ಕುಡಿದ ಮತ್ತಿನಲ್ಲಿ ಮನೆಗೆ ಬಂದಿದ್ದ ಸಂಬಂಧಿಯನ್ನೇ ಚಾಕುವಿನಿಂದ ಇರಿದು ಕೊಲೆಗೈದ…
Team Udayavani, Jul 18, 2022, 3:28 PM IST
ಹುಣಸೂರು : ಕ್ಲುಲ್ಲಕ ಕಾರಣಕ್ಕೆ ಜಗಳವಾಡಿಕೊಂಡು ಮನೆಗೆ ಬಂದಿದ್ದ ಸಂಬಂಧಿಯನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ತಾಲೂಕಿನ ರಾಮನಹಳ್ಳಿಯಲ್ಲಿ ನಡೆದಿದೆ.
ಹುಣಸೂರು ತಾಲೂಕಿನ ರಾಮನಹಳ್ಳಿ ನಿವಾಸಿ ಸಿದ್ದನಾಯಕರ ಪುತ್ರ ಶೇಖರ್( 33)ಸಾವನ್ನಪ್ಪಿದ ದುರ್ದೈವಿ.
ಶೇಖರ್ ಜು.15 ರ ಸಂಜೆ ಇದೇ ಗ್ರಾಮದ ಕುಳ್ಳ ಸಿದ್ದನಾಯಕರ ಪುತ್ರ ಸಿದ್ದನಾಯಕನನ್ನು ಮಾತನಾಡಿಸಲು ಆತನ ಮನೆಗೆ ತೆರಳಿದ್ದ. ಮಾತನಾಡುವ ನಡುವೆ ಯಾವುದೋ ಕ್ಷುಲ್ಲಕ್ಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು, ಇಬ್ಬರ ನಡುವೆ ಗಲಾಟೆ ನಡೆದಿದೆ ಈ ವೇಳೆ ಶೇಖರನಿಗೆ ಸಿದ್ದ ನಾಯಕ ಚಾಕುವಿನಿಂದ ಇರಿದು ತೀವ್ರವಾಗಿ ಗಾಯಗೊಳಿಸಿದ್ದ.
ಗಾಯಾಳು ಶೇಖರ್ ನನ್ನು ಮೈಸೂರಿನ ಕೆ.ವಿ.ಸಿ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂಬಂಧ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಜು.18ರ ಸೋಮವಾರ ಬೆಳಗ್ಗೆ ಶೇಖರ್ ಸಾವನ್ನಪ್ಪಿದ್ದಾನೆ. ಘಟನೆ ಕುರಿತು ಪೊಲೀಸರು ಸಿದ್ದನಾಯಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಿಎಂ ಸ್ಟಾಲಿನ್: ಮತ ಚಲಾವಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ