ಹುಣಸೂರು: ಕೊಡಗಿನಿಂದ ಅಕ್ರಮ ಮದ್ಯಸಾಗಾಟ; ಓರ್ವನ ಬಂಧನ, 155 ಲೀ ಮದ್ಯ, ಕಾರು ವಶ
ಹುಣಸೂರು ಅಬಕಾರಿ ಡಿವೈಎಸ್ಪಿ ಶ್ರೀನಿವಾಸ್ ನೇತೃತ್ವದಲ್ಲಿ ಕಾರ್ಯಾಚರಣೆ
Team Udayavani, May 29, 2021, 9:50 AM IST
ಹುಣಸೂರು: ಕೊಡಗಿನ ಕಡೆಯಿಂದ ಕಾರಿನಲ್ಲಿ ಅಕ್ರಮ ಮದ್ಯ ಸಾಗಿಸುತ್ತಿದ್ದುದನ್ನು ಪತ್ತೆ ಹಚ್ಚಿದ ಅಬಕಾರಿ ಅಧಿಕಾರಿಗಳ ತಂಡವು 155 ಲೀ.ಮದ್ಯ ಸಹಿತ ಕಾರನ್ನು ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಹುಣಸೂರು ಅಬಕಾರಿ ಡಿವೈಎಸ್ಪಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ಆನೆವಾಳು ಗ್ರಾಮದ ಲಕ್ಷ್ಮಣೇಗೌಡರ ಪುತ್ರ ಎ.ಎಲ್.ರಾಜೇಶ್ ಬಂಧಿತ ಆರೋಪಿ. ಕಾರಿನಲ್ಲಿದ್ದ 155.520ಲೀ ಒರಜಿನಲ್ ಚಾಯ್ಸ್ ಡಿಲಕ್ಸ್ ವಿಸ್ಕಿಯನ್ನು ವಶಕ್ಕೆ ಪಡೆಯಲಾಗಿದೆ.
ಕೋವಿಡ್-19 ಸಮಯದಲ್ಲಿ ಈತ ಹುಂಡೈ ಕಾರಿನಲ್ಲಿ ಅಕ್ರಮ ಮದ್ಯ ಸಾಗಾಣೆ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ. ಪಿರಿಯಾಪಟ್ಟಣ ತಾಲೂಕಿನ ಹಾರೋಹಳ್ಳಿ ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪ ಡಿವೈಎಸ್ಪಿ ಕೆ.ಶ್ರೀನಿವಾಸ್ ನೇತೃತ್ವದ ತಂಡವು ಕಾರನ್ನು ಅಡ್ಡಗಟ್ಟಿ ಪರಿಶೀಲಿಸಿದಾಗ ಅಕ್ರಮ ಮದ್ಯ ಸಾಗಣೆ ಕಂಡುಬಂದಿದ್ದು. ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕಿ ಸುಧಾರಾಣಿ, ಪೇದೆಗಳಾದ ರಾಘವೇಂದ್ರ, ಮೋಹನ್, ಚಾಲಕ ರಾಮಚಂದ್ರ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ