ವರದಕ್ಷಿಣೆ ದಾಹಕ್ಕೆ ಗೃಹಿಣಿ ಬಲಿ: ಪತಿ ಸೇರಿ ಮೂವರ ಬಂಧನ


Team Udayavani, Aug 12, 2022, 8:11 PM IST

1-dsadad

ಹುಣಸೂರು: ವರದಕ್ಷಿಣೆ ದಾಹಕ್ಕೆ ಗೃಹಿಣಿಯೊಬ್ಬಳು ಬಲಿಯಾಗಿರುವ ಘಟನೆ ಹುಣಸೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನರಸಿಂಹಸ್ವಾಮಿ ತಿಟ್ಟಿನಲ್ಲಿ ನಡೆದಿದೆ.

ನರಸಿಂಹಸ್ವಾಮಿತಿಟ್ಟು ಬಡಾವಣೆಯ ಜಗದೀಶರ ಪತ್ನಿ ರಶ್ಮಿ(26)ಮೃತ ಮಹಿಳೆ. ಮೂರು ವರ್ಷ ಹಾಗೂ ಮೂರು ತಿಂಗಳ ಮಗು ಇದೆ.

ಮೃತ ರಶ್ಮಿಯ ತಂದೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರದ ಮಾರಿಮುತ್ತು ನಗರ ಪೊಲೀಸರಿಗೆ ದೂರು ನೀಡಿರುವ ಪ್ರಕಾರ ಕಳೆದ 5 ವರ್ಷಗಳ ಹಿಂದೆ ಜಗದೀಶನಿಗೆ 1 ಲಕ್ಷರೂ ಹಾಗೂ 100 ಗ್ರಾಂ. ಬಂಗಾರ ಜೊತೆಗೆ ಉಂಗುರ ನೀಡಿ ಅದ್ದೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು.

ಮದುವೆಯಾದ ವರ್ಷದ ನಂತರ ಮಗಳಿಗೆ ಹೆಚ್ಚಿನ ವರದಕ್ಷಿಣೆ ತರುವಂತೆ ಕಿರುಕುಳ ನೀಡಿ ಅನೇಕ ಬಾರಿ ತವರು ಮನೆಗೆ ಕಳುಹಿಸಿದ್ದರು. ಈ ಸಂಬಂಧ ವರ್ಷದ ಹಿಂದೆ ಬೆಟ್ಟದಪುರ ಠಾಣೆಯಲ್ಲಿ ಜಗದೀಶ್ ಹಾಗೂ ತಂದೆ-ತಾಯಿ, ಸಹೋದರಿ ವಿರುದ್ದ ದೂರು ನೀಡಲಾಗಿ ಗ್ರಾಮಸ್ಥರ ಸಮ್ಮುಖದಲ್ಲಿ ರಾಜಿ ತೀರ್ಮಾನ ಮಾಡಿ 50 ಸಾವಿರೂ ನೀಡಿ ತಿಳಿ ಹೇಳಿ ಮಗಳನ್ನು ಕಳುಹಿಸಿಕೊಟ್ಟಿದ್ದೆವು. ಆದರೂ ಅಳಿಯ ಜಗದೀಶ ತನ್ನ ಚಾಳಿ ಮುಂದುವರೆಸಿದ್ದಲ್ಲದೆ, ನಿಮ್ಮ ಮಗಳನ್ನು ಕರೆದೊಯ್ಯಿರಿ ನಾನು ಬೇರೆ ಮದುವೆಯಾಗುತ್ತೇನೆಂದು ಹೇಳಿದ್ದರಿಂದ ಮತ್ತೆ ಸಮಾದಾನಪಡಿಸಿ, ರಶ್ಮಿಯನ್ನು ಗಂಡನ ಮನೆಗೆ ಬಿಟ್ಟು ಬಂದಿದ್ದೆವು.

ವಾರದ ಹಿಂದೆ ಮಗಳು ಕರೆ ಮಾಡಿ ಅಳುತ್ತಾ ನನ್ನನ್ನು ಮನೆಗೆ ಕರೆದೊಯ್ಯಿರಿ, ಇಲ್ಲದಿದ್ದಲ್ಲಿ ಸಾಯಿಸಿ ಬಿಡುತ್ತಾರೆಂದು ದುಗುಡದಿಂದ ಹೇಳಿದ್ದಳು, ಮಗಳನ್ನು ಸಮಾಧಾನಿಸಿದ್ದೆವು. ಈ ನಡುವೆ ಆ.8 ರಂದು ಬಡಾವಣೆ ನಿವಾಸಿಯೊಬ್ಬರು ಕರೆ ಮಾಡಿ ನಿಮ್ಮ ಮಗಳು ಸಾವನ್ನಪ್ಪಿದ್ದಾಳೆಂಬ ಮಾಹಿತಿ ಮೇರೆಗೆ ಬಂದು ನೋಡಲಾಗಿ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರಿಂದ ಸಾವಿಗೀಡಾಗಿದ್ದಾಳೆಂದು ಕಂಡು ಬಂದಿದ್ದು, ರಶ್ಮಿ ಸಾವಿಗೆ ಪತಿ ಜಗದೀಶ, ಮಾವ ನಾಗರಾಜು, ಅತ್ತೆ ಲಕ್ಷ್ಮಮ್ಮ, ನಾದಿನಿ ನೇತ್ರಾ ಕಾರಣರಾಗಿದ್ದು, ಸೂಕ್ತ ಕ್ರಮ ಕೈಗೊಂಡು ನ್ಯಾಯ ದೊರಕಿಸಿಕೊಡುವಂತೆ ಪೊಲೀಸರಿಗೆ ದೂರು ನೀಡಿದ್ದ ಮೇರೆಗೆ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.