ನೆರೆ ನಿಂತ ಬಳಿಕ ಸಂತ್ರಸ್ತರಿಗೆ ಸೂರು


Team Udayavani, Aug 13, 2019, 3:00 AM IST

nere-ninta

ತಿ.ನರಸೀಪುರ: ನೆರೆ ಹಾವಳಿಯಿಂದ ಮನೆ, ಆಸ್ತಿ, ಬೆಳೆಗಳನ್ನು ಕಳೆದುಕೊಂಡು ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರನ್ನು ಭಾನುವಾರ ರಾತ್ರಿ ಭೇಟಿ ಮಾಡಿದ ವರುಣಾ ಶಾಸಕ ಡಾ.ಎಸ್‌.ಯತೀಂದ್ರ ಸಿದ್ದರಾಮಯ್ಯ ಅಹವಾಲು ಆಲಿಸಿ, ಸಾಂತ್ವನ ಹೇಳಿದರು.

ಪಟ್ಟಣದ ಹಳೇ ತಿರುಮಕೂಡಲಿಗೆ ತೆರಳಿ ನೆರೆ ಹಾವಳಿಯನ್ನು ವೀಕ್ಷಿಸಿದ ಶಾಸಕರು, ನಂತರ ಪುರಸಭೆ ಸಿಡಿಎಸ್‌ ಭವನದ ಪಕ್ಕದಲ್ಲಿನ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಕಲ್ಪಿಸಿರುವ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದರು. ನಂತರ ವಾಸ್ತವ್ಯವಿರುವ ಕೊಠಡಿಗಳಿಗೆ ತೆರಳಿ ಮಹಿಳೆಯರು ಮತ್ತು ಮಕ್ಕಳ ಯೋಗಕ್ಷೇಮ ವಿಚಾರಿಸಿದರು.

ವೇಳೆ ಶಾಸಕ ಡಾ.ಎಸ್‌.ಯತೀಂದ್ರ ಮಾತನಾಡಿ, ಪ್ರವಾಹದಿಂದ ಮನೆ, ಆಸ್ತಿ ಕಳೆದುಕೊಂಡಿರುವ ಸಂತ್ರಸ್ತರು ಯಾವುದೇ ಆತಂಕಪಡಬಾರದು. ನೆರೆ ನಿಂತ ಮೇಲೆ ಹಾಳಾದ ಮನೆಯ ಮರು ನಿರ್ಮಾಣಕ್ಕೆ ಸರ್ಕಾರದಿಂದ ನೆರವು ಕೊಡಿಸುತ್ತೇವೆ. ವಾಸದ ನಿವೇಶನ ಕಳೆದುಕೊಂಡರೆ ನಿವೇಶನವನ್ನೂ ಒದಗಿಸುತ್ತೇವೆ. ನಿರಾಶ್ರಿತರ ಕೇಂದ್ರವೆಂಬ ಭಾವನೆ ಬಿಟ್ಟು ನಿಶ್ಚಿತೆಯಿಂದ ಇರಬೇಕು ಎಂದು ಸಲಹೆ ನೀಡಿದರು.

ಶಾಸಕ ಎಂ.ಅಶ್ವಿ‌ನ್‌ ಭೇಟಿ: ಶಾಸಕ ಡಾ.ಎಸ್‌.ಯತೀಂದ್ರ ಭೇಟಿ ನೀಡಿದ ನಂತರ ತಿ.ನರಸೀಪುರ ಶಾಸಕ ಎಂ.ಅಶ್ವಿ‌ನ್‌ ಕುಮಾರ್‌ ಕೂಡ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನೆರೆ ಸಂತ್ರಸ್ತರಿಗೆ ಸಮರ್ಪಕವಾಗಿ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಇಂದಿರಾ ಕ್ಯಾಂಟೀನ್‌ ನಿಂದಲೇ ಆಹಾರ ಪೂರೈಸಬೇಕು. ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಪುರಸಭೆ ಸದಸ್ಯರಾದ ಟಿ.ಎಂ. ನಂಜುಂಡಸ್ವಾಮಿ, ಎನ್‌.ಸೋಮು, ಎಸ್‌.ಮದನ್‌ ರಾಜ್‌, ನಾಗರಾಜು, ಬಾದಾಮಿ ಮಂಜು, ಎಸ್‌.ಕೆ.ಕಿರಣ, ಮಾಜಿ ಸದಸ್ಯ ಮಲ್ಲೇಶ್‌ ನಾಯಕ, ಮುಖ್ಯಾಧಿಕಾರಿ ಅಶೋಕ, ನೋಡಲ್‌ ಅಧಿಕಾರಿ ಸೋಮಶೇಖರ್‌, ತಹಶೀಲ್ದಾರ್‌ ಪಿ.ಎನ್‌.ನಾಗಪ್ರಶಾಂತ್‌, ಕೃಷಿ ಸಹಾಯಕ ನಿರ್ದೇಶಕ ನಿಂಗಯ್ಯ, ಪುರಸಭೆ ಯೋಜನಾಧಿಕಾರಿ ಕೆಂಪರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಸ್ವಾಮಿ, ಮುಖಂಡರಾದ ಶಂಭುದೇವನಪುರ ರಮೇಶ್‌, ಅಮಾಸೆ ಎಂ.ಲಿಂಗರಾಜು, ಕೆ.ಅಶ್ವಿ‌ನ್‌, ಬೇವಿನಹಳ್ಳಿ ಸತೀಶ್‌ ಇತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.