ಶುದ್ಧ ನೀರು ಸಿಗಲು ಇನ್ನೆಷ್ಟು ವರ್ಷ ಕಾಯಬೇಕು?


Team Udayavani, Mar 11, 2020, 3:00 AM IST

shudda-neeru

ನಂಜನಗೂಡು: ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತವಾಗಿ ವರ್ಷವಾದರೂ ಕ್ರಮ ಕೈಗೊಂಡಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಈ ಘಟಕವು ದುರಸ್ತಿ ಆಗುವ ಲಕ್ಷಣಗಳೂ ಕಂಡು ಬರುತ್ತಿಲ್ಲ. ಒಂದು ವರ್ಷದಿಂದ ಶುದ್ಧ ಕುಡಿಯುವ ನೀರಿನಿಂದ ವಂಚಿತರಾಗಿರುವ ಗ್ರಾಮಸ್ಥರು, ಇನ್ನೆಷ್ಟು ವರ್ಷ ಕಾಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ತಾಲೂಕಿನ ವರುಣಾ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಹೆಜ್ಜಿಗೆ ಗ್ರಾಮದಲ್ಲಿ ಶುದ್ಧ ನೀರಿನ ಘಟಕದ ದುಸ್ಥಿತಿ ಆಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಅಧಿಕಾರದ ಅವಧಿಯಲ್ಲಿ ಈ ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ಘಟಕಕ್ಕೆ 10 ಲಕ್ಷ ರೂ. ಮಂಜೂರು ಮಾಡಿದ್ದರು. ಘಟಕದ ಕಾಮಗಾರಿ ವಹಿಸಿಕೊಂಡಿದ್ದ ಕೆಆರ್‌ಡಿಸಿಎಲ್‌ ಸಂಸ್ಥೆ 2018ರ ಡಿಸೆಂಬರ್‌ನಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಈ ಘಟಕವನ್ನು ಲೋಕಾರ್ಪಣೆ ಮಾಡಿತ್ತು. ಇನ್ನೇನು ನಮ್ಮ ಮನೆಗಳಿಗೆ ಶುದ್ಧ ನೀರು ಬಂತು ಎಂದು ನಿಟ್ಟುಸಿರು ಬಿಟ್ಟಿದ್ದ ಗ್ರಾಮದ ಜನತೆಗೆ ಎರಡೇ ತಿಂಗಳಲ್ಲಿ ಅವರ ನಿರೀಕ್ಷೆ ಹುಸಿಯಾಗಿದೆ.

2 ತಿಂಗಳು ಮಾತ್ರ ನೀರು: 2018ರ ಡಿಸೆಂಬರ್‌ನಲ್ಲಿ ಘಟಕವನ್ನು ಲೋಕಾರ್ಪಣೆ ಮಾಡಲಾಗಿತ್ತು. 2019ರ ಫೆಬ್ರವರಿಯಲ್ಲಿ ಈ ಶುದ್ಧ ನೀರಿನ ಘಟಕ ಸ್ಥಗಿತಗೊಂಡಿದೆ. ಕೇವಲ ಎರಡು ತಿಂಗಳು ಮಾತ್ರ ಕಾರ್ಯನಿರ್ವಹಿಸಿದೆ. ದುರಸ್ತಿಪಡಿಸಲು ಯಾವ ಕ್ರಮವನ್ನೂ ಕೈಗೊಂಡಿಲ್ಲ. ಘಟಕ ಸ್ಥಗಿತವಾಗಿ ಒಂದು ವರ್ಷ ಕಳೆದರೂ ಯಾವ ಪ್ರಕ್ರಿಯೆಗಳೂ ಶುರುವಾಗಿಲ್ಲ.

ಇಂತಹ ದುಸ್ಥಿತಿಯನ್ನು ನೋಡಲು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿಬೇಕಿತ್ತೇ?, ಈ ರೀತಿ ಬೇಕಾಬಿಟ್ಟಿ ಕಾರ್ಯನಿರ್ವಹಣೆಗೆ 10 ಲಕ್ಷ ರೂ. ವ್ಯಯಿಸಬೇಕಿತ್ತಾ ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಸ್ಥಗಿತವಾಗಿರುವ ಈ ಘಟಕವನ್ನು ದುರಸ್ತಿ ಮಾಡಬೇಕಿದ್ದ ಕೆಆರ್‌ಡಿಸಿಎಲ್‌ ತನ್ನ ಕರ್ತವ್ಯ, ಜವಾಬ್ದಾರಿ ಮರೆತು ಮೌನವಹಿಸಿದೆ. ಯಾರೊಬ್ಬರೂ ಕೂಡ ಘಟಕ ದುರಸ್ತಿಗೆ ಕ್ರಮ ಕೈಗೊಂಡಿಲ್ಲ.

ಶುದ್ಧ ನೀರಿನ ಘಟಕವನ್ನು 2019ರ ಡಿಸೆಂಬರ್‌ನಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಗೆ ಹಸ್ತಾಂತರಿಸಿದ ಕೆಆರ್‌ಡಿಸಿಎಲ್‌, ಇದಕ್ಕೂ ತಮಗೂ ಸಂಬಂಧ ಇಲ್ಲ ಎಂದು ಕೈತೊಳೆದುಕೊಂಡಿದೆ. ಈ ಘಟಕವನ್ನು ಯಾರು ದುರಸ್ತಿಪಡಿಸಬೇಕು, ಯಾರು ಇದರ ನಿರ್ವಹಣೆ ಹೊರ ಬೇಕು ಎಂಬುದು ತಿಳಿಯದಂತಾಗಿದೆ. ಇಂದು ಇಲ್ಲವೇ ನಾಳೆ ಘಟಕ ದುರಸ್ತಿ ಆಗುತ್ತದೆ,

ಶುದ್ಧ ನೀರು ಸಿಗುತ್ತದೆ ಎಂದು ಗ್ರಾಮಸ್ಥರು ಚಾತಕಪಕ್ಷಿಗಳಂತೆ ಒಂದು ವರ್ಷ ಕಾದರೂ ಯಾವುದೇ ಪ್ರಕ್ರಿಯೆ ಶುರು ಆಗಿಲ್ಲ. ಈ ಅವ್ಯವಸ್ಥೆಯಿಂದ ಜನರು ರೋಸಿ ಹೋಗಿದ್ದು, ಕ್ಷೇತ್ರದ ಶಾಸಕರು ಹಾಗೂ ಅಧಿಕಾರಿಗಳು ಕ್ರಮ ಕೈಗೊಂಡು ಘಟಕ ದುರಸ್ತಿಪಡಿಸಿ, ಶುದ್ಧ ಕುಡಿಯುವ ನೀರು ಸರಬರಾಜು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಘಟಕಕ್ಕೆ ಕಾಂಪೌಂಡ್‌ ನಿರ್ಮಾಣ: ಹೆಜ್ಜಿಗೆ ಗ್ರಾಮದಲ್ಲಿ ಕೆಟ್ಟಿರುವ ಶುದ್ಧ ನೀರಿನ ಘಟಕ ಶೀಘ್ರ ದುರಸ್ತಿ ಆಗುವ ಆಶಾ ಭಾವನೆ ಇಟ್ಟುಕೊಂಡಿದ್ದೇವೆ. ಹೀಗಾಗಿ ಘಟಕಕ್ಕೆ ಒಂದು ಲಕ್ಷ ರೂ.ವೆಚ್ಚದಲ್ಲಿ ಕಾಂಪೌಂಡ್‌ ನಿರ್ಮಿಸಲಾಗುವುದು. ಲೋಕಾರ್ಪಣೆಗೊಂಡು 2 ತಿಂಗಳಲ್ಲೇ ಕೆಟ್ಟು ಹೋದ ಈ ಶುದ್ಧ ನೀರಿನ ಘಟಕದ ದುರಸ್ತಿಗೆ ಹಣವನ್ನು ಕೆಆರ್‌ಡಿಸಿಎಲ್‌ ಭರಿಸಬೇಕಿದೆ ಎಂದು ತಾಲೂಕು ಪಂಚಾಯ್ತಿ ಉಪಾಧ್ಯಕ್ಷ‌ ಗೋವಿಂದರಾಜು ತಿಳಿಸಿದ್ದಾರೆ.

ಘಟಕ ದುರಸ್ತಿಗೆ 4 ಲಕ್ಷ ರೂ.ಬೇಕು: ಹೆಜ್ಜಿಗೆ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿದ್ದು, ಈ ಘಟಕದ ದುರಸ್ತಿ ಕಾರ್ಯ ಪ್ರಾರಂಭಿಸಿದರೆ ಸುಮಾರು ನಾಲ್ಕು ಲಕ್ಷ ರೂ. ಬೇಕಾಗುತ್ತದೆ. ಸರ್ಕಾರದಿಂದ ಅನುದಾನ ಮಂಜೂರಾದ ಬಳಿಕ ದುರಸ್ತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ತಾಲೂಕು ಅಧಿಕಾರಿ ಚರಿತಾ ತಿಳಿಸಿದ್ದಾರೆ.

ಶಾಸಕರೇ, ಈ ಘಟಕ ದುರಸ್ತಿ ಯಾವಾಗ?: ಹೆಜ್ಜಿಗೆ ಗ್ರಾಮದಲ್ಲಿ ಶುದ್ಧ ಕುಡಿಯವ ನೀರಿನ ಘಟಕ ಸ್ಥಗಿತಗೊಂಡು ಬರೋಬ್ಬರಿ ಒಂದು ವರ್ಷ ಕಳೆದಿದೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 10 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿರುವ ಈ ಘಟಕವು ಕಾರ್ಯನಿರ್ವಹಿಸಿರುವುದು ಕೇವಲ ಎರಡು ತಿಂಗಳು ಮಾತ್ರ. ಲೋಕಾರ್ಪಣೆಗೊಂಡು ಎರಡು ತಿಂಗಳ ಅವಧಿಯಲ್ಲಿ ಕೆಟ್ಟು ಹೋಗಿದೆ.

ಗ್ರಾಮದ ಜನರು ಶುದ್ಧ ಕುಡಿಯುವ ನೀರಿಗಾಗಿ ಪರದಾಡಬೇಕಾಗಿದೆ. ಈ ಹೆಜ್ಜಿಗೆ ಗ್ರಾಮವು ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಒಳಪಡಲಿದೆ. ಡಾ| ಯತೀಂದ್ರ ಸಿದ್ದರಾಮಯ್ಯ ಈ ಕ್ಷೇತ್ರದ ಶಾಸಕರಾಗಿದ್ದು, ಗ್ರಾಮದಲ್ಲಿ ಅವ್ಯವಸ್ಥೆಯಿಂದ ಕೂಡಿರುವ ಶುದ್ಧ ನೀರಿನ ಘಟಕವನ್ನು ತ್ವರಿತವಾಗಿ ದುರಸ್ತಿಪಡಿಸಲು ಕ್ರಮ ಕೈಗೊಂಡು, ಶುದ್ಧ ನೀರು ಕಲ್ಪಿಸಬೇಕು ಎಂದು ಹೆಜ್ಜಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇಂತಹ ಅವ್ಯವಸ್ಥೆಗೆ ಘಟಕ ನಿರ್ಮಿಸಬೇಕಿತ್ತಾ?: ಹೆಜ್ಜಿಗೆ ಗ್ರಾಮದಲ್ಲಿ 10 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿದ್ದ ಶುದ್ಧ ನೀರಿನ ಘಟಕ ಕೇವಲ ಎರಡು ತಿಂಗಳು ಮಾತ್ರ ಕಾರ್ಯನಿರ್ವಹಿಸಿದೆ. ಘಟಕ ಪ್ರಾರಂಭಿಸುವಾಗ ಗ್ರಾಮಕ್ಕೆ ಶುದ್ಧ ನೀರು ಸಿಗುತ್ತದೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದೆವು. ಆದರೆ, ಈ ನಿರೀಕ್ಷೆ ಹುಸಿಯಾಗಿದೆ. ಘಟಕ ಕೆಟ್ಟು ವರ್ಷ ಕಳೆದರೂ ದುರಸ್ತಿಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಇಂದು ಇಲ್ಲವೇ ನಾಳೆ ಘಟಕ ದುರಸ್ತಿ ಆಗುತ್ತದೆ, ಶುದ್ಧ ನೀರು ಸಿಗುತ್ತದೆ ಎಂದು ಒಂದು ವರ್ಷ ಕಳೆದಿದ್ದೇವೆ. ಇಂತಹ ಅವ್ಯವಸ್ಥೆಗೆ ಘಟಕವನ್ನಾದರೂ ಏಕೆ ನಿರ್ಮಿಸಬೇಕಿತ್ತು?, ಹೆಸರಿಗಷ್ಟೇ ಗ್ರಾಮದಲ್ಲಿ ಘಟಕ ಇದೆ. ಅದರೆ, ಶುದ್ಧ ಕುಡಿಯುವ ನೀರು ಮಾತ್ರ ಸಿಗುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

* ಶ್ರೀಧರ್‌ ಆರ್‌.ಭಟ್‌

ಟಾಪ್ ನ್ಯೂಸ್

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.