ಮಳೆ ಅವಾಂತರಕ್ಕೆ 10ಕ್ಕೂ ಮನೆಗಳಿಗೆ ಹಾನಿ, ಸಿಡಿಲಿಗೆ ತೆಂಗಿನ ಮರ ಭಸ್ಮ
Team Udayavani, Apr 15, 2022, 10:12 PM IST
ಹುಣಸೂರು : ಹುಣಸೂರು ತಾಲೂಕಿನಲ್ಲಿ ಬಿರುಗಾಳಿ ಗುಡುಗು ಸಹಿತ ಭಾರಿ ಮಳೆಗೆ ಗಾವಡಗೆರೆ ಭಾಗದಲ್ಲಿ 10 ಮನೆಗಳಿಗೆ ಹಾನಿಯಾಗಿದ್ದರೆ, ಚಿಲ್ಕುಂದದಲ್ಲಿ ಸಿಡಿಲು ಬಡಿದು ತೆಂಗಿನಮರ ಭಸ್ಮವಾಗಿದೆ.
ಚಿಲ್ಕುಂದ ಗ್ರಾಮದ ಗುರುನಾಥ್ ರವರಿಗೆ ಸೇರಿದ ತೆಂಗಿನಮರಕ್ಕೆ ಸಿಡಿಲು ಬಡಿದು ಸುಟ್ಟು ಭಸ್ಮವಾಗಿದ್ದರೆ, ಗಾವಡಗೆರೆ ಹೋಬಳಿಯ ಕಳ್ಳಿ ಕೊಪ್ಪಲು ಗ್ರಾಮ ಒಂದರಲ್ಲೇ 10ಕ್ಕೂ ಹೆಚ್ಚು ಮನೆಗಳ ಮೇಲ್ಚಾವಣಿಗೆ ಹಾನಿಯಾಗಿದ್ದು, ಇಡೀ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಮಳೆನೀರಿಗೆ ಮನೆಯೊಳಗಿದ್ದ ದವಸ ಧಾನ್ಯಗಳು ತೋಯ್ದುಹೋಗಿದೆ, ಸ್ಥಳಕ್ಕೆ ಆರ್.ಐ. ಅಜ್ಮಲ್, ಹಾಗೂ ಕಂದಾಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಳ್ಳಿಕೊಪ್ಪಲು ಗ್ರಾಮದ ಕೃಷ್ಣೇಗೌಡ, ರಾಮಸ್ವಾಮಿಗೌಡ, ಕಾಮಾಕ್ಷಮ್ಮ, ಮರಿಮಲೇಗೌಡ, ಕುಸುಮಾಲಮ್ಮ, ನಾಗರಾಜೇಗೌಡ, ಪುಟ್ಟರಾಜೇಗೌಡ, ಗಿಡ್ಡೇಗೌಡ, ಲಕ್ಕೇಗೌಡ, ಸೇರಿದಂತೆ 10ಕ್ಕೂ ಹೆಚ್ಚು ಮನೆಯ ಮೇಲ್ಚಾವಣಿ ಹಾನಿಯಾಗಿದ್ದು ಕಂದಾಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆಂದು ತಾಹಸಿಲ್ದಾರ್ ಡಾ.ಅಶೋಕ್ ತಿಳಿಸಿದ್ದಾರೆ.
ಇದನ್ನೂ ಓದಿ : ಲಂಡನ್: ಭಾರತೀಯ ಮೂಲದ ವೈದ್ಯನಿಂದ 48 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ