ಹುಣಸೂರು : ಕೊಲೆ ಪಾತಕಿಗಳ ಹೆಡೆಮುರಿ ಕಟ್ಟಿದ ಹುಣಸೂರು ಟೌನ್ ಪೊಲೀಸರು


Team Udayavani, Jul 19, 2022, 9:45 PM IST

ಹುಣಸೂರು : ಕೊಲೆ ಪಾತಕಿಗಳ ಹೆಡೆಮುರಿ ಕಟ್ಟಿದ ಹುಣಸೂರು ಟೌನ್ ಪೊಲೀಸರು

ಹುಣಸೂರು : ನಗರದಲ್ಲಿ ಹಾಡುಹಗಲೇ ನಡೆದಿದ್ದ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ನಗರ ಠಾಣೆ ಪೊಲೀಸರ ತಂಡ ಯಶಸ್ವಿಯಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

ಹುಣಸೂರು ನಗರದ ಮದರ ಬ್ಲಾಕ್ ಬಳಿಯ ಜನತಾಹೌಸಿಂಗ್ ಬೋರ್ಡ್ ಕಾಲೋನಿಯ ನಿತಿನ್ ಅಲಿಯಾಸ್ ವಠಾರ(23), ಕಲ್ಕುಣಿಕೆಯ ಮನೋಜ್ ಕುಮಾರ್ ಅಲಿಯಾಸ್ ಮೋಟು (24) ಹಾಗೂ ಪೋತರಾಜ್ (25) ಬಂಧಿತರು.

ಘಟನೆ ಹಿನ್ನೆಲೆ : ಇತ್ತೀಚೆಗೆ ಮದುವೆಯಾಗಿದ್ದ ತನ್ನ ಹೆಂಡತಿಯ ಬಗ್ಗೆ ಹುಣಸೂರು ತಾಲೂಕಿನ ಅಂಗಟಹಳ್ಳಿ ಗ್ರಾಮದ ಬೀರೇಶ ಎಂಬುವನು ತನ್ನ ಮೊಬೈಲ್ ಇನ್ಸಾಗ್ರಾಮ್ ನಲ್ಲಿ ಕೆಟ್ಟದಾಗಿ ಕಾಮೆಂಟ್ಸ್ ಮಾಡುತ್ತಿದ್ದನೆಂಬ ಕಾರಣಕ್ಕೆ ನಗರದ ಗೋಕುಲ ರಸ್ತೆಯ ಕುಟ್ಟಿ ಜಿಮ್‌ನಲ್ಲಿ ಕೆಲಸ ಮಾಡುತ್ತಿದ್ದ ನಿತಿನ್ ಅಲಿಯಾಸ್ ವಠಾರ ಎಂಬಾತ ಜು. 12 ರ ಮಂಗಳವಾರ ಮಧ್ಯಾಹ್ನ 2ರ ವೇಳೆಯಲ್ಲಿ ತನ್ನ ಸ್ನೇಹಿತ ಕಲ್ಕುಣಿಕೆ ಹೌಸಿಂಗ್ ಬೋರ್ಡ್ ವಾಸಿ ಮನೋಜ್ ಕುಮಾರ (ಮೋಟು) ಹಾಗೂ ಇನ್ನೊಬ್ಬ ಸ್ನೇಹಿತ ಪೋತರಾಜ್ ಎಂಬುವನ ಹೋಂಡಾ ಆಕ್ಟಿವಾ ಮೋಟಾರ್ ಬೈಕಿನಲ್ಲಿ ಮಾತನಾಡಿಸುವ ನೆಪದಲ್ಲಿ ಬಸ್ ನಿಲ್ದಾಣದ ಬಳಿ ನಿಂತಿದ್ದ ಬೀರೇಶನನ್ನು ದ್ವಿಚಕ್ರ ವಾಹನದ ಮಧ್ಯ ಕೂರಿಸಿಕೊಂಡು ಬೈಪಾಸ್ ರಸ್ತೆಯಲ್ಲಿ ಹೊಗುವಾಗ ನಿತಿನ್ ಬೀರೇಶನಿಗೆ ಹಾಡುಹಗಲೇ ಚಾಕುವಿನಿಂದ ಬೀರೇಶನ ಭುಜ, ಕುತ್ತಿಗೆಗೆ ಬಲವಾಗಿ ಚುಚ್ಚಿ ಗಾಯಗೊಳಿಸಿ ಪರಾರಿಯಾಗಿದ್ದರು. ಸಾರ್ವಜನಿಕರು ಬೀರೇಶನನ್ನು ಹುಣಸೂರಿನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಬೀರೇಶ ಸಾವನ್ನಪ್ಪಿದ್ದ, ಈ ಸಂಬಂಧ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ : ಮದರಸಾಗಳಿಗಾಗಿ ಪ್ರತ್ಯೇಕ ಪಠ್ಯಕ್ರಮ ಚಿಂತನೆ ಸದ್ಯಕ್ಕಿಲ್ಲ: ಸಚಿವ ಬಿ.ಸಿ.ನಾಗೇಶ್‌

ತಂಡ ರಚನೆ : ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್.ಪಿ. ಆರ್.ಚೇತನ್ ಮಾರ್ಗದರ್ಶನದಲ್ಲಿ ಹುಣಸೂರು ಉಪ-ವಿಭಾಗದ ಡಿವೈಎಸ್ಪಿ ರವಿಪ್ರಸಾದ್, ಹುಣಸೂರು ನಗರ ಠಾಣೆಯ ಇನ್ಸೆಕ್ಟರ್ ಎಲ್.ಶ್ರೀನಿವಾಸ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಕೃತ್ಯ ನಡೆದ ದಿನದಂದೇ ಕಾರ್ಯಾಚರಣೆಗಿಳಿದ ತಂಡವು ನಿತಿನ್ ಹಾಗೂ ಮನೋಜ್ ಕುಮಾರನ್ನು ಬೆಂಗಳೂರಿನ ಕೋರಮಂಗಲದಲ್ಲೂ, ಪೂತರಾಜ್ ನನ್ನು ಹಾಸನ ಜಿಲ್ಲೆಯ ಹೊಳೆನರಸೀಪುರದ ದಿಡ್ಡಹಳ್ಳಿಯಲ್ಲಿರುವ ಬಗ್ಗೆ ಮೊಬೈಲ್ ಟವರ್ ಲೊಕೇಶನ್ ಪಡೆದು ಆರೋಪಿಗಳನ್ನು ಹೆಡೆಮುರಿಕಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶ್ಲಾಘನೆ : ಕೊಲೆ ಪಾತಕಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ತಂಡವನ್ನು ಎಸ್.ಪಿ, ಆರ್.ಚೇತನ್ ಚೇತನ್. ಅಪರ ಪೊಲೀಸ್ ವರಿಷ್ಟಾಧಿಕಾರಿ ನಂದಿನಿ ಶ್ಲಾಘಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಅಪರಾಧ ವಿಭಾಗದ ಸಿಬ್ಬಂದಿಗಳಾದ ಪ್ರಭಾಕರ, ಇರ್ಫಾನ್, ಎಎಸ್‌ಐ ಪುಟ್ಟನಾಯಕ, ರಾಜೇಗೌಡ ಮತ್ತು ಎಸ್.ಬಿ ಕರ್ತವ್ಯದ ಸಿಬ್ಬಂದಿ ಪ್ರಸಾದ್ ಇದ್ದರೆಂದು ಇನ್ಸ್ ಪೆಕ್ಟರ್ ಶ್ರೀನಿವಾಸ್ ಉದಯವಾಣಿಗೆ ತಿಳಿಸಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.