
ಹುಣಸೂರು : ನಾಲೆಗೆ ಈಜಲು ಹೋದ ಯುವಕ ನೀರುಪಾಲು
Team Udayavani, Sep 19, 2022, 8:06 AM IST

ಹುಣಸೂರು : ವರುಣಾ ನಾಲೆಯಲ್ಲಿ ಈಜಲು ಹೋದ ಯುವಕನೊರ್ವ ನೀರುಪಾಲಾಗಿರುವ ಘಟನೆ ರವಿವಾರ ಸಂಭವಿಸಿದೆ.
ಹುಣಸುಇರು ತಾಲೂಕು ಬಿಳಿಕೆರೆ ಹೋಬಳಿಯ ಹಂದನಹಳ್ಳಿಯ ಅಭಿಷೇಕ್ (24) ಸಾವನ್ನಪ್ಪಿದ ದುರ್ದೈವಿ.
ಎಪಿಎಂಸಿಯಲ್ಲಿ ತರಕಾರಿ ವ್ಯಾಪಾರಿಯಾಗಿರುವ ಅಭಿಷೇಕ್ ವರುಣಾ ನಾಲೆ ಬಳಿಯ ತಮ್ಮ ಜಮೀನು ನೋಡಿಕೊಂಡು ಬರಲು ತೆರಳಿದ್ದಾರೆ. ಈ ವೇಳೆ ಅಲ್ಲೇ ಇದ್ದ ನಾಲೆಯಲ್ಲಿ ಈಜಲು ನೀರಿಗಿಳಿದಿದ್ದಾರೆ, ನಾಲೆಯಲ್ಲಿ ನೀರಿನ ಸೆಳೆತ ಹೆಚ್ಚಾಗಿದ್ದ ಪರಿಣಾಮ ಕೊಚ್ಚಿ ಹೋಗಿದ್ದಾರೆ.
ಯುವಕನ ಕೂಗಾಟ ಕೇಳಿದ ಅಕ್ಕಪಕ್ಕದ ಜಮೀನಿನವರು ಧಾವಿಸಿದರಾದರೂ ಅಭಿಷೇಕ್ ನೀರಿನಲ್ಲಿ ಮುಳುಗಿದ್ದ.
ತಕ್ಷಣವೇ ಈಜುಗಾರರು ನೀರಿಗಿಳಿದು ಹುಡುಕಾಟ ನಡೆಸಿದರೂ ಪತ್ತೆಯಾಗಲಿಲ್ಲ. ತಡರಾತ್ರಿ ಅಭಿಷೇಕ್ ಶವ ಪತ್ತೆಯಾಗಿದೆ.
ಇದನ್ನೂ ಓದಿ : ನೇರ ತೆರಿಗೆ ಸಂಗ್ರಹ ಶೇ.23ರಷ್ಟು ಹೆಚ್ಚಳ: ಪ್ರಸಕ್ತ ವರ್ಷದಲ್ಲಿ 7 ಲಕ್ಷ ಕೋಟಿ ರೂ. ಸಂಗ್ರಹ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಂದೇ ತಾಯಿ ಮಕ್ಕಳಂತಿದ್ದೇವೆ; ಭಿನ್ನಮತ ಇಲ್ಲ: ಬೆಳಗಾವಿಯಲ್ಲಿ ಬಿಎಸ್ ವೈ ಸ್ಪಷ್ಟನೆ

ಗೌಡರನ್ನು ಎಳೆದು ತರಬೇಡಿ: ಎಚ್.ಡಿ.ಕುಮಾರಸ್ವಾಮಿ

ಕ್ಷೇತ್ರದ ಜನತೆಯ ಎದುರು ಜನ್ಮದಿನ ಆಚರಿಸಿಕೊಳ್ಳುತ್ತಿರುವುದು ಚಿರಸ್ಮರಣೀಯ : ಸಿಎಂ ಬೊಮ್ಮಾಯಿ

ನಾಪತ್ತೆಯಾದ ಮಹಿಳೆ… ಅವಮಾನ ತಾಳಲಾರದೆ ಯುವಕ ನೇಣಿಗೆ ಶರಣು

ಸಿದ್ದರಾಮಯ್ಯ ಅವರಿಗೆ ಕೋಲಾರ, ವರುಣಾ ಎರಡೂ ಕ್ಷೇತ್ರಗಳು ಸೇಫ್; ಸತೀಶ ಜಾರಕಿಹೊಳಿ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
