ನಾಗರಹೊಳೆ ಹೆಬ್ಟಾಗಿಲಲ್ಲಿ ಅದ್ಧೂರಿ ಗಜಪಯಣ


Team Udayavani, Aug 13, 2017, 11:41 AM IST

mys2.jpg

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ, ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆಗಳ ಮೊದಲ ತಂಡದ ಎಂಟು ಆನೆಗಳ ಪೈಕಿ ಆರು ಆನೆಗಳನ್ನು ಗಜಪಯಣದ ಮೂಲಕ ಅದ್ಧೂರಿಯಾಗಿ ಮೈಸೂರಿಗೆ ಕಳುಹಿಸಿಕೊಳ್ಳಲಾಯಿತು.

ಜಂಬೂಸವಾರಿಯಲ್ಲಿ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಸಾಗುವ ಅರ್ಜುನ ನೇತೃತ್ವದಲ್ಲಿ ಬಲರಾಮ, ಅಭಿಮನ್ಯು, ಕಾವೇರಿ, ವಿಜಯ ಹಾಗೂ ವರಲಕ್ಷ್ಮೀ ಆನೆಗಳು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಟಾಗಿಲು ನಾಗಾಪುರ ಗಿರಿಜನ ಪುನರ್‌ವಸತಿ ಕೇಂದ್ರದಲ್ಲಿ ಶನಿವಾರ ನಡೆದ ಗಜಪಯಣ ಕಾರ್ಯಕ್ರಮದ ನಂತರ ಮೈಸೂರು ತಲುಪಿದರೆ, ಗಜೇಂದ್ರ ಕೆ.ಗುಡಿ ಆನೆ ಶಿಬಿರದಿಂದ ಹಾಗೂ ಭೀಮ ಮತ್ತಿಗೋಡು (ತಿತಿಮತಿ) ಆನೆ ಶಿಬಿರದಿಂದ ನೇರವಾಗಿ ಮೈಸೂರಿಗೆ ಲಾರಿಯ ಮೂಲಕ ಕರೆತರಲಾಯಿತು.

ಇಲವಾಲದ ಅಲೋಕದಲ್ಲಿ ಬೀಡುಬಿಟ್ಟಿರುವ ಎಂಟು ಆನೆಗಳ ದಸರಾ ಗಜಪಡೆಯ ಮೊದಲ ತಂಡದ ಆನೆಗಳು ಆ.17ರಂದು ಬೆಳಗ್ಗೆ 11 ಗಂಟೆಗೆ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ, ಜಯಮಾರ್ತಾಂಡ ದ್ವಾರದ ಮೂಲಕ ಅರಮನೆ ಆವರಣ ಪ್ರವೇಶಿಸಲಿವೆ.

ಹಬ್ಬದ ವಾತಾವರಣ: ಗಜಪಯಣದ ಹಿನ್ನೆಲೆಯಲ್ಲಿ ಮೂರ್ಕಲ್‌ನಲ್ಲಿ ಶುಕ್ರವಾರದಿಂದಲೇ ಹಬ್ಬದ ವಾತಾವರಣ ಮನೆಮಾಡಿತ್ತು. ಮೊದಲ ತಂಡದಲ್ಲಿ ಹೊರಡುವ ಆನೆಗಳು ಮಾವುತರು- ಕಾವಾಡಿಗಳ ಕುಟುಂಬದವರು ಮೈಸೂರಿಗೆ ಹೊರಡಲು ಸಿದ್ಧತೆ ನಡೆಸಿದ್ದರೆ, ಮಾವುತರು-ಕಾವಾಡಿಗಳು ತಮ್ಮ ಆನೆಗಳ ಬಗ್ಗೆ ವಿಶೇಷ ಮುತುವರ್ಜಿವಹಿಸಿದ್ದರು.

ಶನಿವಾರ ಬೆಳಗ್ಗೆಯೇ ಗಜಪಯಣ ಆರಂಭಕ್ಕೂ ಮುನ್ನ ಮೂರ್ಕಲ್‌ ಕೆರೆಯಲ್ಲಿ ಆನೆಗಳನ್ನು ತೊಳೆದು ಸಿಂಗರಿಸಿ, ಆನೆಗಳ ಮಾವುತರು-ಕಾವಾಡಿಗಳೂ ಸಹ ಸ್ನಾನ ಮಾಡಿಕೊಂಡು ಸಿದ್ಧರಾಗಿ ಮೂರ್ಕಲ್‌ನ ಗಣಪತಿ ದೇವಸ್ಥಾನದಲ್ಲಿ ವಾಡಿಕೆಯಂತೆ ಪೂಜೆಸಲ್ಲಿಸಿ ಆನೆಗಳನ್ನು ನಾಗಾಪುರ ಗಿರಿಜನ ಪುನರ್‌ವಸತಿ ಕೇಂದ್ರಕ್ಕೆ ಕರೆತಂದರು.

ನಾಗರಹೊಳೆ ಹೆದ್ದಾರಿಯಲ್ಲಿ ಅಲಂಕೃತ ಆನೆಗಳನ್ನು ಸಾಲಾಗಿ ನಿಲ್ಲಿಸಿ ಆನೆಗಳ ಪಾದ ತೊಳೆದು, ಅರಿಶಿಣ-ಕುಂಕುಮ ಹಚ್ಚಿ, ಸುಗಂಧ ದ್ರವ್ಯಗಳನ್ನು ಚಿಮುಕಿಸಿ, ಗರಿಕೆ ಗಣಪತಿ ಇರಿಸಿ ಪೂಜೆ ಸಲ್ಲಿಸಲಾಯಿತು. ಶನಿವಾರ ಬೆಳಗ್ಗೆ 10.35ರಿಂದ ಆರಂಭವಾದ ಪಂಚಮಿತಿಥಿ- ತುಲಾಲಗ್ನದಲ್ಲಿ ಮೈಸೂರಿನ ಅರ್ಚಕ ಎಸ್‌.ವಿ.ಪ್ರಹ್ಲಾದರಾವ್‌ ನೇತೃತ್ವದಲ್ಲಿ ವೇದ ಘೋಷಗಳೊಂದಿಗೆ ಹುಲಿ ಯೋಜನೆ ಕ್ಷೇತ್ರ ನಿರ್ದೇಶಕ ಸಿ.ಜಯರಾಮ್‌, ಮೈಸೂರು ವೃತ್ತದ ಮುಖ್ಯ ಅರಣ್ಯಸಂರಕ್ಷಣಾಧಿಕಾರಿ ಪಿ.ಬಿ.ಕರುಣಾಕರ,

ದಸರಾ ವಿಶೇಷಾಧಿಕಾರಿಗಳಾದ ಜಿಲ್ಲಾಧಿಕಾರಿ ಡಿ.ರಂದೀಪ್‌, ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಏಡುಕೊಂಡಲು ಇತರರ ಸಮ್ಮುಖದಲ್ಲಿ ಮೊದಲಿಗೆ ಗಣಪತಿ ಪೂಜೆ, ವನದೇವಿಗೆ ಪ್ರಾರ್ಥನೆ, ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಲಾಯಿತು. ನಂತರ ಆನೆಗಳಿಗೆ ಬೆಲ್ಲ, ಕಬ್ಬು, ಬಾಳೆಹಣ್ಣು, ಚಕ್ಕುಲಿ, ಕೋಡುಬಳೆ, ಮೋದಕ, ಕಡುಬು, ತೆಂಗಿನ ಕಾಯಿಗಳ ನೈವೇದ್ಯ ಸಲ್ಲಿಸಿ, ಸಂತುಷ್ಟಗೊಳಿಸಿ ನಾಡಿಗೆ ಒಳ್ಳೆಯ ಮಳೆಯಾಗಿ- ಒಳ್ಳೆ ಬೆಳೆಬರಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.

ವಿದ್ಯುಕ್ತ ಚಾಲನೆ: ಬೆಳಗ್ಗೆ 11.20ರ ವೇಳೆಗೆ ನಾಗಾಪುರಕ್ಕೆ ಆಗಮಿಸಿದ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ದಸರಾ ಆನೆಗಳಿಗೆ ಪುಷ್ಪಾರ್ಚನೆ ಮಾಡಿ, ಜ್ಯೋತಿ ಬೆಳಗುವ ಮೂಲಕ ಗಜಪಯಣಕ್ಕೆ ವಿದ್ಯುಕ್ತ ಚಾಲನೆ ನೀಡಿದರು.

ಈ ವೇಳೆ ಹುಣಸೂರು ಶಾಸಕ ಎಚ್‌.ಪಿ.ಮಂಜುನಾಥ್‌, ಮೈಸೂರು ಮಹಾ ನಗರಪಾಲಿಕೆ ಮೇಯರ್‌ ಎಂ.ಜೆ.ರವಿಕುಮಾರ್‌, ಜಿಪಂ ಅಧ್ಯಕ್ಷೆ ನಯಿಮಾ ಸುಲ್ತಾನ, ಹುಣಸೂರು ನಗರಸಭೆ ಅಧ್ಯಕ್ಷ ಲಕ್ಷ್ಮಣ, ಜಿಪಂ ಸದಸ್ಯ ಅನಿಲ್‌ ಕುಮಾರ್‌, ಜಿಪಂ ಸದಸ್ಯರಾದ ಜಯಲಕ್ಷ್ಮೀ ಸಿ.ಟಿ.ರಾಜಣ್ಣ, ಡಾ.ಪುಷ್ಪಾ ಅಮರನಾಥ್‌, ನಿಗಮ-ಮಂಡಳಿ ಅಧ್ಯಕ್ಷರುಗಳಾದ ಬಿ.ಸಿದ್ದರಾಜು, ಡಿ.ಧ್ರುವಕುಮಾರ್‌, ಮಲ್ಲಿಗೆವೀರೇಶ್‌, ಜಿ.ವಿ.ಸೀತಾರಾಂ, ಜಿಪಂ ಸಿಇಒ ಪಿ.ಶಿವಶಂಕರ್‌ ಇತರರು  ಹಾಜರಿದ್ದರು.

ಟಾಪ್ ನ್ಯೂಸ್

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

6-hunsur’

Hunsur: ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತ ಆತ್ಮಹತ್ಯೆಗೆ ಶರಣು

Renukaswamy Case: ದರ್ಶನ್‌ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!

Renukaswamy Case: ದರ್ಶನ್‌ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!

Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ

Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ

Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆ‌ಬರ ಪತ್ತೆ

Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆ‌ಬರ ಪತ್ತೆ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

1-ssdad

ಅನುಚಿತ ವರ್ತನೆ‌ ; ಜೆಸ್ಕಾಂ ಗುತ್ತಿಗೆದಾರನಿಗೆ‌ ಚಪ್ಪಲಿಯಿಂದ ಹೊಡೆದ ಮಹಿಳೆ

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.