ಚಾಕೊಲೇಟ್ ಅಸೆ ತೋರಿಸಿ ಬಾಲಕಿಯ ಅತ್ಯಾಚಾರಕ್ಕೆ ವಿಫಲ ಯತ್ನ : ಆರೋಪಿಗೆ ಗ್ರಾಮಸರಿಂದ ಧರ್ಮದೇಟು
Team Udayavani, May 3, 2022, 8:17 PM IST
ಹುಣಸೂರು : ಚಾಕೊಲೇಟ್ ಕೊಡಿಸುವ ಆಸೆ ತೋರಿಸಿ 7 ವರ್ಷದ ಬಾಲೆಯ ಮೇಲೆ ಅತ್ಯಾಚಾರ ನಡೆಸಲು ವಿಫಲ ಯತ್ನ ನಡೆಸಿದ ವ್ಯಕ್ತಿಯನ್ನು ಗ್ರಾಮಸ್ಥರೇ ಕಂಬಕ್ಕೆ ಕಟ್ಟಿ ಹಾಕಿ ಧರ್ಮದೇಟು ನೀಡಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ತಾಲೂಕಿನ ಬಿಳಿಕೆರೆ ಹೋಬಳಿ ಚಲ್ಲಹಳ್ಳಿ ಗ್ರಾಮದ ತಿಪ್ಪೂರು ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನದ ವೇಳೆ ಘಟನೆ ನಡೆದಿದ್ದು, ಪಕ್ಕದ ಹೊಸಪುರ ಗ್ರಾಮದ ಮಧ್ಯ ವಯಸ್ಕ ಕಾಳನಾಯ್ಕ ಅತ್ಯಾಚಾರವೆಸಲು ಯತ್ನಿಸಿದ ಕಾಮುಕನಾಗಿದ್ದಾನೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಮಟಮಟ ಮಧ್ಯಾಹ್ನದ ವೇಳೆ ಮನೆಯ ಮುಂದೆ ಒಂಟಿಯಾಗಿ ಆಟವಾಡುತ್ತಿದ್ದ ಮಗುವನ್ನು ಚಾಕೊಲೇಟ್ ಕೊಡಿಸುತ್ತೇನೆಂದು ಪುಸಲಾಯಿಸಿ, ಊರಹೊರಗಿನ ಜಮೀನಿನಲ್ಲಿ ಹಾಕಿದ್ದ ಹುಲ್ಲಿನ ಮೆದೆಯ ಬಳಿ ಕರೆದೊಯ್ದು ಅತ್ಯಾಚಾರ ನಡೆಸಲು ಯತ್ನಿಸಿದ ವೇಳೆ ಮಗು ಆರೋಪಿಯ ಕೈಕಚ್ಚಿ ತಪ್ಪಿಸಿಕೊಂಡು ಓಡಿಹೋಗಿ ಅಜ್ಜಿಯ ಬಳಿ ಹೇಳಿದೆ. ಕೂಡಲೇ ಅಜ್ಜಿ ಊರವರಿಗೆ ತಿಳಿಸಿದಾಗ, ಆರೋಪಿ ನಾಡಪ್ಪನಹಳ್ಳಿಯ ಕೆರೆಯಬಳಿ ಸಾಗುತ್ತಿದ್ದ ವೇಳೆ ಹಿಡಿದು ಊರಿಗೆ ಕರೆತಂದು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿ ಹಣ್ಣು ಗಾಯಿ ನೀರುಗಾಯಿ ಮಾಡಿದ್ದಾರೆ. ನಂತರ ಬಿಳಿಕೆರೆ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಮಗು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿದ್ದಾಳೆಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಶ್ಮಿ ಪತ್ರಿಕೆಗೆ ತಿಳಿಸಿದರು.
ಇದನ್ನೂ ಓದಿ : ಒಲಂಪಿಕ್ ಕ್ರೀಡೆಯಲ್ಲಿ ಭಾಗಿಯಾಗಿ ಚಿನ್ನ ಗೆದ್ದು ಬನ್ನಿ.. :ಕ್ರೀಡಾಪಟುಗಳಿಗೆ ಅಮಿತ್ ಶಾ ಕರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್ಪಾಲ್
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.
Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್, ಸುಜೀತ್