ಪ್ರಾಮಾಣಿಕ ಕಾರ್ಯದಿಂದ ಪೊಲೀಸ್ ವರ್ಚಸ್ಸು ವೃದ್ಧಿಸುವುದು: ಗೃಹ ಸಚಿವ ಆರಗ ಜ್ಞಾನೇಂದ್ರ
Team Udayavani, Aug 28, 2021, 5:42 PM IST
ಮೈಸೂರು: ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಿದರೆ ಪೊಲೀಸ್ ಇಲಾಖೆಯ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಗೌರವ ಮತ್ತು ವರ್ಚಸ್ಸು ವೃದ್ಧಿಸುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ನಗರದಲ್ಲಿಂದು ಮೈಸೂರಿನ ಪೊಲೀಸ್ ಅಕಾಡಮಿಯಲ್ಲಿ ಪ್ರಶಿಕ್ಷಣ ಪಡೆಯುತ್ತಿರುವ ಸುಮಾರು 278 ಪ್ರೊಬೇಷನರಿ (ಸಿವಿಲ್) ಸಬ್ ಇನ್ಸ್ಪೆಕ್ಟರ್ ಗಳನ್ನು ಉದ್ದೇಶಿಸಿ ಮಾತನಾಡಿದರು.
ಪೊಲೀಸ್ ಅಧಿಕಾರಿಗಳು ತಮ್ಮ ಕರ್ತವ್ಯದಲ್ಲಿ ದಕ್ಷತೆಯನ್ನು ಮೆರೆದು ಸಮಾಜ ವಿರೋಧಿ ಶಕ್ತಿಗಳನ್ನು ಮಟ್ಟ ಹಾಕಲು ಶ್ರಮಿಸಬೇಕು ಎಂದು ಕರೆ ನೀಡಿದರು.
ಸಾವಿರಾರು ಮಂದಿಯ ತ್ಯಾಗ ಬಲಿದಾನಗಳಿಂದ ನಾವು ಸ್ವಾತಂತ್ರ್ಯ ಪಡೆದಿದ್ದು ಅವರು ಕಂಡ ಕನಸು ಗಳನ್ನ ಸಾಕಾರ ಗೊಳಿಸಬೇಕಾದ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಕಿವಿಮಾತು ಹೇಳಿದರು. ಸಾರ್ವಜನಿಕ ಸೇವೆಯಲ್ಲಿರುವ ತಾವುಗಳು ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಿದರೆ ಪೊಲೀಸ್ ಇಲಾಖೆಯ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಗೌರವ ಹಾಗೂ ವರ್ಚಸ್ಸು ಬೆಳೆಯಲು ಸಹಕಾರ ವಾಗಲಿದೆ., ಎಂದರು.
ನಿಮ್ಮಿಂದ ಜನರ ನೆಮ್ಮದಿಯ ಬದುಕಿಗೆ ಆಶ್ರಯ ನೀಡುವ ಕೆಲಸ ಆಗಬೇಕು.ಅಪರಾಧಿ ಜಗತ್ತಿನ ಜೊತೆಗೆ ಕೆಲವು ಪೊಲೀಸರು ಅಪ್ರತ್ಯಕ್ಷವಾಗಿ ಗುರುತಿಸಿಕೊಂಡ ಉದಾಹರಣೆಗಳು ಇದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ತಿಳಿ ಹೇಳಿದರು.
ಈ ವೇಳೆ ಪೊಲೀಸ್ ಅಕಾಡಮಿ ಯ ಮುಖ್ಯಸ್ಥರು, ಪ್ರಿನ್ಸಿಪಾಲರು ಹಾಗೂ ಇನ್ನಿತರ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ