾಹನಗಳು ಹೆದ್ದಾರಿ ಮಾರ್ಗವಾಗಿ ಮೈಸೂರು ತಲುಪುತ್ತಿವೆ.

ಈ ರಸ್ತೆ ಮಾರ್ಗವಾಗಿ ಸಂಚರಿಸುವ ವಾಹನ ಸವಾರರು ಹಾಗೂ ಪ್ರಯಾಣಿಕರು ಈ ಕಸದ ರಾಶಿ ನೋಡಿ ಅಸಹ್ಯಪಡುವಂತಿದೆ. ಪಾದಚಾರಿಗಳು ಮೂಗು ಮುಚ್ಚಿಕೊಂಡು ಸಂಚರಿಸುತ್ತಿದ್ದಾರೆ. ಈ ಅವ್ಯವಸ್ಥೆಯಿಂದ ರೋಸಿ ಹೋಗಿರುವ ಸಾರ್ವಜನಿಕರು ಇಲ್ಲಿನ ಗ್ರಾಪಂ ಆಡಳಿತಕ್ಕೆ ಹಿಡಿಶಾಪ ಹಾಕುವುದು ಸಾಮಾನ್ಯವಾಗಿದೆ.

ಕಸದ ರಾಶಿ ಕೊಳೆತು ನಾರುತ್ತಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಕೂಡ ಎದುರಾಗಿದೆ. ಶುಚಿತ್ವ ಹಾಗೂ ನೈರ್ಮಲ್ಯಕ್ಕೆ ಆದ್ಯತೆ ನೀಡಲು ಸರ್ಕಾರ ಹಲವಾರು ಯೋಜನೆ ರೂಪಿಸಿದ್ದರೂ ಇಲ್ಲಿನ ಗ್ರಾಮ ಪಂಚಾಯ್ತಿ ಮಾತ್ರ ಸ್ವತ್ಛತೆಗೆ ಕಳಜಿವಹಿ ಸುತ್ತಿಲ್ಲ. ಕಸದ ರಾಶಿಯನ್ನು ಕಂಡು ಕಾಣದಂತೆ ಗ್ರಾಪಂ ವರ್ತಿಸುತ್ತಿದೆ.

ಇದನ್ನೂ ಓದಿ;- ನಟಿ ಜಾಕ್ವೆಲಿನ್ ಗೆ 10 ಕೋಟಿ ರೂ ಮೌಲ್ಯದ ಉಡುಗೊರೆ ನೀಡಿದ ಸುಕೇಶ್: ವರದಿ

ಇಲ್ಲಿ ಬಿದ್ದಿರುವ ತ್ಯಾಜ್ಯವನ್ನು ತೆರವುಗೊಳಿಸಿ ಈ ಜಾಗದಲ್ಲಿ ಕಸ ಹಾಕು ವವರ ವಿರುದ್ಧ ದಂಡ ವಿಧಿಸುವುದು, ಮತ್ತಿತರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ಶುಚಿತ್ವ ಕಾಪಾಡಿಕೊಳ್ಳ ಬಹುದು. ಆದರೆ, ಗ್ರಾಮ ಪಂಚಾಯ್ತಿ ಇದ್ಯಾವುದನ್ನೂ ಮಾಡದೇ ಮೌನಕ್ಕೆ ಶರಣಾಗಿದೆ.

ಇನ್ನಾದರೂ ಗ್ರಾಪಂ ಸದಸ್ಯರು ಹಾಗೂ ಅಧಿಕಾರಿಗಳು ಕಸದ ರಾಶಿಯನ್ನು ತೆರವುಗೊಳಿಸಿ, ಮತ್ತೆ ತ್ಯಾಜ್ಯ ಸುರಿಯದಂತೆ ಕ್ರಮವಹಿಸಬೇಕು ಎಂದು ಸಾರ್ವನಿಕರು ಆಗ್ರಹಿಸಿದ್ದಾರೆ.

“ ರಸ್ತೆ ಮಾರ್ಗದಲ್ಲಿ ಕಸದ ರಾಶಿ ಬಿದ್ದಿರುವ ವಿಚಾರವಾಗಿ ಸಂಬಂಧಪಟ್ಟ ಹಂಪಾಪುರ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಂಡು ಕಸ ತೆರವುಗೊಳಿಸಿ ಶುಚಿತ್ವಕ್ಕೆ ಆದ್ಯತೆ ನೀಡಲಾಗುವುದು.” ಜೆರಾಲ್ಡ್‌ ರಾಜೇಶ್‌, ತಾಪಂ ಇಒ

“ ಹಂಪಾಪುರ ರಸ್ತೆ ಬದಿ ಕಸ ಬಿಸಾಡಿರುವುದು ತಿಳಿದಿಲ್ಲ. ಈ ಹಿಂದೆ ಕೇರಳದಿಂದದ ಕಸ ತಂದು ಹಂಪಾಪುರದಲ್ಲಿ ಎಸೆಯುವಾಗ ಅವರಿಗೆ ಎಚ್ಚರಿಕೆ ನೀಡಲಾಗಿತ್ತು. ರಾತ್ರಿ ವೇಳೆ ಯಾರಾದರೂ ಹೊರಗಿನಿಂದ ಕಸ ತಂದು ಎಸೆದಿರುವ ಸಾಧ್ಯತೆ ಇದೆ. ಕೂಡಲೇ ಸ್ಥಳ ಪರಿಶೀಲಿಸಿ ಕಸ ತೆರವುಗೊಳಿಸಲಾಗುವುದು.” ಸೌಮ್ಯ, ಪಿಡಿಒ ಹಂಪಾಪುರ ಗ್ರಾಪಂ

– ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ

CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ

CM Siddaramaiah: ಸಿಎಂ,ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ​ಸಭೆ

CM Siddaramaiah: ಸಿಎಂ,ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ​ಸಭೆ

ಜರ್ಮನಿ ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್‌ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು

German ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್‌ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು

Sushil Modi cremated with state honours

Patna; ಸರ್ಕಾರಿ ಗೌರವದೊಂದಿಗೆ ಸುಶೀಲ್‌ ಮೋದಿ ಅಂತ್ಯ ಸಂಸ್ಕಾರ

The journalist who had reported on Covid was released after 4 years

Wuhan; ಕೋವಿಡ್‌ ಬಗ್ಗೆ ವರದಿ ಮಾಡಿದ್ದ ಪತ್ರಕರ್ತೆ 4 ವರ್ಷ ಬಳಿಕ ರಿಲೀಸ್‌

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-hunsur

Hunsur: ನಾಗರಹೊಳೆಯಲ್ಲಿ ಗುಂಡಿಕ್ಕಿ ಅಪರೂಪದ ಕೂರ ಭೇಟೆಯಾಡಿದ್ದ ಇಬ್ಬರ ಬಂಧನ; ಓರ್ವ ಪರಾರಿ

3-hunsur

Hunsur: ಅತಿಯಾದ ಮದ್ಯ ಸೇವನೆ; ಯುವಕ ಸಾವು

1-cm-mysore

State Politics: ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ

CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ

CM Siddaramaiah: ಸಿಎಂ,ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ​ಸಭೆ

CM Siddaramaiah: ಸಿಎಂ,ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ​ಸಭೆ

ಜರ್ಮನಿ ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್‌ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು

German ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್‌ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು

Doping detection among minor sports stars

ಅಪ್ರಾಪ್ತರಲ್ಲಿ ಡೋಪಿಂಗ್‌ ಪತ್ತೆ: ಹೆಚ್ಚಿನ ಬಜೆಟ್‌ಗೆ ಬೇಡಿಕೆ

Sushil Modi cremated with state honours

Patna; ಸರ್ಕಾರಿ ಗೌರವದೊಂದಿಗೆ ಸುಶೀಲ್‌ ಮೋದಿ ಅಂತ್ಯ ಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.