
ಹುಣಸೂರು: ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಕುರಿಯನ್ನೇ ತಿಂದು ಹಾಕಿದ ಚಿರತೆ
Team Udayavani, Feb 26, 2023, 4:41 PM IST

ಹುಣಸೂರು: ರೈತನೋರ್ವ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕುರಿಗಳ ಮೇಲೆ ಚಿರತೆ ದಾಳಿ ಮಾಡಿ ತಿಂದು ಹಾಕಿ ಹೋಗಿರುವ ಘಟನೆ ಹುಣಸೂರು ತಾಲೂಕಿನ ಹಿರೀಕ್ಯಾತನಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ಗ್ರಾಮದ ಊರ ಕುಪ್ಪೆ ಬಡಾವಣೆಯ ದೇವರಾಜು ಎಂಬುವರಿಗೆ ಸೇರಿದ ಕುರಿಗಳನ್ನು ತನ್ನ ಜಮೀನಿನಲ್ಲಿರುವ ಮನೆಯ ಹಿಂಭಾಗದ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿತ್ತು ಮಧ್ಯರಾತ್ರಿ ಚಿರತೆಯನ್ನ ಕಂಡ ನಾಯಿಗಳು ಬೊಗಳುತ್ತಿರುವ ಶಬ್ದಕ್ಕೆ ಎದ್ದು ರೈತ ಕಿಟಕಿಯಿಂದ ನೋಡಿದಾಗ ಚಿರತೆ ಕುರಿಯನ್ನು ತಿನ್ನುತ್ತಿರುವುದನ್ನು ಕಂಡು ಗಾಬರಿಗೊಂಡ ರೈತ ಹೊರ ಬರಲಿಲ್ಲ ಒಟ್ಟು ಎರಡು ಕುರಿಗಳಲ್ಲಿ ಒಂದು ಕುರಿಯನ್ನು ತಿಂದು ಮತ್ತೊಂದು ಕುರಿಗೆ ಗಾಯಗೊಳಿಸಿದೆ ಬೆಳಿಗ್ಗೆ ಅರಣ್ಯ ಇಲಾಖೆಗೆ ವಿಷಯ ತಿಳಿಸಿದ ತಕ್ಷಣ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆಗಮಿಸಿ ಸ್ಥಳ ಮಹಾಜರು ಮಾಡಿಕೊಂಡು ನಂತರಪಶುವೈದ್ಯಾಧಿಕಾರಿಗಳಿಂದ ಕುರಿಯ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಹಿಂದೆಯೂ ಇದೇ ರೀತಿ ಮನೆಯಲ್ಲಿ ಸಾಕಿದ ನಾಯಿಗಳನ್ನು ಒತ್ತೊಯ್ದಿರುವ ಘಟನೆ ನಡೆದಿದೆ ಹಲವಾರು ತಿಂಗಳುಗಳಿಂದ ಇದೇ ರೀತಿ ಬಡಾವಣೆಯಲ್ಲಿ ಸಾಕು ನಾಯಿಗಳನ್ನು ಹೊತ್ತೊಯ್ತಿದೆ ಆದ್ದರಿಂದ ಅರಣ್ಯ ಇಲಾಖೆಯವರು ಬೋನಿಟ್ಟು ಚಿರತೆ ಸೆರೆ ಹಿಡಿಯುವಂತೆ ರೈತರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಆರ್ಥಿಕ ಸಂಕಷ್ಟ; ಪಾಕಿಸ್ತಾನದ ಆಸ್ಪತ್ರೆಗಳಲ್ಲಿ ಇನ್ಸುಲಿನ್, ಡಿಸ್ಪ್ರಿನ್ ಔಷಧಿಗಳಿಗೂ ಕೊರತೆ!
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Congress ಜಗದೀಶ್ ಶೆಟ್ಟರ್ಗೆ ಆಪರೇಷನ್ ಹಸ್ತದ ಹೊಣೆ

Tomorrow ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದಿಲ್ಲಿಗೆ ?

JDS ಫ್ಯಾಮಿಲಿ ಟ್ರಸ್ಟ್; ಸಿಎಂ ಇಬ್ರಾಹಿಂ “ಭೂಗತ’: ಲಕ್ಷ್ಮಣ್ ವ್ಯಂಗ್ಯ

Cauvery issueತಮಿಳುನಾಡು ಸಿಎಂ ಭೇಟಿಗೆ 48 ತಾಸು ಕಾದು ಬರಿಗೈಯಲ್ಲಿ ಮರಳಿದ ಲೆಹರ್ ಸಿಂಗ್!
MUST WATCH
ಹೊಸ ಸೇರ್ಪಡೆ

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?