ಹುಣಸೂರು : ಜಾನುವಾರುಗಳಿಗೆ ನೀರು ಕುಡಿಸುವ ವೇಳೆ ಕೆರೆಗೆ ಬಿದ್ದು ಮಹಿಳೆ ಸಾವು
Team Udayavani, May 29, 2022, 10:56 PM IST
ಹುಣಸೂರು : ಜಾನುವಾರುಗಳಿಗೆ ನೀರು ಕುಡಿಸುವ ವೇಳೆ ಕಾಲು ಜಾರಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಎಂ.ಆರ್.ಹೊಸಹಳ್ಳಿಯಲ್ಲಿ ಜರುಗಿದೆ.
ತಾಲೂಕಿನ ಹನಗೋಡು ಹೋಬಳಿಯ ಎಂ.ಆರ್.ಹೊಸಹಳ್ಳಿಯ ರೈತ ಮಂಚನಾಯಕರ ಪತ್ನಿ ರತ್ನಮ್ಮ(50) ಮೃತಪಟ್ಟಾಕೆ.
ಎಂದಿನಂತೆ ಹಸುಗಳನ್ನು ಮೇಯಿಸಿದ ನಂತರ ನೀರು ಕುಡಿಸಲು ಕೆರೆ ಬಳಿಗೆ ಹಸುಗಳನ್ನು ಕರೆದೊಯ್ದ ವೇಳೆ ಹಸುಗಳು ಕೆರೆಯೊಳಕ್ಕೆ ಇಳಿದು ರತ್ನಮ್ಮರನ್ನು ಎಳೆದಿದೆ. ಹಗ್ಗ ಹಿಡಿದಿದ್ದ ರತ್ನಮ್ಮನವರು ಆಯತಪ್ಪಿ ಕಾಲು ಜಾರಿ ಬಿದ್ದಿದ್ದಾರೆ. ಇತ್ತೀಚೆಗೆ ಬಿದ್ದ ಮಳೆಯಿಂದ ಕೆರೆ ಭರ್ತಿಯಾಗಿದ್ದು, ಕೆರೆ ಬಳಿ ಯಾರೂ ಇಲ್ಲದ್ದರಿಂದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆಂದು ಪತಿ ಮಂಚನಾಯಕ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದು, ಇನ್ಸ್ಪೆಕ್ಟರ್ ಚಿಕ್ಕಸ್ವಾಮಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹುಣಸೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆನಂತರ ಶವವನ್ನು ವಾರಸುದಾರಿಗೆ ಒಪ್ಪಿಸಲಾಯಿತು.
ಇದನ್ನೂ ಓದಿ : ನಾಲ್ಕನೇ ಅಲೆ ಭೀತಿ: ರಾಜ್ಯದಲ್ಲಿಂದು 241 ಮಂದಿಗೆ ಕೋವಿಡ್ ಸೋಂಕು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ