ಹುಣಸೂರು: ವರುಣನ ರುದ್ರ ನರ್ತನ, ನಲುಗಿದ ಬೆಳೆಗಳು-ಮುಳುಗಿದ ಮನೆಗಳು


Team Udayavani, Oct 17, 2022, 8:11 AM IST

ಹುಣಸೂರು: ವರುಣನ ರುದ್ರ ನರ್ತನ, ನಲುಗಿದ ಬೆಳೆಗಳು-ಮುಳುಗಿದ ಮನೆಗಳು

ಹುಣಸೂರು: ಹುಣಸೂರು ತಾಲೂಕಿನಾದ್ಯಂತ ಮುಂದುವರೆದ ಮಳೆಯ ರೌದ್ರನರ್ತನ, ಕೆರೆ-ಕಟ್ಟೆಗಳು ಕೋಡಿ ಬಿದ್ದು ಕೊಚ್ಚಿ ಹೋದ ಬೆಳೆಗಳು, ಜಮೀನು,ತೋಟಕ್ಕೆ ನುಗ್ಗಿದ ಪ್ರವಾಹದ ನೀರು, ಕೊಚ್ಚಿಹೋದ ಸಾಮಗ್ರಿಗಳು, ನಗರದ ವಿವಿಧ ಬಡಾವಣೆಗಳ 200ಕ್ಕೂ ಹೆಚ್ಚಿ ಮನೆಗಳು ಜಲಾವೃತ, ರಾತ್ರಿ ಇಡೀ ಜಾಗರಣೆ ಮಾಡಿದ ನಿವಾಸಿಗಳು.

ಕಳೆದೊಂದು ವಾರದಿಂದ ನಿತ್ಯ ರಾತ್ರಿ ಸುರಿಯುತ್ತಿದ್ದ ಮಳೆ ನಗರದಲ್ಲಿ ಸಾಕಷ್ಟು ಹಾನಿಮಾಡಿತ್ತು, ಶನಿವಾರ ರಾತ್ರಿ 10ರ ವೇಳೆಗೆ ಆರಂಭವಾದ ಮಳೆ ಮದ್ಯರಾತ್ರಿ ಗುಡುಗು, ಸಿಡಿಲಿನೊಂದಿಗೆ ಒಂದೇ ಸಮನೆ ಸುರಿಯತೊಡಗಿದ್ದರಿಂದ ನಗರದ ಮಳ್ಳಮ್ಮನಕಟ್ಟೆ ಕೆಳಭಾಗದ ಮಂಜುನಾಥ, ಸಾಕೇತ, ನ್ಯೂ ಮಾರುತಿ ಬಡಾವಣೆಯಲ್ಲಿ ಎಂದಿನಂತೆ ಮಳೆ ನೀರು ನುಗ್ಗಿ ಸಾಕಷ್ಟು ಅನಾಹುತ ಸೃಷ್ಟಿಸಿತ್ತು. ರಾತ್ರಿಯಿಡೀ ಮನೆಗಳವರು ನೀರನ್ನು ಹೊರ ಹಾಕಿದರು ಬೆಳಗ್ಗೆ ನಂತರ ನೀರಿನ ಹರಿವು ಕಡಿಮೆಯಾಯಿತು.

ವೃದ್ದರು, ಮಕ್ಕಳನ್ನು ರಕ್ಷಿಸಿದ ನಿವಾಸಿಗಳು:

ಮದ್ಯರಾತ್ರಿವೇಳೆಗೆ ಹೌಸಿಂಗ್ ಬೋಡ್ ಮೇಲಿನ ಅಯ್ಯಪ್ಪಸ್ವಾಮಿ ಬೆಟ್ಟದ ತಪ್ಪಲಿನ ಕಟ್ಟೆ ತುಂಬಿ ಗುರುಗಳ ಕಟ್ಟೆಗೆ ಸಾಕಷ್ಟು ನೀರು ಹರಿದು ಬಂದಿದ್ದರಿಂದ ಕಟ್ಟೆಯಿಂದ ಒಮ್ಮೆಲೆ ಬಾರೀ ಪ್ರಮಾಣ ನೀರು ಜೊತೆಗೆ ಕಟ್ಟೆಲ್ಲಿ ಬೆಳೆದಿದ್ದ ಅಂತರಗಂಗೆ ನೀರಿನೊಂದಿಗೆ ಹರಿದು ಬಂದು ಹೌಸಿಂಗ್ ಬೋರ್ಡ್ ಕಾಲೋನಿಯ ಚರಂಡಿಗಳಲ್ಲಿ ತುಂಬಿಕೊಂಡಿದ್ದರಿಂದ ನೀರು ಸರಾಗವಾಗಿ ಹರಿಯಲಾರದೆ ಇ.ಡಬ್ಲ್ಯೂ.ಎಸ್, ಎಲ್.ಐ.ಜಿ.ಮನೆಗಳತ್ತ ಒಮ್ಮೆಲೆ ನೀರು ನಿಗ್ಗಿದ್ದರಿಂದ ಮನೆಯೊಳಗಿದ್ದವರಿಗೆ ಏನಾಗುತ್ತಿದೆ ಎಂಬುದು ತಿಳಿಯುವಷ್ಟರಲ್ಲಾಗಲೇ ಎದೆ ಮಟ್ಟದ ನೀರು ತುಂಬಿಕೊಂಡಿತ್ತು, ವೃದ್ದರು, ಬಾಣಂತಿಯರು, ಕಾಯಿಲೆ ಯುಳ್ಳುವರನ್ನು ಬಡಾವಣೆ ನಿವಾದಿಗಳು ಮನೆ ಬಾಗಿಲು ಒಡೆದು ಹೊರಕ್ಕೆ ಕರೆತಂದರು, ಅಷ್ಟರಲ್ಲಾಗಲೆ ಮನೆಯೊಳಗಿದ್ದ ದವಸ ಧಾನ್ಯ, ಪಾತ್ರೆ, ಟಿ.ವಿ, ಶಾಲಾ ಪುಸ್ತಕಗಳು ಮತ್ತಿತರ ಬೆಲೆ ಬಾಳುವ ಸಾಮಗ್ರಿಗಳು ಸಹ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿ ದೊಡ್ಡ ಮೋರಿಯಲ್ಲಿ ಸಿಲುಕಿಕೊಂಡಿತ್ತು, ನೀರಿನ ವೇಗಕ್ಕೆ ಮನೆ ಕಾಂಪೌಂಡ್ ಬಿದ್ದು ಹೋಗಿ ಚರಂಡಿ ಬಂದ್ ಆಗಿದ್ದರಿಂದ ಮೇಲ್ಬಾಗದ ಮನೆಗಳಿಗೂ ನೀರು ತುಂಬಿಕೊಂಡು ಪರದಾಡಿದರು. ಹನಗೋಡು ಕ್ರಾಸ್ ಬಳಿ ಮರವೊಂದು ರಸ್ತೆಗೆ ಉರುಳಿ ಬಿದ್ದಿದ್ದರಿಂದ ಭಾನುವಾರ ಮದ್ಯಾಹ್ನದ ವರೆಗೆ ಸಂಚಾರ ಬಂದ್ ಆಗಿತ್ತು ಒಮ್ಮೆಲೆ ಮಳೆ ನೀರು ನುಗ್ಗಿದ್ದರಿಂದ ಹೌಸಿಂಗ್ ಬೋರ್ಡ್ ಕಾಲೋನಿಯ ಅನೇಕ ಮನೆಗಳ, ಶೈಕ್ಷಣಿಕ ದಾಖಲಾತಿಗಳು ನಾಶವಾಗಿದೆ.

10 ಟ್ರಾಕ್ಟರ್ ಅಂತರಗಂಗೆ :
ಮುಂಜಾನೆಯೇ ನಗರಸಭೆ ಅಧ್ಯಕ್ಷೆ ಗೀತಾ, ಸದಸ್ಯರಾದ ಸ್ವಾಮಿಗೌಡ, ಅನುಷಾ, ದೇವನಾಯ್ಕ ರವರುಗಳ ನೇತೃತ್ವದಲ್ಲಿ ಪೌರಕಾರ್ಮಿಕರು ಗುರುಗಳಕಟ್ಟೆಯಿಂದ ಪ್ರವಾಹದ ನೀರಿನೊಂದಿಗೆ ಹರಿದು ಬಂದು ಹೌಸಿಂಗ್‌ಬೋರ್ಡ್ನ ಚರಂಡಿಗಳಲ್ಲಿ ಸಿಲುಕಿಕೊಂಡಿದ್ದ ಸುಮಾರು ಹತ್ತು ಟ್ರಾಕ್ಟರ್‌ನಷ್ಟು ಅಂತರಗಂಗೆ ಗಿಡಗಳನ್ನು ತೆರವುಗೊಳಿಸಿದ ನಂತರವಷ್ಟೆ ನೀರು ಹರಿದು ಬಡಾವಣೆಗಳವರು ನಿಟ್ಟುಸಿರು ಬಿಟ್ಟರು.

ಒತ್ತುವರಿ ತೆರವಾಗಲಿ ನಿವಾಸಿಗಳ ಮನವಿ:
ವಳ್ಳಿಯಮ್ಮನಕಟ್ಟೆ ಹಾಗೂ ಗುರುಗಳ ಕಟ್ಟೆ ಸುತ್ತಮುತ್ತ ಒತ್ತುವರಿ ಮಾಡಿಕೊಂಡಿದ್ದರಿಂದಾಗಿ ನೀರು ಬಡಾವಣೆಗಳತ್ತ ನುಗ್ಗುತ್ತಿದ್ದು, ಒತ್ತುವರಿಯನ್ನು ತೆರವುಗೊಳಿಸುವಂತೆ ಹಾಗೂ ವ್ಯವಸ್ಥಿತವಾಗಿ ಚರಂಡಿ ನಿರ್ಮಿಸಿಕೊಡಲು ನಿವಾಸಿಗಳು ಶಾಸಕ ಮಂಜುನಾಥ್, ಜಿಲ್ಲಾಧಿಕಾರಿ ಡಾ. ಬಗಾಧಿಗೌತಮ್‌ರಲ್ಲಿ ಮನವಿ ಮಾಡಿಕೊಂಡರು.

ಜಿಲ್ಲಾಧಿಕಾರಿ ಸೂಚನೆ:
ಮಳೆ ಹಾನಿಗೊಳಗಾಗಿರುವ ಸಾಕೇತ, ಮಂಜುನಾಥ, ನ್ಯೂ ಮಾರುತಿ ಬಡಾವಣೆ, ಹೌಸಿಂಗ್ ಬೋರ್ಡ್ ಕಾಲೋನಿ, ಗುರಗಳಕಟ್ಟೆ, ವಳ್ಳಮ್ಮನಕಟ್ಟೆ ಪ್ರದೇಶಕ್ಕೆ ಶಾಸಕ ಮಂಜುನಾಥ್ ಹಾಗೂ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ.ಬಗಾಧಿಗೌತಮ್ ಅಕ್ರಮ ಬಡಾವಣೆ ನಿರ್ಮಾಣವಾಗಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ, ಬಡಾವಣೆ ನಿರ್ಮಾತೃಗಳ ವಿರುದ್ದ ಕ್ರಮ ಕೈಗೊಂಡಿಲ್ಲವೇಕೆಂದು ಹುಡಾ ಸದಸ್ಯಕಾರ್ಯದರ್ಶಿ ಶ್ರೀಧರ್‌ರನ್ನು ಪ್ರಶ್ನಿಸಿ, ವಳ್ಳಮ್ಮನಕಟ್ಟೆಯಿಂದ ಸರಾಗವಾಗಿ ನೀರು ಹರಿದು ಹೋಗಲು ಅಗತ್ಯವಿರುವೆಡೆ ಚರಂಡಿ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಬೇಕು, ಡೆವಲಪರ್ಸ್ಗಳು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ತಹಸೀಲ್ದಾರ್, ಪೌರಾಯುಕ್ತರಿಗೆ ಸೂಚಿಸಿ, ನಿವೇಶನ ಮಾಲಿಕರ ಮನವೊಲಿಸಿ, ಚರಂಡಿ ನಿರ್ಮಿಸಲು ಬೇಕಿರುವ ನಿವೇಶನವನ್ನು ವಶಪಡಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಉಪ ವಿಭಾಗಾಧಿಕಾರಿಗೆ ಸೂಚಿಸಿದರು.

ಇದನ್ನೂ ಓದಿ : ಪಾಕ್ ಡ್ರೋನ್ ಹೊಡೆದುರುಳಿಸಿದ ಗಡಿ ಭದ್ರತಾ ಪಡೆ: ಕಳೆದ ಮೂರು ದಿನದಲ್ಲಿ ನಡೆದ ಎರಡನೇ ಘಟನೆ

ಸಂತ್ರಸ್ತರ ಪ್ರತಿಭಟನೆ: ತಾಲೂಕಿನ ಕಟ್ಟೆಮಳಲವಾಡಿಯ ಶಿಲುಬೆಗೆರೆ ನೀರು ನಂದಿ ಸರ್ಕಲ್ ಬಳಿಯ ಮನೆಗಳಿಗೆ ನುಗ್ಗಿದ್ದು, ಅಲ್ಲಿಯೂ ಸಾಕಷ್ಟು ಹಾನಿಯಾಗಿದೆ, ಇನ್ನು ಯಶೋಧರಪುರ ಕೆರೆ ಕೋಡಿ ಬಿದ್ದು ಹರಿದಿದ್ದರಿಂದ ನಿಲುವಾಗಿಲು ಗ್ರಾಮದ ರಸ್ತೆ ಬದಿಯ ಮನೆಗಳಿಗೆ ನೀರು ನುಗ್ಗಿತ್ತಲ್ಲದೆ ನಿಲುವಾಗಿಲು ಕ್ರಾಸ್‌ನ ತೋಟದ ಮೂಲಕ ಲಕ್ಷ್ಮಣತೀರ್ಥ ನದಿಗೆ ಬಾರೀ ಪ್ರಮಾಣ ನೀರು ಭಾನುವಾರ ಸಂಜೆ ವರೆಗೂ ಹರಿದಿತ್ತು. ಪ್ರತಿವರ್ಷದ ಮಳೆಗೆ ನಿಲುವಾಗಿಲಿನಲ್ಲಿ ಅವಾಂತರ ಸೃಷ್ಟಿಯಾಗುವುದರಿಂದ ಸಂತ್ರಸ್ತರು ಹನಗೋಡು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ವಿಷಯ ತಿಳಿದ ಶಾಸಕ ಮಂಜುನಾಥ್ ತಹಸೀಲ್ದಾರೊಡಗೂಡಿ ಸ್ಥಳಕ್ಕಾಗಮಿಸಿ ಪ್ರತಿಭಟನಾಕಾರರ ಮನವೊಲಿಸಿದ ನಂತರ ಪ್ರತಿಭಟನೆ ಹಿಂಪಡೆದರು. ತುರ್ತಾಗಿ ಅಗತ್ಯ ಕಾಮಗಾರಿ ನಡೆಸುವಂತೆ ಲೋಕೋಪಯೋಗಿ ಹಾಗೂ ಗ್ರಾ.ಪಂ.ನವರಿಗೆ ಸೂಚಿಸಿದರು.

ಈ ವೇಳೆ ಉಪ ವಿಭಾಗಾಧಿಕಾರಿ ವರ್ಣಿತ್‌ನೇಗಿ, ತಹಸೀಲ್ದಾರ್ ಲೆಪ್ಟಿನೆಂಟ್ ಡಾ.ಅಶೋಕ್, ಆರ್.ಐ. ನಂದೀಶ್, ಸರ್ವೆಯರ್ ಚಿಕ್ಕಸ್ವಾಮಿ, ನಗರಸಭೆ
ಅಧ್ಯಕ್ಷೆ ಗೀತಾ, ಸದಸ್ಯೆ ರಾಧಾ, ರಮೇಶ, ಕೋಳಿಮಂಜು, ಪೌರಾಯುಕ್ತೆ ರೂಪಾ, ಎಇಇ ಶರ್ಮಿಳಾ, ಮುಖಂಡರಾದ ರಾಘು, ಮಂಜುನಾಥ್ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.