ಹುಣಸೂರು: ಭಾರೀ ಮಳೆಗೆ ಬೆಳೆ ಹಾನಿ
Team Udayavani, Sep 25, 2018, 11:12 AM IST
ಹುಣಸೂರು: ತಾಲೂಕಿನಾದ್ಯಂತ ಭಾನುವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಸಾಕಷ್ಟು ಬೆಳೆ ಹಾನಿಯಾಗಿದೆ. ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಧಾರಾಕಾರ ಮಳೆಯಾಗಿದೆ. ಬಿಸಿಲಿನಿಂದ ಬಳಲುತ್ತಿದ್ದ ಇಳೆ ತಂಪಾಗಿದೆ.
ಸೋಮವಾರ ಮುಂಜಾನೆ ಸುರಿದ ಎಡೆಬಿಡದ ಮಳೆಯಿಂದಾಗಿ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹೋಗಲು ಪರದಾಡುವಂತಾಯಿತು. ಹನಗೋಡು ಹಾಗೂ ಚಿಲ್ಕುಂದದಲ್ಲಿ 45, ಹುಣಸೂರು ನಗರ ಹಾಗೂ ಬಿಳಿಕೆರೆಯಲ್ಲಿ ತಲಾ 21 ಮಿಲಿ ಮೀಟರ್ ಮಳೆಯಾಗಿದೆ ಎಂದು ತಹಶೀಲ್ದಾರ್ ಮೋಹನ್ ತಿಳಿಸಿದ್ದಾರೆ.
ಕಬ್ಬು ನಾಶ: ಬಿಳಿಕೆರೆ ಹೋಬಳಿಯ ಅಸ್ವಾಳು ಗ್ರಾಮದ ಜಯಮ್ಮ ಅವರು ಎರಡು ಎಕರೆ ಹಾಗೂ ರಮೇಶ ಅವರಿಗೆ ಸೇರಿದ ಮೂರು ಎಕರೆ ಕಬ್ಬಿನ ಬೆಳೆ ಸಂಪೂರ್ಣ ನೆಲಕಚ್ಚಿದ್ದು, ಸುಮಾರು 4 ಲಕ್ಷ ರೂ. ನಷ್ಟ ಸಂಭವಿಸಿದೆ. ವಿವಿಧೆಡೆ ಬಾಳೆ ಬೆಳೆಗೂ ಹಾನಿಯಾಗಿದೆ. ಹೊಲಗಳಲ್ಲಿ ನೀರು ನಿಂತಿದ್ದು, ಕೆರೆ-ಕಟ್ಟೆಗಳಿಗೆ ನೀರು ಹರಿದು ಬಂದಿದೆ.
ಭಾನುವಾರ ರಾತ್ರಿಯಿಂದಲೇ ಶುರುವಾದ ಮಳೆ ಸೋಮವಾರ ಬೆಳಗ್ಗೆ 10 ವರೆಗೂ ಸುರಿಯಿತು. ಹನಗೋಡು ಭಾಗದಲ್ಲಿ ಸಹ ಭಾರೀ ಮಳೆಯಾಗಿದ್ದು, ಶುಂಠಿ ಬೆಳೆ ಸೇರಿದಂತೆ ಮುಸುಕಿನ ಜೋಳ ಬೆಳೆ ಕಟಾವಿಗೆ ತೊಡಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ