ಹುಣಸೂರು : ನಾಲೆಗೆ ಈಜಲು ಹೋದ ಯುವಕ ನೀರುಪಾಲು
Team Udayavani, Sep 19, 2022, 8:06 AM IST
ಹುಣಸೂರು : ವರುಣಾ ನಾಲೆಯಲ್ಲಿ ಈಜಲು ಹೋದ ಯುವಕನೊರ್ವ ನೀರುಪಾಲಾಗಿರುವ ಘಟನೆ ರವಿವಾರ ಸಂಭವಿಸಿದೆ.
ಹುಣಸುಇರು ತಾಲೂಕು ಬಿಳಿಕೆರೆ ಹೋಬಳಿಯ ಹಂದನಹಳ್ಳಿಯ ಅಭಿಷೇಕ್ (24) ಸಾವನ್ನಪ್ಪಿದ ದುರ್ದೈವಿ.
ಎಪಿಎಂಸಿಯಲ್ಲಿ ತರಕಾರಿ ವ್ಯಾಪಾರಿಯಾಗಿರುವ ಅಭಿಷೇಕ್ ವರುಣಾ ನಾಲೆ ಬಳಿಯ ತಮ್ಮ ಜಮೀನು ನೋಡಿಕೊಂಡು ಬರಲು ತೆರಳಿದ್ದಾರೆ. ಈ ವೇಳೆ ಅಲ್ಲೇ ಇದ್ದ ನಾಲೆಯಲ್ಲಿ ಈಜಲು ನೀರಿಗಿಳಿದಿದ್ದಾರೆ, ನಾಲೆಯಲ್ಲಿ ನೀರಿನ ಸೆಳೆತ ಹೆಚ್ಚಾಗಿದ್ದ ಪರಿಣಾಮ ಕೊಚ್ಚಿ ಹೋಗಿದ್ದಾರೆ.
ಯುವಕನ ಕೂಗಾಟ ಕೇಳಿದ ಅಕ್ಕಪಕ್ಕದ ಜಮೀನಿನವರು ಧಾವಿಸಿದರಾದರೂ ಅಭಿಷೇಕ್ ನೀರಿನಲ್ಲಿ ಮುಳುಗಿದ್ದ.
ತಕ್ಷಣವೇ ಈಜುಗಾರರು ನೀರಿಗಿಳಿದು ಹುಡುಕಾಟ ನಡೆಸಿದರೂ ಪತ್ತೆಯಾಗಲಿಲ್ಲ. ತಡರಾತ್ರಿ ಅಭಿಷೇಕ್ ಶವ ಪತ್ತೆಯಾಗಿದೆ.
ಇದನ್ನೂ ಓದಿ : ನೇರ ತೆರಿಗೆ ಸಂಗ್ರಹ ಶೇ.23ರಷ್ಟು ಹೆಚ್ಚಳ: ಪ್ರಸಕ್ತ ವರ್ಷದಲ್ಲಿ 7 ಲಕ್ಷ ಕೋಟಿ ರೂ. ಸಂಗ್ರಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ